ಬ್ರೇಕಿಂಗ್ ನ್ಯೂಸ್
            
                        23-12-20 08:32 pm Headline Karnataka News Network ಸಿನಿಮಾ
            ಬೆಂಗಳೂರು, ಡಿ.23: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರುತಿಸಿದ್ದ ಬಾಲಿವುಡ್ ಚಿತ್ರದಲ್ಲಿ ತೆರೆಗೆ ಬರಲು ಸಜ್ಜಾಗಿದ್ದಾರೆ.
ಬಾಲಿವುಡ್ ನಲ್ಲಿ ಸಂತನು ಬಗ್ಜಿ ನಿರ್ದೇಶನದಲ್ಲಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದ್ದು, ಬಾಲಿವುಡ್ ಸ್ಟಾರ್ ನಟ ಸಿದ್ದಾರ್ಥ ಮಲ್ಹೋತ್ರಾ ಜೊತೆಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ.
ಕನ್ನಡ, ತೆಲುಗು, ತಮಿಳಿನಲ್ಲಿ ಬಿಝಿಯಾಗಿದ್ದ ರಶ್ಮಿಕಾ ಬಾಲಿವುಡ್ ಚಿತ್ರದಲ್ಲಿ ಅಭಿನಯಿಸುವ ಕನಸು ಕಂಡಿದ್ದರು. ಆದರೆ, ಉತ್ತಮ ಚಿತ್ರಕತೆ ಇರುವ ಚಿತ್ರಕ್ಕಾಗಿ ಎದುರು ನೋಡುತ್ತಿದ್ದರು. ಇದೀಗ ಭಾರತದ ಗುಪ್ತಚರ ಸಂಸ್ಥೆ ರಾ, ಪಾಕಿಸ್ತಾನದ ನೆಲದಲ್ಲಿ ರಹಸ್ಯ ಕಾರ್ಯಾಚರಣೆ ನಡೆಸಿದ ನೈಜಕತೆ ಆಧರಿಸಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದೆ. ಉತ್ತಮ ಚಿತ್ರವೊಂದರ ಭಾಗವಾಗುತ್ತಿರುವುದಕ್ಕೆ ಸಂತಸವಾಗಿದ್ದು ತುಂಬ ಉತ್ಸುಕಳಾಗಿದ್ದೇನೆ ಎಂದು ಟ್ವೀಟ್ ಮೂಲಕ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ.

ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಅನ್ನು ರಶ್ಮಿಕಾ ಮತ್ತು ಸಿದ್ದಾರ್ಥ ಮಲ್ಹೋತ್ರಾ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿಯ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ರಶ್ಮಿಕಾ ಮಂದಣ್ಣ, ಆಬಳಿಕ ತಮಿಳು, ತೆಲುಗು ಚಿತ್ರಗಳಲ್ಲಿ ಬೇಡಿಕೆ ಕಂಡುಕೊಂಡಿದ್ದರು. ಈಗಾಗ್ಲೇ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದಲ್ಲಿ ರಶ್ಮಿಕಾ ಅಭಿನಯಿಸಿದ್ದು, ಇದರ ಒಂದು ಟೈಟಲ್ ಸಾಂಗ್ ಈಗಲೇ ಸದ್ದು ಮಾಡಿದೆ. ಇದೇ ವೇಳೆ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಪ್ರಮುಖ ತಾರೆಯರ ಜೊತೆ ಅಭಿನಯಿಸುತ್ತಿದ್ದು, 2021ರಲ್ಲಿ ರಶ್ಮಿಕಾ ಗ್ರಹಗತಿ ಇನ್ನಷ್ಟು ಮಿಂಚುವ ಸಾಧ್ಯತೆ ಕಂಡುಬಂದಿದೆ.
            
            
            Sidharth Malhotra, on Wednesday, announced his new film Mission Majnu, which will also star Kannada actress Rashmika Mandanna in the lead role, marking her debut in Bollywood.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm