ಬ್ರೇಕಿಂಗ್ ನ್ಯೂಸ್
23-12-20 08:32 pm Headline Karnataka News Network ಸಿನಿಮಾ
ಬೆಂಗಳೂರು, ಡಿ.23: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರುತಿಸಿದ್ದ ಬಾಲಿವುಡ್ ಚಿತ್ರದಲ್ಲಿ ತೆರೆಗೆ ಬರಲು ಸಜ್ಜಾಗಿದ್ದಾರೆ.
ಬಾಲಿವುಡ್ ನಲ್ಲಿ ಸಂತನು ಬಗ್ಜಿ ನಿರ್ದೇಶನದಲ್ಲಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದ್ದು, ಬಾಲಿವುಡ್ ಸ್ಟಾರ್ ನಟ ಸಿದ್ದಾರ್ಥ ಮಲ್ಹೋತ್ರಾ ಜೊತೆಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ.
ಕನ್ನಡ, ತೆಲುಗು, ತಮಿಳಿನಲ್ಲಿ ಬಿಝಿಯಾಗಿದ್ದ ರಶ್ಮಿಕಾ ಬಾಲಿವುಡ್ ಚಿತ್ರದಲ್ಲಿ ಅಭಿನಯಿಸುವ ಕನಸು ಕಂಡಿದ್ದರು. ಆದರೆ, ಉತ್ತಮ ಚಿತ್ರಕತೆ ಇರುವ ಚಿತ್ರಕ್ಕಾಗಿ ಎದುರು ನೋಡುತ್ತಿದ್ದರು. ಇದೀಗ ಭಾರತದ ಗುಪ್ತಚರ ಸಂಸ್ಥೆ ರಾ, ಪಾಕಿಸ್ತಾನದ ನೆಲದಲ್ಲಿ ರಹಸ್ಯ ಕಾರ್ಯಾಚರಣೆ ನಡೆಸಿದ ನೈಜಕತೆ ಆಧರಿಸಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದೆ. ಉತ್ತಮ ಚಿತ್ರವೊಂದರ ಭಾಗವಾಗುತ್ತಿರುವುದಕ್ಕೆ ಸಂತಸವಾಗಿದ್ದು ತುಂಬ ಉತ್ಸುಕಳಾಗಿದ್ದೇನೆ ಎಂದು ಟ್ವೀಟ್ ಮೂಲಕ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ.

ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಅನ್ನು ರಶ್ಮಿಕಾ ಮತ್ತು ಸಿದ್ದಾರ್ಥ ಮಲ್ಹೋತ್ರಾ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿಯ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ರಶ್ಮಿಕಾ ಮಂದಣ್ಣ, ಆಬಳಿಕ ತಮಿಳು, ತೆಲುಗು ಚಿತ್ರಗಳಲ್ಲಿ ಬೇಡಿಕೆ ಕಂಡುಕೊಂಡಿದ್ದರು. ಈಗಾಗ್ಲೇ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದಲ್ಲಿ ರಶ್ಮಿಕಾ ಅಭಿನಯಿಸಿದ್ದು, ಇದರ ಒಂದು ಟೈಟಲ್ ಸಾಂಗ್ ಈಗಲೇ ಸದ್ದು ಮಾಡಿದೆ. ಇದೇ ವೇಳೆ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಪ್ರಮುಖ ತಾರೆಯರ ಜೊತೆ ಅಭಿನಯಿಸುತ್ತಿದ್ದು, 2021ರಲ್ಲಿ ರಶ್ಮಿಕಾ ಗ್ರಹಗತಿ ಇನ್ನಷ್ಟು ಮಿಂಚುವ ಸಾಧ್ಯತೆ ಕಂಡುಬಂದಿದೆ.
Sidharth Malhotra, on Wednesday, announced his new film Mission Majnu, which will also star Kannada actress Rashmika Mandanna in the lead role, marking her debut in Bollywood.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm