ಬ್ರೇಕಿಂಗ್ ನ್ಯೂಸ್
26-12-20 02:20 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.26: ಡ್ರಗ್ಸ್ ಪ್ರಕರಣದ ಆರೋಪಿ ನಟಿ ಸಂಜನಾ ಗಲ್ರಾನಿ ಇಂದು ಸಿಸಿಬಿ ಪೊಲೀಸರ ಮುಂದೆ ಹಾಜರಾದರು. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿ, ಕೆಲವು ದಿನಗಳ ಹಿಂದಷ್ಟೆ ಆರೋಗ್ಯ ಕಾರಣ ನೀಡಿ ಹೈಕೋರ್ಟ್ನಿಂದ ಜಾಮೀನು ಪಡೆದಿದ್ದಾರೆ. ಜಾಮೀನು ನೀಡಿದ್ದ ನ್ಯಾಯಾಲಯವು, ಸಂಜನಾ ಗೆ ಕೆಲವು ಷರತ್ತುಗಳನ್ನು ವಿಧಿಸಿತ್ತು, ಜಾಮೀನು ಅವಧಿಯಲ್ಲಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಸಹ ಷರತ್ತು ವಿಧಿಸಲಾಗಿತ್ತು. ಆ ಷರತ್ತಿನ ಅನ್ವಯ ಇಂದು ಸಂಜನಾ ಗಲ್ರಾನಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದರು.

ಸೆಪ್ಟೆಂಬರ್ 8 ರಂದು ನಟಿ ಸಂಜನಾ ಗಲ್ರಾನಿಯನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀರು ಬಂಧಿಸಿದ್ದರು. ಅವರನ್ನು ಪರಪ್ಪರ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಡಿಸೆಂಬರ್ 11 ರಂದು ಕರ್ನಾಟಕ ರಾಜ್ಯ ಹೈಕೋರ್ಟ್ ಸಂಜನಾ ಗೆ ಜಾಮೀನು ಮಂಜೂರು ಮಾಡಿದೆ. ಕೆಲವು ಷರತ್ತುಗಳನ್ನು ಸಹ ಸಂಜನಾ ಗೆ ವಿಧಿಸಲಾಗಿದೆ. ಮೂರು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಇಬ್ಬರ ಶ್ಯೂರಿಟಿ ನೀಡುವುದರ ಜೊತೆಗೆ. ಪ್ರತಿ ತಿಂಗಳು ಎರಡು ಬಾರಿ ಪೊಲೀಸ್ ಠಾಣೆಗೆ ಹಾಜರಾಗಬೇಕು ಹಾಗೂ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಕಾರ್ಯ ಮಾಡದೆ ವಿಚಾರಣೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿ ಸಂಜನಾಗೆ ಜಾಮೀನು ಮಂಜೂರು ಮಾಡಲಾಗಿದೆ.
ಸಂಜನಾ ಗಲ್ರಾನಿಗಿಂತಲೂ ಮೊದಲು ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿಗೆ ಈ ವರೆಗೆ ಜಾಮೀನು ದೊರೆತಿಲ್ಲ. ರಾಗಿಣಿ ಗೆ ಇತ್ತೀಚೆಗೆ ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm