ಬ್ರೇಕಿಂಗ್ ನ್ಯೂಸ್
23-12-20 08:32 pm Headline Karnataka News Network ಸಿನಿಮಾ
ಬೆಂಗಳೂರು, ಡಿ.23: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರುತಿಸಿದ್ದ ಬಾಲಿವುಡ್ ಚಿತ್ರದಲ್ಲಿ ತೆರೆಗೆ ಬರಲು ಸಜ್ಜಾಗಿದ್ದಾರೆ.
ಬಾಲಿವುಡ್ ನಲ್ಲಿ ಸಂತನು ಬಗ್ಜಿ ನಿರ್ದೇಶನದಲ್ಲಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದ್ದು, ಬಾಲಿವುಡ್ ಸ್ಟಾರ್ ನಟ ಸಿದ್ದಾರ್ಥ ಮಲ್ಹೋತ್ರಾ ಜೊತೆಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ.
ಕನ್ನಡ, ತೆಲುಗು, ತಮಿಳಿನಲ್ಲಿ ಬಿಝಿಯಾಗಿದ್ದ ರಶ್ಮಿಕಾ ಬಾಲಿವುಡ್ ಚಿತ್ರದಲ್ಲಿ ಅಭಿನಯಿಸುವ ಕನಸು ಕಂಡಿದ್ದರು. ಆದರೆ, ಉತ್ತಮ ಚಿತ್ರಕತೆ ಇರುವ ಚಿತ್ರಕ್ಕಾಗಿ ಎದುರು ನೋಡುತ್ತಿದ್ದರು. ಇದೀಗ ಭಾರತದ ಗುಪ್ತಚರ ಸಂಸ್ಥೆ ರಾ, ಪಾಕಿಸ್ತಾನದ ನೆಲದಲ್ಲಿ ರಹಸ್ಯ ಕಾರ್ಯಾಚರಣೆ ನಡೆಸಿದ ನೈಜಕತೆ ಆಧರಿಸಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದೆ. ಉತ್ತಮ ಚಿತ್ರವೊಂದರ ಭಾಗವಾಗುತ್ತಿರುವುದಕ್ಕೆ ಸಂತಸವಾಗಿದ್ದು ತುಂಬ ಉತ್ಸುಕಳಾಗಿದ್ದೇನೆ ಎಂದು ಟ್ವೀಟ್ ಮೂಲಕ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ.

ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಅನ್ನು ರಶ್ಮಿಕಾ ಮತ್ತು ಸಿದ್ದಾರ್ಥ ಮಲ್ಹೋತ್ರಾ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿಯ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ರಶ್ಮಿಕಾ ಮಂದಣ್ಣ, ಆಬಳಿಕ ತಮಿಳು, ತೆಲುಗು ಚಿತ್ರಗಳಲ್ಲಿ ಬೇಡಿಕೆ ಕಂಡುಕೊಂಡಿದ್ದರು. ಈಗಾಗ್ಲೇ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದಲ್ಲಿ ರಶ್ಮಿಕಾ ಅಭಿನಯಿಸಿದ್ದು, ಇದರ ಒಂದು ಟೈಟಲ್ ಸಾಂಗ್ ಈಗಲೇ ಸದ್ದು ಮಾಡಿದೆ. ಇದೇ ವೇಳೆ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಪ್ರಮುಖ ತಾರೆಯರ ಜೊತೆ ಅಭಿನಯಿಸುತ್ತಿದ್ದು, 2021ರಲ್ಲಿ ರಶ್ಮಿಕಾ ಗ್ರಹಗತಿ ಇನ್ನಷ್ಟು ಮಿಂಚುವ ಸಾಧ್ಯತೆ ಕಂಡುಬಂದಿದೆ.
Sidharth Malhotra, on Wednesday, announced his new film Mission Majnu, which will also star Kannada actress Rashmika Mandanna in the lead role, marking her debut in Bollywood.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm