ಬ್ರೇಕಿಂಗ್ ನ್ಯೂಸ್
23-12-20 12:17 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಯಶಸ್ವಿ ನಟ ಆಯುಷ್ಮಾನ್ ಖುರಾನ ಇದೀಗ ಡಾಕ್ಟರ್ ಆಗಿದ್ದಾರೆ. ಅಂದಹಾಗೆ ಸಿನಿಮಾ ಬಿಟ್ಟು ವೈದ್ಯಕೀಯ ವೃತ್ತಿ ಆರಂಭಿಸಿದ್ರಾ ಅಂತ ಅಚ್ಚರಿ ಪಡಬೇಡಿ, ಆಯುಷ್ಮಾನ್ ಡಾಕ್ಟರ್ ಆಗಿದ್ದು ಸಿನಿಮಾದಲ್ಲಿ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಾ, ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುವ ಆಯುಷ್ಮಾನ್ ಬಾಲಿವುಡ್ ನ ಸ್ಟಾರ್ ನಟರ ಸಾಲಿನಲ್ಲಿದ್ದಾರೆ.
ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಆಯುಷ್ಮಾನ್ ಇದೀಗ ಡಾಕ್ಟರ್ ಆಗಿ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಹೌದು, ಆಯುಷ್ಮಾನ್ ಹೊಸ ಸಿನಿಮಾಗೆ 'ಡಾಕ್ಟರ್ ಜಿ' ಎಂದು ಟೈಟಲ್ ಇಡಲಾಗಿದೆ. ಡಾಕ್ಟರ್ ಜಿ ಕಾಮಿಡಿ ಸಿನಿಮಾವಾಗಿದೆ. ಈ ಬಗ್ಗೆ ಮಾತನಾಡಿರುವ ಆಯುಷ್ಮಾನ್, ಇದೊಂದು ಫ್ರೆಶ್ ಕಥೆಯಾಗಿದ್ದು, ತುಂಬಾ ಇಷ್ಟವಾಗಿದೆ. ಮೊದಲ ಬಾರಿಗೆ ಡಾಕ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದೀನಿ. ಈ ಸಿನಿಮಾದಲ್ಲಿ ನಟಿಸಲು ಸಖತ್ ಎಕ್ಸಾಯಿಟ್ ಆಗಿದ್ದೀನಿ ಎಂದು ಹೇಳಿದ್ದಾರೆ.
ವಿಶೇಷ ಎಂದರೆ ಚಿತ್ರಕ್ಕೆ ಅನುರಾಗ್ ಕಶ್ಯಪ್ ಸಹೋದರಿ ಅನುಭೂತಿ ಕಶ್ಯಪ್ ನಿರ್ದೇಶನ ಮಾಡುತ್ತಿದ್ದಾರೆ. ಹಲವು ಕಿರು ಸಿನಿಮಾಗಳನ್ನು ಮಾಡಿರುವ ಅನುಭೂತಿ ಕಶ್ಯಪ್ ಡಾಕ್ಟರ್ ಜಿ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕಿಯಾಗಿ ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.
ಜಂಗ್ಲಿ ಪಿಕ್ಟರ್ಸ್ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಈ ಹಿಂದೆ ಬರೇಲಿ ಕೀ ಬರ್ಫಿ, ಬದಾಯಿ ಹೋ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಈ ಸಂಸ್ಥೆ ಮತ್ತ ಆಯುಷ್ಮಾನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಸಿನಿಮಾ ಅನೌನ್ಸ್ ಮಾಡಿರುವ ಚಿತ್ರತಂಡ ಉಳಿದ ಪಾತ್ರ ವರ್ಗವನ್ನು ಸದ್ಯದಲ್ಲೇ ಬಹಿರಂಗ ಪಡಿಸಲಿದೆ. ಸಿನಿಮಾ ಮುಂದಿನ ವರ್ಷ ಸೆಟ್ಟೇರಲಿದೆ.
This News Article is a Copy of FILMIBEAT
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm