ಬ್ರೇಕಿಂಗ್ ನ್ಯೂಸ್
25-12-20 03:09 pm Source: vijaykarnataka ಸಿನಿಮಾ
ಹೈದರಾಬಾದ್, ಡಿ.25: ಕಳೆದ ಕೆಲವು ದಿನಗಳಿಂದ 'ಅಣ್ಣಾಥೆ' ಸಿನಿಮಾದ ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದ ನಟ ರಜನಿಕಾಂತ್ ಅವರಿಗೆ ತೀವ್ರ ರಕ್ತದೊತ್ತಡದ (ಬಿ.ಪಿ.) ಸಮಸ್ಯೆ ಎದುರಾಗಿದೆ. ಹಾಗಾಗಿ ಅವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ 'ತಲೈವಾ' ಆರೋಗ್ಯ ಹೇಗಿದೆ ಎಂಬ ಬಗ್ಗೆ ಆಸ್ಪತ್ರೆಯು ಹೇಳಿಕೆ ಬಿಡುಗಡೆ ಮಾಡಿದೆ.
ಬಹುನಿರೀಕ್ಷಿತ 'ಅಣ್ಣಾಥೆ' ಸಿನಿಮಾದ ಶೂಟಿಂಗ್ನಲ್ಲಿ ಭಾಗವಹಿಸಿದ್ದ ಕೆಲವರಿಗೆ ಇತ್ತೀಚೆಗಷ್ಟೇ ಕೊರೊನಾ ವೈರಸ್ ತಗುಲಿತ್ತು. ನಾಲ್ಕು ಜನರಿಗೆ ಪಾಸಿಟಿವ್ ವರದಿ ಬಂದ ಬಳಿಕ ರಜನಿಕಾಂತ್ ಅವರನ್ನೂ ಪರೀಕ್ಷೆಗೆ ಒಳಪಡಿಸಲಾಯಿತು. ಅದೃಷ್ಟವಶಾತ್ ಅವರಿಗೆ ನೆಗೆಟಿವ್ ವರದಿ ಬಂದಿದೆ. ಹಾಗಿದ್ದರೂ ಅವರು ಸದ್ಯ ಐಸೊಲೇಟ್ ಆಗಿದ್ದಾರೆ. ಈ ವೇಳೆ ಅವರಿಗೆ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿದೆ.
ಶುಕ್ರವಾರ (ಡಿ.25) ಬೆಳಗ್ಗೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ರಜನಿಕಾಂತ್ ದಾಖಲಾಗಿದ್ದಾರೆ. 'ಅವರಿಗೆ ಕೋವಿಡ್-19ನ ಯಾವುದೇ ಲಕ್ಷಣಗಳು ಕಾಣಿಸಿಲ್ಲ. ಆದರೂ ಅವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ರಕ್ತದೊತ್ತಡ ಸಹಜ ಸ್ಥಿತಿಗೆ ಬರುವವರೆಗೂ ಅವರನ್ನು ಡಿಸ್ಚಾರ್ಜ್ ಮಾಡಲು ಸಾಧ್ಯವಿಲ್ಲ' ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶುಕ್ರವಾರ ಅವರಿಗೆ ಮತ್ತೊಮ್ಮೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
'ಅಣ್ಣಾಥೆ' ಚಿತ್ರವನ್ನು 'ಸನ್ ಪಿಕ್ಚರ್ಸ್' ಸಂಸ್ಥೆ ನಿರ್ಮಾಣ ಮಾಡುತ್ತಿದೆ. 'ಚಿತ್ರತಂಡದ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ. ರಜನಿಕಾಂತ್ ಮತ್ತು ಇತರೆ ತಂತ್ರಜ್ಞರಿಗೆ ನೆಗೆಟಿವ್ ವರದಿ ಬಂದಿದೆ. ಎಲ್ಲರ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಚಿತ್ರೀಕರಣವನ್ನು ಮುಂದೂಡಲಾಗಿದೆ' ಎಂದು ಸನ್ ಪಿಕ್ಚರ್ಸ್ ಗುರುವಾರ ಟ್ವೀಟ್ ಮೂಲಕ ತಿಳಿಸಿದೆ.
This News Article is a Copy of vijaykarnataka
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm