ಬ್ರೇಕಿಂಗ್ ನ್ಯೂಸ್
23-12-20 12:06 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ಕೃಷ್ಣ ಎಂದೇ ಖ್ಯಾತಿಗಳಿಸಿರುವ ನಟ ಅಜಯ್ ರಾವ್. ಕೃಷ್ಣನ ಸರಣಿಯ ಸಿನಿಮಾ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಅಜಯ್ ರಾವ್ ಇದೀಗ ಹೊಸ ಸಿನಿಮಾ ಅನೌನ್ಸ್ ಆಗಿದ್ದು, ಮತ್ತೆ ಕೃಷ್ಣನ ಅವತಾರ ಎತ್ತಲು ಸಜ್ಜಾಗಿದ್ದಾರಾ? ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಕೃಷ್ಣನ್ ಲವ್ ಸ್ಟೋರಿ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಕೃಷ್ಣ ಲೀಲಾ, ಕೃಷ್ಣ ರುಕ್ಕು, ಕೃಷ್ಣನ್ ಮ್ಯಾರೇಜ್ ಸ್ಟೋರಿ ಹೀಗೆ ಸಾಲು ಸಾಲು ಕೃಷ್ಣನ ಸರಣಿಗಳಲ್ಲಿ ಅಜಯ್ ರಾವ್ ನಟಿಸಿದ್ದಾರೆ. ಇದೀಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದು, ಚಿತ್ರಕ್ಕೆ ಶಶಾಂಕ್ ಕಥೆ ರಚಿಸಿದ್ದಾರೆ. ಶಶಾಂಕ್ ಮತ್ತು ಅಜಯ್ ರಾವ್ ಅವರದ್ದು ಹಿಟ್ ಜೋಡಿ. ಕೃಷ್ಣನ್ ಲವ್ ಸ್ಟೋರಿ ಮತ್ತು ಕೃಷ್ಣ ಲೀಲಾ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದು ಶಶಾಂಕ್. ಇದೀಗ ಮತ್ತೆ ಅಜಯ್ ರಾವ್ ಗೆ ಕಥೆ ಬರೆದಿದ್ದಾರೆ ಅಂದ್ಮೇಲೆ ಕೃಷ್ಣ ಸೀರಿಸ್ ಆಗಿರಲಿದೆ ಎನ್ನುವುದು ಚಿತ್ರಪ್ರಿಯರ ಲೆಕ್ಕಾಚಾರ.
ಅಂದಹಾಗೆ ಶಶಾಂಕ್ ಕಥೆ ಮಾತ್ರ ಬರೆದಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಬೇರೆಯವರಿಗೆ ವಹಿಸಿದ್ದಾರೆ. ಚಿತ್ರಕ್ಕೆ ಶಂಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೊದಲು ರಾಜಾ ಹುಲಿ, ಜಂಟಲ್ ಮ್ಯಾನ್ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಶಂಕರ್ ಇದೀಗ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಎಂಟ್ರಿ ಕೊಡುತ್ತಿದ್ದಾರೆ.

ನಿರ್ದೇಶಕ ಗುರುದೇಶಪಾಂಡೆ ಬ್ಯಾನರ್ ನಲ್ಲಿ ಸಿನಿಮಾ ಮೂಡಿಬರುತ್ತಿದೆ. ಹೊಸ ಸಿನಿಮಾ ಮುಹೂರ್ತ ಮುಂದಿನ ವರ್ಷ ಜನವರಿಯಲ್ಲಿ ನೆರವೇರಲಿದೆ. ಜನವರಿ 24ರಂದು ಮುಹೂರ್ತ ಮಾಡಿಕೊಳ್ಳುವ ಮೂಲಕ ಅಧಿಕೃತವಾಗಿ ಚಾಲನೆ ಸಿಗಲಿದೆ. ಇನ್ನು ಉಳಿದಂತೆ ಅಜಯ್ ರಾವ್ ಗೆ ನಾಯಕಿಯಾಗಿ ಟಾಪ್ ನಟಿಯೊಬ್ಬರು ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಯಾರು ಎನ್ನುವುದು ಬಹಿರಂಗವಾಗಿಲ್ಲ. ಸದ್ಯದಲ್ಲೇ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಲಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm