ಬ್ರೇಕಿಂಗ್ ನ್ಯೂಸ್
30-12-20 11:42 am Source: FILMIBEAT Shruthi Gk ಸಿನಿಮಾ
Photo credits : google
ಪ್ರಣಯರಾಜ ಎಂದಕ್ಷಣ ಮೊದಲು ನೆನಪಾಗುವುದು ಹಿರಿಯ ನಟ ಶ್ರೀನಾಥ್. 1970ರ ದಶಕಗಳಲ್ಲಿ ರೊಮ್ಯಾಂಟಿಕ್ ಸಿನಿಮಾಗಳ ಮೂಲಕವೇ ಹೆಚ್ಚು ಯಶಸ್ಸು ಗಳಿಸಿದ್ದ ಶ್ರೀನಾಥ್ ಬಳಿಕ ಪ್ರಣಯ ರಾಜ ಆಗಿಯೇ ಖ್ಯಾತಿ ಗಳಿಸಿದ್ದಾರೆ. ಇದೇ ಹೆಸರಿನಲ್ಲಿ ಈಗ ಹೊಸ ಸಿನಿಮಾ ಸೆಟ್ಟೇರಿದ್ದು, ಪ್ರಣಯ ರಾಜನಾಗಿ ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಭುವನ್ ಪೊನ್ನಣ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ವಿಶೇಷವಾಗಿ ಪ್ರಣಯ ರಾಜ ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಲಾಗಿದೆ.
ನಾಯಕಿಯರ ಮಧ್ಯೆ ಕುಳಿತಿರುವ ಭುವನ್ ಪೊನ್ನಣ್ಣ ಲುಕ್ ಗಮನ ಸೆಳೆಯುತ್ತಿದೆ. ಅಂದಹಾಗೆ ಪ್ರಣಯ ರಾಜ ಚಿತ್ರಕ್ಕೆ ಸುದರ್ಶನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಸಿನಿಮಾತಂಡ ಮುಂದಿನ ವರ್ಷದಿಂದ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸದ್ಯ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರಪ್ರಿಯ ಗಮನ ಸಳೆಯುತ್ತಿದೆ.

ಇನ್ನೂ ಈ ಸಿನಿಮಾದ ವಿಶೇಷ ಎಂದರೆ ಭವನ್ ಪೊನ್ನಣ್ಣ ಜೊತೆ 21 ನಾಯಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. 21ನಾಯಕಿಯರಲ್ಲಿ ಬೇರೆ ಬೇರೆ ಭಾಷೆಯ ಕಲಾವಿದರು ಇರಲಿದ್ದಾರೆ ಎನ್ನಲಾಗುತ್ತಿದೆ. ಇವರಲ್ಲಿ 3 ಪ್ರಮುಖ ನಾಯಕಿಯರು ಎಂದು ಹೇಳಲಾಗುತ್ತಿದೆ. ಈಗಾಗಲೇ 18 ನಾಯಕಿಯರು ಫೈನಲ್ ಆಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಟ ಭುವನ್ ಮೊದಲು ರಾಂಧವ ಸಿನಿಮಾ ಮೂಲಕ ಚಿತ್ರಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನಿಮಾ ನಿರೀಕ್ಷೆಯ ಮಟ್ಟಕ್ಕೆ ಯಶಸ್ಸು ಕಾಣಲಿಲ್ಲ. ಇದೀಗ ರೊಮ್ಯಾಂಟಿಕ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಪ್ರಯಣ ರಾಜ ಲೈಕ್ರಾ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ. ವಿಕಾಶ್ ರಾಜ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm