ಬ್ರೇಕಿಂಗ್ ನ್ಯೂಸ್
            
                        30-12-20 11:42 am Source: FILMIBEAT Shruthi Gk ಸಿನಿಮಾ
            Photo credits : google
ಪ್ರಣಯರಾಜ ಎಂದಕ್ಷಣ ಮೊದಲು ನೆನಪಾಗುವುದು ಹಿರಿಯ ನಟ ಶ್ರೀನಾಥ್. 1970ರ ದಶಕಗಳಲ್ಲಿ ರೊಮ್ಯಾಂಟಿಕ್ ಸಿನಿಮಾಗಳ ಮೂಲಕವೇ ಹೆಚ್ಚು ಯಶಸ್ಸು ಗಳಿಸಿದ್ದ ಶ್ರೀನಾಥ್ ಬಳಿಕ ಪ್ರಣಯ ರಾಜ ಆಗಿಯೇ ಖ್ಯಾತಿ ಗಳಿಸಿದ್ದಾರೆ. ಇದೇ ಹೆಸರಿನಲ್ಲಿ ಈಗ ಹೊಸ ಸಿನಿಮಾ ಸೆಟ್ಟೇರಿದ್ದು, ಪ್ರಣಯ ರಾಜನಾಗಿ ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಭುವನ್ ಪೊನ್ನಣ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ವಿಶೇಷವಾಗಿ ಪ್ರಣಯ ರಾಜ ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಲಾಗಿದೆ.
ನಾಯಕಿಯರ ಮಧ್ಯೆ ಕುಳಿತಿರುವ ಭುವನ್ ಪೊನ್ನಣ್ಣ ಲುಕ್ ಗಮನ ಸೆಳೆಯುತ್ತಿದೆ. ಅಂದಹಾಗೆ ಪ್ರಣಯ ರಾಜ ಚಿತ್ರಕ್ಕೆ ಸುದರ್ಶನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಸಿನಿಮಾತಂಡ ಮುಂದಿನ ವರ್ಷದಿಂದ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸದ್ಯ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರಪ್ರಿಯ ಗಮನ ಸಳೆಯುತ್ತಿದೆ.

ಇನ್ನೂ ಈ ಸಿನಿಮಾದ ವಿಶೇಷ ಎಂದರೆ ಭವನ್ ಪೊನ್ನಣ್ಣ ಜೊತೆ 21 ನಾಯಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. 21ನಾಯಕಿಯರಲ್ಲಿ ಬೇರೆ ಬೇರೆ ಭಾಷೆಯ ಕಲಾವಿದರು ಇರಲಿದ್ದಾರೆ ಎನ್ನಲಾಗುತ್ತಿದೆ. ಇವರಲ್ಲಿ 3 ಪ್ರಮುಖ ನಾಯಕಿಯರು ಎಂದು ಹೇಳಲಾಗುತ್ತಿದೆ. ಈಗಾಗಲೇ 18 ನಾಯಕಿಯರು ಫೈನಲ್ ಆಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಟ ಭುವನ್ ಮೊದಲು ರಾಂಧವ ಸಿನಿಮಾ ಮೂಲಕ ಚಿತ್ರಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನಿಮಾ ನಿರೀಕ್ಷೆಯ ಮಟ್ಟಕ್ಕೆ ಯಶಸ್ಸು ಕಾಣಲಿಲ್ಲ. ಇದೀಗ ರೊಮ್ಯಾಂಟಿಕ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಪ್ರಯಣ ರಾಜ ಲೈಕ್ರಾ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ. ವಿಕಾಶ್ ರಾಜ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
This News Article is a Copy of FILMIBEAT
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm