ಬ್ರೇಕಿಂಗ್ ನ್ಯೂಸ್
01-01-21 11:20 am Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ಕಲಾವಿದ ನರ್ರಿಂಗ್ ಯಾದವ್ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ನರ್ಸಿಂಗ್ ಯಾದವ್ ನಿನ್ನೆ ಸಂಜೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನರ್ಸಿಂಗ್ ಯಾದವ್ ಅವರಿಗೆ 52 ವರ್ಷವಾಗಿತ್ತು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ನರ್ಸಿಂಗ್ ಯಾದವ್ ಅವರನ್ನು ಹೈದರಾಬಾದ್ ನ ಸೋಮಾಜಿಗೊಡದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನರ್ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ.
ನರ್ಸಿಂಗ್ ಯಾದವ್ ಅನೇಕ ಸಿನಿಮಾಗಳಲ್ಲಿ ಹಾಸ್ಯ ಮತ್ತು ಖಳನಟನಾಗಿ ಮಿಂಚಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿ ಸೇರಿದಂತೆ ಸುಮಾರು 30ಕ್ಕು ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. 1968ರಲ್ಲಿ ಜನಿಸಿದ ನರ್ಸಿಂಗ್ ಯಾದವ್, ಹೇಮಹೆಮಿಲು ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಬಳಿಕ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಮೊಮೆಂಟ್ ಸಿನಿಮಾದಲ್ಲಿ ನಟಿಸಿದ್ದ ನರ್ಸಿಂಗ್ ಯಾದವ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತು.
ಸಂದರ್ಶನವೊಂದರಲ್ಲಿ ರಾಮ್ ಗೋಪಾಲ್ ವರ್ಮ ಬಗ್ಗೆ ಮಾತನಾಡಿದ್ದ ನರ್ಸಿಂಗ್ ಯಾದವ್, 'ನಾನು ನಟನೆ ಹೇಗೆ ಮಾಡಬೇಕು ಎಂಬುದನ್ನು ಅವರಿಂದ ಕಲಿತುಕೊಂಡೆ' ಎಂದು ಹೇಳಿದ್ದರು. ಯಾದವ್ ಮಾಯಲೋಡು, ಅಲ್ಲರಿ ಪ್ರೇಮಿಕುಡು, ಮುಠಾಮೇಸ್ತ್ರಿ, ಮಾಸ್ಟರ್ , ನವೋಸ್ತಾನಂತೆ ನೆನೋದ್ದಂಟಾನಾ, ಈಡಿಯಟ್, ಪೋಕಿರಿ, ಜಾನಿ ಸೇರಿದಂತೆ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ. ನರ್ಸಿಂಗ್ ಯಾದವ್ ಕೊನೆಯ ಬಾರಿಗೆ ನರ್ಸಿಂಗ್ ಯಾದವ್ ಚಿರಂಜೀವಿ ಅಭಿನಯದ 150ನೇ ಸಿನಿಮಾ ಖೈದಿ ನಂಬರ್ 150 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನರ್ಸಿಂಗ್ ಯಾದವ್ ಪತ್ನಿ ಚಿತ್ರ ರುತ್ವಿಕ್ ಮತ್ತು ಮಗನನ್ನು ಅಗಲಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm