ಬ್ರೇಕಿಂಗ್ ನ್ಯೂಸ್
23-12-20 08:32 pm Headline Karnataka News Network ಸಿನಿಮಾ
ಬೆಂಗಳೂರು, ಡಿ.23: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರುತಿಸಿದ್ದ ಬಾಲಿವುಡ್ ಚಿತ್ರದಲ್ಲಿ ತೆರೆಗೆ ಬರಲು ಸಜ್ಜಾಗಿದ್ದಾರೆ.
ಬಾಲಿವುಡ್ ನಲ್ಲಿ ಸಂತನು ಬಗ್ಜಿ ನಿರ್ದೇಶನದಲ್ಲಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದ್ದು, ಬಾಲಿವುಡ್ ಸ್ಟಾರ್ ನಟ ಸಿದ್ದಾರ್ಥ ಮಲ್ಹೋತ್ರಾ ಜೊತೆಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ.
ಕನ್ನಡ, ತೆಲುಗು, ತಮಿಳಿನಲ್ಲಿ ಬಿಝಿಯಾಗಿದ್ದ ರಶ್ಮಿಕಾ ಬಾಲಿವುಡ್ ಚಿತ್ರದಲ್ಲಿ ಅಭಿನಯಿಸುವ ಕನಸು ಕಂಡಿದ್ದರು. ಆದರೆ, ಉತ್ತಮ ಚಿತ್ರಕತೆ ಇರುವ ಚಿತ್ರಕ್ಕಾಗಿ ಎದುರು ನೋಡುತ್ತಿದ್ದರು. ಇದೀಗ ಭಾರತದ ಗುಪ್ತಚರ ಸಂಸ್ಥೆ ರಾ, ಪಾಕಿಸ್ತಾನದ ನೆಲದಲ್ಲಿ ರಹಸ್ಯ ಕಾರ್ಯಾಚರಣೆ ನಡೆಸಿದ ನೈಜಕತೆ ಆಧರಿಸಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದೆ. ಉತ್ತಮ ಚಿತ್ರವೊಂದರ ಭಾಗವಾಗುತ್ತಿರುವುದಕ್ಕೆ ಸಂತಸವಾಗಿದ್ದು ತುಂಬ ಉತ್ಸುಕಳಾಗಿದ್ದೇನೆ ಎಂದು ಟ್ವೀಟ್ ಮೂಲಕ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ.

ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಅನ್ನು ರಶ್ಮಿಕಾ ಮತ್ತು ಸಿದ್ದಾರ್ಥ ಮಲ್ಹೋತ್ರಾ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿಯ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ರಶ್ಮಿಕಾ ಮಂದಣ್ಣ, ಆಬಳಿಕ ತಮಿಳು, ತೆಲುಗು ಚಿತ್ರಗಳಲ್ಲಿ ಬೇಡಿಕೆ ಕಂಡುಕೊಂಡಿದ್ದರು. ಈಗಾಗ್ಲೇ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದಲ್ಲಿ ರಶ್ಮಿಕಾ ಅಭಿನಯಿಸಿದ್ದು, ಇದರ ಒಂದು ಟೈಟಲ್ ಸಾಂಗ್ ಈಗಲೇ ಸದ್ದು ಮಾಡಿದೆ. ಇದೇ ವೇಳೆ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಪ್ರಮುಖ ತಾರೆಯರ ಜೊತೆ ಅಭಿನಯಿಸುತ್ತಿದ್ದು, 2021ರಲ್ಲಿ ರಶ್ಮಿಕಾ ಗ್ರಹಗತಿ ಇನ್ನಷ್ಟು ಮಿಂಚುವ ಸಾಧ್ಯತೆ ಕಂಡುಬಂದಿದೆ.
Sidharth Malhotra, on Wednesday, announced his new film Mission Majnu, which will also star Kannada actress Rashmika Mandanna in the lead role, marking her debut in Bollywood.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm