ಬ್ರೇಕಿಂಗ್ ನ್ಯೂಸ್
25-12-20 03:09 pm Source: vijaykarnataka ಸಿನಿಮಾ
ಹೈದರಾಬಾದ್, ಡಿ.25: ಕಳೆದ ಕೆಲವು ದಿನಗಳಿಂದ 'ಅಣ್ಣಾಥೆ' ಸಿನಿಮಾದ ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದ ನಟ ರಜನಿಕಾಂತ್ ಅವರಿಗೆ ತೀವ್ರ ರಕ್ತದೊತ್ತಡದ (ಬಿ.ಪಿ.) ಸಮಸ್ಯೆ ಎದುರಾಗಿದೆ. ಹಾಗಾಗಿ ಅವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ 'ತಲೈವಾ' ಆರೋಗ್ಯ ಹೇಗಿದೆ ಎಂಬ ಬಗ್ಗೆ ಆಸ್ಪತ್ರೆಯು ಹೇಳಿಕೆ ಬಿಡುಗಡೆ ಮಾಡಿದೆ.
ಬಹುನಿರೀಕ್ಷಿತ 'ಅಣ್ಣಾಥೆ' ಸಿನಿಮಾದ ಶೂಟಿಂಗ್ನಲ್ಲಿ ಭಾಗವಹಿಸಿದ್ದ ಕೆಲವರಿಗೆ ಇತ್ತೀಚೆಗಷ್ಟೇ ಕೊರೊನಾ ವೈರಸ್ ತಗುಲಿತ್ತು. ನಾಲ್ಕು ಜನರಿಗೆ ಪಾಸಿಟಿವ್ ವರದಿ ಬಂದ ಬಳಿಕ ರಜನಿಕಾಂತ್ ಅವರನ್ನೂ ಪರೀಕ್ಷೆಗೆ ಒಳಪಡಿಸಲಾಯಿತು. ಅದೃಷ್ಟವಶಾತ್ ಅವರಿಗೆ ನೆಗೆಟಿವ್ ವರದಿ ಬಂದಿದೆ. ಹಾಗಿದ್ದರೂ ಅವರು ಸದ್ಯ ಐಸೊಲೇಟ್ ಆಗಿದ್ದಾರೆ. ಈ ವೇಳೆ ಅವರಿಗೆ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿದೆ.
ಶುಕ್ರವಾರ (ಡಿ.25) ಬೆಳಗ್ಗೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ರಜನಿಕಾಂತ್ ದಾಖಲಾಗಿದ್ದಾರೆ. 'ಅವರಿಗೆ ಕೋವಿಡ್-19ನ ಯಾವುದೇ ಲಕ್ಷಣಗಳು ಕಾಣಿಸಿಲ್ಲ. ಆದರೂ ಅವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ರಕ್ತದೊತ್ತಡ ಸಹಜ ಸ್ಥಿತಿಗೆ ಬರುವವರೆಗೂ ಅವರನ್ನು ಡಿಸ್ಚಾರ್ಜ್ ಮಾಡಲು ಸಾಧ್ಯವಿಲ್ಲ' ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶುಕ್ರವಾರ ಅವರಿಗೆ ಮತ್ತೊಮ್ಮೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
'ಅಣ್ಣಾಥೆ' ಚಿತ್ರವನ್ನು 'ಸನ್ ಪಿಕ್ಚರ್ಸ್' ಸಂಸ್ಥೆ ನಿರ್ಮಾಣ ಮಾಡುತ್ತಿದೆ. 'ಚಿತ್ರತಂಡದ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ. ರಜನಿಕಾಂತ್ ಮತ್ತು ಇತರೆ ತಂತ್ರಜ್ಞರಿಗೆ ನೆಗೆಟಿವ್ ವರದಿ ಬಂದಿದೆ. ಎಲ್ಲರ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಚಿತ್ರೀಕರಣವನ್ನು ಮುಂದೂಡಲಾಗಿದೆ' ಎಂದು ಸನ್ ಪಿಕ್ಚರ್ಸ್ ಗುರುವಾರ ಟ್ವೀಟ್ ಮೂಲಕ ತಿಳಿಸಿದೆ.
This News Article is a Copy of vijaykarnataka
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm