ಬ್ರೇಕಿಂಗ್ ನ್ಯೂಸ್
23-12-20 08:32 pm Headline Karnataka News Network ಸಿನಿಮಾ
ಬೆಂಗಳೂರು, ಡಿ.23: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರುತಿಸಿದ್ದ ಬಾಲಿವುಡ್ ಚಿತ್ರದಲ್ಲಿ ತೆರೆಗೆ ಬರಲು ಸಜ್ಜಾಗಿದ್ದಾರೆ.
ಬಾಲಿವುಡ್ ನಲ್ಲಿ ಸಂತನು ಬಗ್ಜಿ ನಿರ್ದೇಶನದಲ್ಲಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದ್ದು, ಬಾಲಿವುಡ್ ಸ್ಟಾರ್ ನಟ ಸಿದ್ದಾರ್ಥ ಮಲ್ಹೋತ್ರಾ ಜೊತೆಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ.
ಕನ್ನಡ, ತೆಲುಗು, ತಮಿಳಿನಲ್ಲಿ ಬಿಝಿಯಾಗಿದ್ದ ರಶ್ಮಿಕಾ ಬಾಲಿವುಡ್ ಚಿತ್ರದಲ್ಲಿ ಅಭಿನಯಿಸುವ ಕನಸು ಕಂಡಿದ್ದರು. ಆದರೆ, ಉತ್ತಮ ಚಿತ್ರಕತೆ ಇರುವ ಚಿತ್ರಕ್ಕಾಗಿ ಎದುರು ನೋಡುತ್ತಿದ್ದರು. ಇದೀಗ ಭಾರತದ ಗುಪ್ತಚರ ಸಂಸ್ಥೆ ರಾ, ಪಾಕಿಸ್ತಾನದ ನೆಲದಲ್ಲಿ ರಹಸ್ಯ ಕಾರ್ಯಾಚರಣೆ ನಡೆಸಿದ ನೈಜಕತೆ ಆಧರಿಸಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದೆ. ಉತ್ತಮ ಚಿತ್ರವೊಂದರ ಭಾಗವಾಗುತ್ತಿರುವುದಕ್ಕೆ ಸಂತಸವಾಗಿದ್ದು ತುಂಬ ಉತ್ಸುಕಳಾಗಿದ್ದೇನೆ ಎಂದು ಟ್ವೀಟ್ ಮೂಲಕ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ.
ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಅನ್ನು ರಶ್ಮಿಕಾ ಮತ್ತು ಸಿದ್ದಾರ್ಥ ಮಲ್ಹೋತ್ರಾ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿಯ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ರಶ್ಮಿಕಾ ಮಂದಣ್ಣ, ಆಬಳಿಕ ತಮಿಳು, ತೆಲುಗು ಚಿತ್ರಗಳಲ್ಲಿ ಬೇಡಿಕೆ ಕಂಡುಕೊಂಡಿದ್ದರು. ಈಗಾಗ್ಲೇ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದಲ್ಲಿ ರಶ್ಮಿಕಾ ಅಭಿನಯಿಸಿದ್ದು, ಇದರ ಒಂದು ಟೈಟಲ್ ಸಾಂಗ್ ಈಗಲೇ ಸದ್ದು ಮಾಡಿದೆ. ಇದೇ ವೇಳೆ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಪ್ರಮುಖ ತಾರೆಯರ ಜೊತೆ ಅಭಿನಯಿಸುತ್ತಿದ್ದು, 2021ರಲ್ಲಿ ರಶ್ಮಿಕಾ ಗ್ರಹಗತಿ ಇನ್ನಷ್ಟು ಮಿಂಚುವ ಸಾಧ್ಯತೆ ಕಂಡುಬಂದಿದೆ.
Sidharth Malhotra, on Wednesday, announced his new film Mission Majnu, which will also star Kannada actress Rashmika Mandanna in the lead role, marking her debut in Bollywood.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 04:14 pm
HK News Desk
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm