ಬ್ರೇಕಿಂಗ್ ನ್ಯೂಸ್
26-12-20 02:09 pm Source: FILMIBEAT Manjunatha C ಸಿನಿಮಾ
ಆಘಾತಕಾರಿ ಘಟನೆಯಲ್ಲಿ ಮಲಯಾಳಂ ನ ಜನಪ್ರಿಯ ನಟ ಅನಿಲ್ ನೆಡುಮಂಗದ್, ಚಿತ್ರೀಕರಣದ ವೇಳೆ ನೀರಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. 'ಅಯ್ಯಪ್ಪನುಂ ಕೋಶಿಯುಂ' ಸೇರಿ ಹಲವಾರು ಜನಪ್ರಿಯ ಮಲಯಾಳಂ ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದ ಅನಿಲ್ ನೆಡುಮಂಗದ್, ಇಂದು (ಡಿಸೆಂಬರ್ 25) ಮಲನ್ಕರ ಡ್ಯಾಂನಲ್ಲಿ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮಲನ್ಕರ್ ಡ್ಯಾಂ ಬಳಿ ಮಲಯಾಳಂ ಸಿನಿಮಾ 'ಪೀಸ್' ನ ಚಿತ್ರೀಕರಣ ನಡೆಯುತ್ತಿತ್ತು. ಅನಿಲ್ ನೆಡುಮಂಗದ್ ಸಿನಿಮಾದಲ್ಲಿ ಪಾತ್ರವಹಿಸಿದ್ದು, ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಚಿತ್ರೀಕರಣದ ಬಿಡುವಿನ ವೇಳೆ ಅನಿಲ್ ಹಾಗೂ ಕೆಲವರು ಸ್ನಾನ ಮಾಡಲೆಂದು ಮಲನ್ಕರ ಡ್ಯಾಂ ಗೆ ಹೋಗಿದ್ದರು, ಈ ವೇಳೆ ಅನಿಲ್ ನೀರಲ್ಲಿ ಮುಳುಗಿದ್ದಾರೆ.

ಸಂಜೆ ಆರು ಗಂಟೆಗೆ ದೊರೆತಿದೆ ಮೃತದೇಹ
'ಅನಿಲ್ ಗೆಳೆಯರು ಹೇಳಿರುವಂತೆ, ಮಧ್ಯಾಹ್ನದ ವೇಳೆಗೆ ಎಲ್ಲರೂ ಸ್ನಾನ ಮಾಡಲು ಹೋದೆವು, ಕೆಲವು ಹೊತ್ತಿನ ಬಳಿಕ ಅನಿಲ್ ಅಲ್ಲೆಲ್ಲೂ ನಮಗೆ ಕಾಣಲಿಲ್ಲ, ಅನಿಲ್ ನೀರಲ್ಲಿ ಮುಳುಗಿರಬಹುದು ಎಂದು ಕೊಂಡು ಎಲ್ಲರೂ ಸೇರಿ ಹುಡುಕಾಡಲು ಆರಂಭಿಸಿದೆವು, ಕೊನೆಗೆ ರಕ್ಷಣಾ ತಂಡದ ನೆರವು ಪಡೆದು ಹುಡುಕಿದಾಗ, ಸಂಜೆ 6 ಗಂಟೆ ವೇಳೆಗೆ ಅನಿಲ್ ಮೃತದೇಹ ಸಿಕ್ಕಿತು' ಎಂದಿದ್ದಾರೆ.

ತೀವ್ರ ಸಂತಾಪ ವ್ಯಕ್ತಪಡಿಸಿದ ಪೃಥ್ವಿರಾಜ್ ಸುಕುಮಾರ್
ಪ್ರತಿಭಾವಂತ ನಟ ಅನಿಲ್ ಸಾವಿಗೆ ಮಲಯಾಳಂ ಸಿನಿಮಾರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅಯ್ಯಪ್ಪನುಂ ಕೋಶಿಯುಂ ನಲ್ಲಿ ಅನಿಲ್ ಜೊತೆ ನಟಿಸಿದ್ದ ಪೃಥ್ವಿರಾಜ್ ಟ್ವೀಟ್ ಮಾಡಿದ್ದು, 'ನನ್ನ ಬಳಿ ಹೇಳಲು ಏನೂ ಮಾತುಗಳಿಲ್ಲ. ನನಗೆ ಏನೂ ಹೇಳಲು ಆಗುತ್ತಿಲ್ಲ. ನೀನು ಶಾಂತಿಯಿಂದ ಇದ್ದೀಯ ಎಂದು ಭಾವಿಸಿದ್ದೇನೆ ಅನಿಲ್ ಅಣ್ಣ' ಎಂದಿದ್ದಾರೆ.

ಕಮ್ಮಾಟಿಪದಂ' ಸಿನಿಮಾದಲ್ಲಿ ಜೊತೆಗೆ ನಟನೆ
'ಕಮ್ಮಾಟಿಪದಂ' ಸಿನಿಮಾದಲ್ಲಿ ಅನಿಲ್ ಜೊತೆ ನಟಿಸಿದ್ದ ಸ್ಟಾರ್ ನಟ ದುಲ್ಕರ್ ಸಲ್ಮಾನ್, 'ಹೃದಯ ಹಿಂಡಿದಂತಾಗಿದೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅನಿಲ್ ಆತ್ಮಕ್ಕೆ ಶಾಂತಿ ಸಿಗಲಿ. ಆತನ ಕುಟುಂಬದ ಪರವಾಗಿ ನನ್ನ ಪ್ರಾರ್ಥನೆಗಳಿವೆ' ಎಂದಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm