ಬ್ರೇಕಿಂಗ್ ನ್ಯೂಸ್
26-12-20 02:09 pm Source: FILMIBEAT Manjunatha C ಸಿನಿಮಾ
ಆಘಾತಕಾರಿ ಘಟನೆಯಲ್ಲಿ ಮಲಯಾಳಂ ನ ಜನಪ್ರಿಯ ನಟ ಅನಿಲ್ ನೆಡುಮಂಗದ್, ಚಿತ್ರೀಕರಣದ ವೇಳೆ ನೀರಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. 'ಅಯ್ಯಪ್ಪನುಂ ಕೋಶಿಯುಂ' ಸೇರಿ ಹಲವಾರು ಜನಪ್ರಿಯ ಮಲಯಾಳಂ ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದ ಅನಿಲ್ ನೆಡುಮಂಗದ್, ಇಂದು (ಡಿಸೆಂಬರ್ 25) ಮಲನ್ಕರ ಡ್ಯಾಂನಲ್ಲಿ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮಲನ್ಕರ್ ಡ್ಯಾಂ ಬಳಿ ಮಲಯಾಳಂ ಸಿನಿಮಾ 'ಪೀಸ್' ನ ಚಿತ್ರೀಕರಣ ನಡೆಯುತ್ತಿತ್ತು. ಅನಿಲ್ ನೆಡುಮಂಗದ್ ಸಿನಿಮಾದಲ್ಲಿ ಪಾತ್ರವಹಿಸಿದ್ದು, ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಚಿತ್ರೀಕರಣದ ಬಿಡುವಿನ ವೇಳೆ ಅನಿಲ್ ಹಾಗೂ ಕೆಲವರು ಸ್ನಾನ ಮಾಡಲೆಂದು ಮಲನ್ಕರ ಡ್ಯಾಂ ಗೆ ಹೋಗಿದ್ದರು, ಈ ವೇಳೆ ಅನಿಲ್ ನೀರಲ್ಲಿ ಮುಳುಗಿದ್ದಾರೆ.

ಸಂಜೆ ಆರು ಗಂಟೆಗೆ ದೊರೆತಿದೆ ಮೃತದೇಹ
'ಅನಿಲ್ ಗೆಳೆಯರು ಹೇಳಿರುವಂತೆ, ಮಧ್ಯಾಹ್ನದ ವೇಳೆಗೆ ಎಲ್ಲರೂ ಸ್ನಾನ ಮಾಡಲು ಹೋದೆವು, ಕೆಲವು ಹೊತ್ತಿನ ಬಳಿಕ ಅನಿಲ್ ಅಲ್ಲೆಲ್ಲೂ ನಮಗೆ ಕಾಣಲಿಲ್ಲ, ಅನಿಲ್ ನೀರಲ್ಲಿ ಮುಳುಗಿರಬಹುದು ಎಂದು ಕೊಂಡು ಎಲ್ಲರೂ ಸೇರಿ ಹುಡುಕಾಡಲು ಆರಂಭಿಸಿದೆವು, ಕೊನೆಗೆ ರಕ್ಷಣಾ ತಂಡದ ನೆರವು ಪಡೆದು ಹುಡುಕಿದಾಗ, ಸಂಜೆ 6 ಗಂಟೆ ವೇಳೆಗೆ ಅನಿಲ್ ಮೃತದೇಹ ಸಿಕ್ಕಿತು' ಎಂದಿದ್ದಾರೆ.

ತೀವ್ರ ಸಂತಾಪ ವ್ಯಕ್ತಪಡಿಸಿದ ಪೃಥ್ವಿರಾಜ್ ಸುಕುಮಾರ್
ಪ್ರತಿಭಾವಂತ ನಟ ಅನಿಲ್ ಸಾವಿಗೆ ಮಲಯಾಳಂ ಸಿನಿಮಾರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅಯ್ಯಪ್ಪನುಂ ಕೋಶಿಯುಂ ನಲ್ಲಿ ಅನಿಲ್ ಜೊತೆ ನಟಿಸಿದ್ದ ಪೃಥ್ವಿರಾಜ್ ಟ್ವೀಟ್ ಮಾಡಿದ್ದು, 'ನನ್ನ ಬಳಿ ಹೇಳಲು ಏನೂ ಮಾತುಗಳಿಲ್ಲ. ನನಗೆ ಏನೂ ಹೇಳಲು ಆಗುತ್ತಿಲ್ಲ. ನೀನು ಶಾಂತಿಯಿಂದ ಇದ್ದೀಯ ಎಂದು ಭಾವಿಸಿದ್ದೇನೆ ಅನಿಲ್ ಅಣ್ಣ' ಎಂದಿದ್ದಾರೆ.

ಕಮ್ಮಾಟಿಪದಂ' ಸಿನಿಮಾದಲ್ಲಿ ಜೊತೆಗೆ ನಟನೆ
'ಕಮ್ಮಾಟಿಪದಂ' ಸಿನಿಮಾದಲ್ಲಿ ಅನಿಲ್ ಜೊತೆ ನಟಿಸಿದ್ದ ಸ್ಟಾರ್ ನಟ ದುಲ್ಕರ್ ಸಲ್ಮಾನ್, 'ಹೃದಯ ಹಿಂಡಿದಂತಾಗಿದೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅನಿಲ್ ಆತ್ಮಕ್ಕೆ ಶಾಂತಿ ಸಿಗಲಿ. ಆತನ ಕುಟುಂಬದ ಪರವಾಗಿ ನನ್ನ ಪ್ರಾರ್ಥನೆಗಳಿವೆ' ಎಂದಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm