ಬ್ರೇಕಿಂಗ್ ನ್ಯೂಸ್
28-12-20 12:54 pm Source: FILMIBEAT ಸಿನಿಮಾ
ಬೆಂಗಳೂರು, ಡಿ.28: ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿಯಿರುವ ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲಿ ಸ್ಥಾಪನೆ ಮಾಡಿದ್ದ ದಿವಂಗತ ನಟ ಡಾ ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಇದೀಗ, ಅದೇ ವೃತ್ತದಲ್ಲಿ ವಿಷ್ಣುದಾದಾನ ಪ್ರತಿಮೆ ಮತ್ತೆ ನಿರ್ಮಾಣವಾಗುತ್ತಿದೆ. ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಸೋಮವಾರ ಬೆಳಗ್ಗೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲೇ ವಿಷ್ಣು ಸ್ಮಾರಕ ನಿರ್ಮಿಸಬೇಕು ಎಂದು ಬೇಡಿಕೆಯಿಟ್ಟಿದ್ದ ಅಭಿಮಾನಿಗಳು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಂದ ಸಮ್ಮತಿ ಸಹ ಪಡೆದುಕೊಂಡಿದ್ದಾರೆ.

ಅದೇ ವೃತ್ತ, ಬೇರೆ ಸ್ಥಳದಲ್ಲಿ ವಿಷ್ಣು ಪ್ರತಿಮೆ
ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಆಗಿರುವ ಸ್ಥಳದಿಂದ 50 ಮೀಟರ್ ದೂರದಲ್ಲಿ ಮತ್ತೊಂದು ಸ್ಥಳವನ್ನು ಗುರುತಿಸಿ, ಅಲ್ಲಿ ವಿಷ್ಣು ಪುತ್ಥಳಿ ನಿರ್ಮಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಸಂಬಂಧ ಪುತ್ಥಳಿ ನಿರ್ಮಾಣ ಕಾರ್ಯ ಸಹ ಆರಂಭವಾಗಿದೆ. ನಟ ಹಾಗೂ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಅವರು ಸೋಮವಾರ ಬೆಳಗ್ಗೆ ವಿಷ್ಣು ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ.

ಡಿಸೆಂಬರ್ 30ಕ್ಕೆ ಪ್ರತಿಮೆ ಅನಾವರಣ
ಡಿಸೆಂಬರ್ 28 ರಂದು ವಿಷ್ಣು ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಿರ್ಮಾಣವಾಗಿದ್ದು, ಡಿಸೆಂಬರ್ 30 ರಂದು ಈ ಪುತ್ಥಳಿಯನ್ನು ಲೋಕಾರ್ಪಣೆ ಮಾಡಲು ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ. ಇನ್ನೊಂದೇ ದಿನದಲ್ಲಿ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿಯಿರುವ ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲಿ ಮತ್ತೆ ವಿಷ್ಣು ಪ್ರತಿಮೆ ತಲೆ ಎತ್ತಲಿದೆ.
ಸಚಿವರ ಒಪ್ಪಿಗೆ ಸಿಕ್ಕಿದೆ
ಸುಮಾರು ಆರು ಅಡಿ ಎತ್ತರದಲ್ಲಿ ವಿಷ್ಣುವರ್ಧನ್ ಅವರ ಪುತ್ಥಳಿ ಸ್ಥಾಪಿಸಲಾಗುತ್ತದೆ ಎಂದು ವಿಷ್ಣು ಅಭಿಮಾನಿಗಳು ಮಾಹಿತಿ ನೀಡಿದ್ದಾರೆ. ಅದೇ ವೃತ್ತದಲ್ಲಿ ಪ್ರತಿಮೆ ನಿರ್ಮಿಸಲು ಸಚಿವ ವಿ ಸೋಮಣ್ಣ ಅವರು ಸಹ ಒಪ್ಪಿಗೆ ನೀಡಿದ್ದು, ಪುತ್ಥಳಿ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಆರೋಪಿಗಳನ್ನು ಬಂಧಿಸಿ
ಈ ಹಿಂದೆ ವಿಷ್ಣು ಪ್ರತಿಮೆ ಧ್ವಂಸ ಮಾಡಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕಾಗಿ ವಿಷ್ಣು ಸೇನೆ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ನಟ ಸುದೀಪ್, ಜಗ್ಗೇಶ್, ದರ್ಶನ್ ಸೇರಿದಂತೆ ಹಲವು ಸ್ಟಾರ್ ನಟರು ಸಹ ಈ ಘಟನೆಯನ್ನು ಖಂಡಿಸಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆ ಕೊಡಿ ಎಂದು ಆಗ್ರಹಿಸಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm