ಬ್ರೇಕಿಂಗ್ ನ್ಯೂಸ್
26-12-20 02:09 pm Source: FILMIBEAT Manjunatha C ಸಿನಿಮಾ
ಆಘಾತಕಾರಿ ಘಟನೆಯಲ್ಲಿ ಮಲಯಾಳಂ ನ ಜನಪ್ರಿಯ ನಟ ಅನಿಲ್ ನೆಡುಮಂಗದ್, ಚಿತ್ರೀಕರಣದ ವೇಳೆ ನೀರಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. 'ಅಯ್ಯಪ್ಪನುಂ ಕೋಶಿಯುಂ' ಸೇರಿ ಹಲವಾರು ಜನಪ್ರಿಯ ಮಲಯಾಳಂ ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದ ಅನಿಲ್ ನೆಡುಮಂಗದ್, ಇಂದು (ಡಿಸೆಂಬರ್ 25) ಮಲನ್ಕರ ಡ್ಯಾಂನಲ್ಲಿ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮಲನ್ಕರ್ ಡ್ಯಾಂ ಬಳಿ ಮಲಯಾಳಂ ಸಿನಿಮಾ 'ಪೀಸ್' ನ ಚಿತ್ರೀಕರಣ ನಡೆಯುತ್ತಿತ್ತು. ಅನಿಲ್ ನೆಡುಮಂಗದ್ ಸಿನಿಮಾದಲ್ಲಿ ಪಾತ್ರವಹಿಸಿದ್ದು, ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಚಿತ್ರೀಕರಣದ ಬಿಡುವಿನ ವೇಳೆ ಅನಿಲ್ ಹಾಗೂ ಕೆಲವರು ಸ್ನಾನ ಮಾಡಲೆಂದು ಮಲನ್ಕರ ಡ್ಯಾಂ ಗೆ ಹೋಗಿದ್ದರು, ಈ ವೇಳೆ ಅನಿಲ್ ನೀರಲ್ಲಿ ಮುಳುಗಿದ್ದಾರೆ.

ಸಂಜೆ ಆರು ಗಂಟೆಗೆ ದೊರೆತಿದೆ ಮೃತದೇಹ
'ಅನಿಲ್ ಗೆಳೆಯರು ಹೇಳಿರುವಂತೆ, ಮಧ್ಯಾಹ್ನದ ವೇಳೆಗೆ ಎಲ್ಲರೂ ಸ್ನಾನ ಮಾಡಲು ಹೋದೆವು, ಕೆಲವು ಹೊತ್ತಿನ ಬಳಿಕ ಅನಿಲ್ ಅಲ್ಲೆಲ್ಲೂ ನಮಗೆ ಕಾಣಲಿಲ್ಲ, ಅನಿಲ್ ನೀರಲ್ಲಿ ಮುಳುಗಿರಬಹುದು ಎಂದು ಕೊಂಡು ಎಲ್ಲರೂ ಸೇರಿ ಹುಡುಕಾಡಲು ಆರಂಭಿಸಿದೆವು, ಕೊನೆಗೆ ರಕ್ಷಣಾ ತಂಡದ ನೆರವು ಪಡೆದು ಹುಡುಕಿದಾಗ, ಸಂಜೆ 6 ಗಂಟೆ ವೇಳೆಗೆ ಅನಿಲ್ ಮೃತದೇಹ ಸಿಕ್ಕಿತು' ಎಂದಿದ್ದಾರೆ.

ತೀವ್ರ ಸಂತಾಪ ವ್ಯಕ್ತಪಡಿಸಿದ ಪೃಥ್ವಿರಾಜ್ ಸುಕುಮಾರ್
ಪ್ರತಿಭಾವಂತ ನಟ ಅನಿಲ್ ಸಾವಿಗೆ ಮಲಯಾಳಂ ಸಿನಿಮಾರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅಯ್ಯಪ್ಪನುಂ ಕೋಶಿಯುಂ ನಲ್ಲಿ ಅನಿಲ್ ಜೊತೆ ನಟಿಸಿದ್ದ ಪೃಥ್ವಿರಾಜ್ ಟ್ವೀಟ್ ಮಾಡಿದ್ದು, 'ನನ್ನ ಬಳಿ ಹೇಳಲು ಏನೂ ಮಾತುಗಳಿಲ್ಲ. ನನಗೆ ಏನೂ ಹೇಳಲು ಆಗುತ್ತಿಲ್ಲ. ನೀನು ಶಾಂತಿಯಿಂದ ಇದ್ದೀಯ ಎಂದು ಭಾವಿಸಿದ್ದೇನೆ ಅನಿಲ್ ಅಣ್ಣ' ಎಂದಿದ್ದಾರೆ.

ಕಮ್ಮಾಟಿಪದಂ' ಸಿನಿಮಾದಲ್ಲಿ ಜೊತೆಗೆ ನಟನೆ
'ಕಮ್ಮಾಟಿಪದಂ' ಸಿನಿಮಾದಲ್ಲಿ ಅನಿಲ್ ಜೊತೆ ನಟಿಸಿದ್ದ ಸ್ಟಾರ್ ನಟ ದುಲ್ಕರ್ ಸಲ್ಮಾನ್, 'ಹೃದಯ ಹಿಂಡಿದಂತಾಗಿದೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅನಿಲ್ ಆತ್ಮಕ್ಕೆ ಶಾಂತಿ ಸಿಗಲಿ. ಆತನ ಕುಟುಂಬದ ಪರವಾಗಿ ನನ್ನ ಪ್ರಾರ್ಥನೆಗಳಿವೆ' ಎಂದಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm