ಬ್ರೇಕಿಂಗ್ ನ್ಯೂಸ್
31-12-20 01:23 pm Source: FILMIBEAT Shruthi Gk ಸಿನಿಮಾ
ಬೆಂಗಳೂರು,ಡಿ.31: 2020ರ ಕೊನೆಯ ದಿನದಲ್ಲಿದ್ದೇವೆ. ಈ ವರ್ಷ ಸಿಹಿಗಿಂತ ಹೆಚ್ಚಾಗಿ ಕಹಿ ಅನುಭವಿಸಿದ್ದೆ ಜಾಸ್ತಿ. ಕೊರೊನಾ ವೈರಸ್ ಈ ವರ್ಷದ ಎಲ್ಲಾ ಸಂತೋಷ, ನೆಮ್ಮದಿಯನ್ನೆ ನುಂಗಿ ಹಾಕಿದೆ. ಅಂತೂ ಈ ವರ್ಷ ಕಳೆಯಿತು ಬರುವ ವರ್ಷವಾದರೂ ಅದ್ಭುತವಾಗಿರಲಿ, ಮೊದಲು ಕೊರೊನಾ ತೊಲಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. 2021ನ್ನು ಅದ್ದೂರಿಯಾಗಿ ಸ್ವಾಗತ ಮಾಡಲು ಇಡೀ ವಿಶ್ವ ಎದುರು ನೋಡುತ್ತಿದೆ. ಅನೇಕರು ಹೊಸ ವರ್ಷವನ್ನು ವಿಭಿನ್ನವಾಗಿ ಆಚರಣೆ ಮಾಡುತ್ತಾರೆ. ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ 2021ಅನ್ನು ವಿಭಿನ್ನವಾಗಿ ಆಚರಣೆ ಮಾಡಲು ಪ್ಲಾನ್ ಮಾಡಿದ್ದಾರೆ.
ಹೌದು, ವಸಿಷ್ಠ ನಾಳೆ ಅಂದರೆ 2021 ಮೊದಲ ದಿನ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನವನ್ನು ಹೊಸ ರೀತಿ ಆಚರಿಸಲು ನಿರ್ಧರಿಸಿದ್ದಾರೆ. ಬೆನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ವಸಿಷ್ಠ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಆದರೆ ಯಾವ ಪ್ರಾಣಿ ಎನ್ನುವುದು ಬಹಿರಂಗ ಪಡಿಸಿಲ್ಲ. ಆದರೆ ಪ್ರಾಣಿ ದತ್ತು ಪಡೆಯುವ ಮೂಲಕ 2021ನ್ನು ವಿಭಿನ್ನವಾಗಿ ಸದಾ ಕಾಲ ನೆನಪಿನಲ್ಲಿರುವ ಹಾಗೆ ಆಚರಣೆ ಮಾಡುತ್ತಿದ್ದಾರೆ.
ಅಂದಹಾಗೆ ಸ್ಯಾಂಡಲ್ ವುಡ್ ನಲ್ಲಿ ಅನೇಕ ಮಂದಿ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಚಾಲೆಂಜ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಅದೇ ಸಾಲಿಗೆ ವಸಿಷ್ಠ್ ಸಹ ಸೇರುತ್ತಿದ್ದಾರೆ.
ನಟ ದರ್ಶನ್ ಅವರಿಗೆ ಇರುವ ಪ್ರಾಣಿ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಗಾಗ ಮೈಸೂರು ಮೃಗಾಲಯದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಮೈಸೂರು ಮೃಗಾಲಯ ನಲ್ಲಿ ಪಾರ್ವತಿ ಎನ್ನುವ ಆನೆಯನ್ನು ದತ್ತು ಪಡೆದಿದ್ದಾರೆ. ಇದೀಗ ವಸಿಷ್ಠ ಯಾವ ಪ್ರಾಣಿಯನ್ನು ದತ್ತು ಪಡೆಯುತ್ತಾರೆ ಎನ್ನುವುದನ್ನು ಕಾದುನೋಡಬೇಕು.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm