ಬ್ರೇಕಿಂಗ್ ನ್ಯೂಸ್
23-12-20 08:32 pm Headline Karnataka News Network ಸಿನಿಮಾ
ಬೆಂಗಳೂರು, ಡಿ.23: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರುತಿಸಿದ್ದ ಬಾಲಿವುಡ್ ಚಿತ್ರದಲ್ಲಿ ತೆರೆಗೆ ಬರಲು ಸಜ್ಜಾಗಿದ್ದಾರೆ.
ಬಾಲಿವುಡ್ ನಲ್ಲಿ ಸಂತನು ಬಗ್ಜಿ ನಿರ್ದೇಶನದಲ್ಲಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದ್ದು, ಬಾಲಿವುಡ್ ಸ್ಟಾರ್ ನಟ ಸಿದ್ದಾರ್ಥ ಮಲ್ಹೋತ್ರಾ ಜೊತೆಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ.
ಕನ್ನಡ, ತೆಲುಗು, ತಮಿಳಿನಲ್ಲಿ ಬಿಝಿಯಾಗಿದ್ದ ರಶ್ಮಿಕಾ ಬಾಲಿವುಡ್ ಚಿತ್ರದಲ್ಲಿ ಅಭಿನಯಿಸುವ ಕನಸು ಕಂಡಿದ್ದರು. ಆದರೆ, ಉತ್ತಮ ಚಿತ್ರಕತೆ ಇರುವ ಚಿತ್ರಕ್ಕಾಗಿ ಎದುರು ನೋಡುತ್ತಿದ್ದರು. ಇದೀಗ ಭಾರತದ ಗುಪ್ತಚರ ಸಂಸ್ಥೆ ರಾ, ಪಾಕಿಸ್ತಾನದ ನೆಲದಲ್ಲಿ ರಹಸ್ಯ ಕಾರ್ಯಾಚರಣೆ ನಡೆಸಿದ ನೈಜಕತೆ ಆಧರಿಸಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದೆ. ಉತ್ತಮ ಚಿತ್ರವೊಂದರ ಭಾಗವಾಗುತ್ತಿರುವುದಕ್ಕೆ ಸಂತಸವಾಗಿದ್ದು ತುಂಬ ಉತ್ಸುಕಳಾಗಿದ್ದೇನೆ ಎಂದು ಟ್ವೀಟ್ ಮೂಲಕ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ.

ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಅನ್ನು ರಶ್ಮಿಕಾ ಮತ್ತು ಸಿದ್ದಾರ್ಥ ಮಲ್ಹೋತ್ರಾ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿಯ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ರಶ್ಮಿಕಾ ಮಂದಣ್ಣ, ಆಬಳಿಕ ತಮಿಳು, ತೆಲುಗು ಚಿತ್ರಗಳಲ್ಲಿ ಬೇಡಿಕೆ ಕಂಡುಕೊಂಡಿದ್ದರು. ಈಗಾಗ್ಲೇ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದಲ್ಲಿ ರಶ್ಮಿಕಾ ಅಭಿನಯಿಸಿದ್ದು, ಇದರ ಒಂದು ಟೈಟಲ್ ಸಾಂಗ್ ಈಗಲೇ ಸದ್ದು ಮಾಡಿದೆ. ಇದೇ ವೇಳೆ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಪ್ರಮುಖ ತಾರೆಯರ ಜೊತೆ ಅಭಿನಯಿಸುತ್ತಿದ್ದು, 2021ರಲ್ಲಿ ರಶ್ಮಿಕಾ ಗ್ರಹಗತಿ ಇನ್ನಷ್ಟು ಮಿಂಚುವ ಸಾಧ್ಯತೆ ಕಂಡುಬಂದಿದೆ.
Sidharth Malhotra, on Wednesday, announced his new film Mission Majnu, which will also star Kannada actress Rashmika Mandanna in the lead role, marking her debut in Bollywood.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm