ಬ್ರೇಕಿಂಗ್ ನ್ಯೂಸ್
29-12-20 12:18 pm Source: FILMIBEAT Shruthi Gk ಸಿನಿಮಾ
ಮುಂಗಾರು ಮಳೆ.. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆ ಸೃಷ್ಟಿಸಿದ ಸಿನಿಮಾ. ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಬಂದ ಮುಂಗಾರು ಮಳೆ ಸಿನಿಮಾಗೆ ಕನ್ನಡ ಸಿನಿಪ್ರಿಯರು ಮನ ಸೋತಿದ್ದರು. ಚಿತ್ರದ ಕಥೆ, ಡೈಲಾಗ್, ಗಣೇಶ್ ಅಭಿನಯ, ಲೊಕೇಶನ್, ಮಳೆ, ಅದ್ಭುತವಾದ ಸಂಗೀತಕ್ಕೆ ಪ್ರೇಕ್ಷಕರು ತಲೆಬಾಗಿದ್ದರು. 2006ರಲ್ಲಿ ರಿಲೀಸ್ ಆದ ಮುಂಗಾರು ಮಳೆ ಸಿನಿಮಾಗೆ ಈಗ 14 ವರ್ಷದ ಸಂಭ್ರಮ. ಹೌದು, ಇವತ್ತಿಗೆ ಸರಿಯಾಗಿ 14 ವರ್ಷಗಳ ಹಿಂದೆ ಮುಂಗಾರು ಮಳೆ ಸಿನಿಮಾ ರಿಲೀಸ್ ರಾಜ್ಯದಾದ್ಯಂತ ಬಿಡುಗೆಯಾಗಿತ್ತು.
ಗಣೇಶ್ ಗೆ ಸ್ಟಾರ್ ಗಿರಿ ತಂದುಕೊಟ್ಟ ಸಿನಿಮಾ
ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟಕ್ಕೆ ಯಶಸ್ಸು ಕಂಡ ಮುಂಗಾರು ಮಳೆ ಚಿತ್ರ, ಗಣೇಶ್ ಸಿನಿ ಬದುಕನ್ನೇ ಬದಲಾಯಿಸಿದ ಸಿನಿಮಾವಾಗಿದೆ. ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಈ ಸಿನಿಮಾ ಮೂಲಕ ರಾತ್ರೋ ರಾತ್ರಿ ಸ್ಟಾರ್ ಆಗಿ ಹೊರಹೊಮ್ಮಿದರು. ನಿರ್ದೇಶಕ ಯೋಗರಾಜ್ ಭಟ್ ಅವರಿಗೂ ಸ್ಟಾರ್ ಗಿರಿ ತಂದುಕೊಟ್ಟ ಚಿತ್ರವಿದು.
ಪೂಜಾ ಗಾಂಧಿ ನಟನೆಯ ಚೊಚ್ಚಲ ಸಿನಿಮಾ
ಚಿತ್ರದಲ್ಲಿ ಗಣೇಶ್ ಗೆ ನಾಯಕಿಯಾಗಿ ಪೂಜಾ ಗಾಂಧಿ ಕಾಣಿಸಿಕೊಂಡಿದ್ದಾರೆ. ಪೂಜಾ ಗಾಂಧಿಗೆ ಇಂದು ಚೊಚ್ಚಲ ನಟನೆಯ ಸಿನಿಮಾ. ಮೊದಲ ಸಿನಿಮಾದಲ್ಲೇ ದೊಡ್ಡ ಯಶಸ್ಸು ಗಳಿಸಿ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿದ್ದರು. ಪ್ರೀತಮ್ ಮತ್ತು ನಂದಿನಿಯ ನವಿರಾದ ಪ್ರೇಮಕಥೆಗೆ ಚಿತ್ರಪ್ರೇಮಿಗಳು ಮನಸೂರೆಗೊಂಡಿದ್ದರು.
ಗಾಳಿಪಟ ಮೂಲಕ ಮತ್ತೆ ಒಂದಾದ ಗಣೇಶ್-ಭಟ್ರು
ಈ ಸಿನಿಮಾ ಬಳಿಕ ಗಣೇಶ್ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾದರು. ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು. ಮುಂಗಾರು ಮಳೆ ಬಳಿಕ ಗಣೇಶ್ ಮತ್ತು ಯೋಗರಾಜ್ ಭಟ್ ಜೋಡಿ ಗಾಳಿಪಟ ಸಿನಿಮಾ ಮೂಲಕ ಮತ್ತೆ ಒಂದಾದರು. ಆದರೆ ಈ ಸಿನಿಮಾ ಮುಂಗಾರು ಮಳೆಯಷ್ಟು ಯಶಸ್ಸು ಕಾಣಲಿಲ್ಲ.
This News Article is a Copy of FILMIBEAT
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 04:14 pm
HK News Desk
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm