ಬ್ರೇಕಿಂಗ್ ನ್ಯೂಸ್
31-12-20 01:23 pm Source: FILMIBEAT Shruthi Gk ಸಿನಿಮಾ
ಬೆಂಗಳೂರು,ಡಿ.31: 2020ರ ಕೊನೆಯ ದಿನದಲ್ಲಿದ್ದೇವೆ. ಈ ವರ್ಷ ಸಿಹಿಗಿಂತ ಹೆಚ್ಚಾಗಿ ಕಹಿ ಅನುಭವಿಸಿದ್ದೆ ಜಾಸ್ತಿ. ಕೊರೊನಾ ವೈರಸ್ ಈ ವರ್ಷದ ಎಲ್ಲಾ ಸಂತೋಷ, ನೆಮ್ಮದಿಯನ್ನೆ ನುಂಗಿ ಹಾಕಿದೆ. ಅಂತೂ ಈ ವರ್ಷ ಕಳೆಯಿತು ಬರುವ ವರ್ಷವಾದರೂ ಅದ್ಭುತವಾಗಿರಲಿ, ಮೊದಲು ಕೊರೊನಾ ತೊಲಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. 2021ನ್ನು ಅದ್ದೂರಿಯಾಗಿ ಸ್ವಾಗತ ಮಾಡಲು ಇಡೀ ವಿಶ್ವ ಎದುರು ನೋಡುತ್ತಿದೆ. ಅನೇಕರು ಹೊಸ ವರ್ಷವನ್ನು ವಿಭಿನ್ನವಾಗಿ ಆಚರಣೆ ಮಾಡುತ್ತಾರೆ. ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ 2021ಅನ್ನು ವಿಭಿನ್ನವಾಗಿ ಆಚರಣೆ ಮಾಡಲು ಪ್ಲಾನ್ ಮಾಡಿದ್ದಾರೆ.
ಹೌದು, ವಸಿಷ್ಠ ನಾಳೆ ಅಂದರೆ 2021 ಮೊದಲ ದಿನ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನವನ್ನು ಹೊಸ ರೀತಿ ಆಚರಿಸಲು ನಿರ್ಧರಿಸಿದ್ದಾರೆ. ಬೆನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ವಸಿಷ್ಠ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಆದರೆ ಯಾವ ಪ್ರಾಣಿ ಎನ್ನುವುದು ಬಹಿರಂಗ ಪಡಿಸಿಲ್ಲ. ಆದರೆ ಪ್ರಾಣಿ ದತ್ತು ಪಡೆಯುವ ಮೂಲಕ 2021ನ್ನು ವಿಭಿನ್ನವಾಗಿ ಸದಾ ಕಾಲ ನೆನಪಿನಲ್ಲಿರುವ ಹಾಗೆ ಆಚರಣೆ ಮಾಡುತ್ತಿದ್ದಾರೆ.
ಅಂದಹಾಗೆ ಸ್ಯಾಂಡಲ್ ವುಡ್ ನಲ್ಲಿ ಅನೇಕ ಮಂದಿ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಚಾಲೆಂಜ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಅದೇ ಸಾಲಿಗೆ ವಸಿಷ್ಠ್ ಸಹ ಸೇರುತ್ತಿದ್ದಾರೆ.
ನಟ ದರ್ಶನ್ ಅವರಿಗೆ ಇರುವ ಪ್ರಾಣಿ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಗಾಗ ಮೈಸೂರು ಮೃಗಾಲಯದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಮೈಸೂರು ಮೃಗಾಲಯ ನಲ್ಲಿ ಪಾರ್ವತಿ ಎನ್ನುವ ಆನೆಯನ್ನು ದತ್ತು ಪಡೆದಿದ್ದಾರೆ. ಇದೀಗ ವಸಿಷ್ಠ ಯಾವ ಪ್ರಾಣಿಯನ್ನು ದತ್ತು ಪಡೆಯುತ್ತಾರೆ ಎನ್ನುವುದನ್ನು ಕಾದುನೋಡಬೇಕು.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm