ಬ್ರೇಕಿಂಗ್ ನ್ಯೂಸ್
20-03-26 09:49 pm HK News Staffer ಸಿನಿಮಾ
ಬೆಂಗಳೂರು, ಮಾರ್ಚ್ 20: ಕಾಂತಾರ ಸಿನಿಮಾದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿರುವ ನಟ ರಿಷಬ್ ಶೆಟ್ಟಿ ಯುಗಾದಿ ದಿನವೇ ಹೊಸ ಸುದ್ದಿ ಕೊಟ್ಟಿದ್ದಾರೆ. ‘ಚಾಪ್ಟರ್ 2’ ಎಂದು ಪೋಸ್ಟ್ ಮಾಡಿ ಅಚ್ಚರಿ ಸೃಷ್ಟಿಸಿದ್ದಾರೆ. ಇದೇ ವೇಳೆ, ರಿಷಬ್ ಶೆಟ್ಟಿ ತಮ್ಮ ಇನ್ಸ್ಟಾ ಖಾತೆಯಿಂದ ಹೊಂಬಾಳೆ ಫಿಲ್ಮ್ಸ್ ಹೆಸರನ್ನು ಅನ್ಫಾಲೋ ಮಾಡಿ ಮತ್ತಷ್ಟು ಅಚ್ಚರಿ ಮೂಡಿಸಿದ್ದಾರೆ.
ಕಾಂತಾರ ಮೊದಲ ಚಿತ್ರ ಬಂದ ಬಳಿಕ 'ಕಾಂತಾರ: ಚಾಪ್ಟರ್ 1’ ಸಿನಿಮಾ ಮಾಡಿದ್ದು ಭಾರೀ ಹೆಸರು ಮತ್ತು ಗಳಿಕೆಯನ್ನೂ ಮಾಡಿತ್ತು. ಇದೀಗ ರಿಷಬ್ ಅವರು ಯುಗಾದಿ ದಿನವೇ ‘ಚಾಪ್ಟರ್ 2’ ಎಂದು ರಿಷಬ್ ಘೋಷಣೆ ಮಾಡಿದ್ದಲ್ಲದೆ ತನ್ನದೇ ಬ್ಯಾನರಿನಡಿ ಸಿನಿಮಾ ಮಾಡುತ್ತಾರೆಯೇ ಎಂಬ ಶಂಕೆಗೀಡು ಮಾಡಿದ್ದಾರೆ.
ಇಲ್ಲಿ ರಿಷಬ್ ‘ಚಾಪ್ಟರ್ 2’ ಘೋಷಣೆ ಮಾಡಿದ್ದಕ್ಕಿಂತಲೂ ಹೊಂಬಾಳೆ ಫಿಲಂಸನ್ನು ಅನ್ ಫಾಲೋ ಮಾಡಿದ್ದು ಹೆಚ್ಚು ಚರ್ಚೆ ಹುಟ್ಟುಹಾಕಿದೆ. ಯಾಕಂದ್ರೆ, ‘ಕಾಂತಾರ’ ಚಿತ್ರ ರಿಷಬ್ ಶೆಟ್ಟಿಯದ್ದಾಗಿದ್ದರೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದು ನಿರ್ಮಾಣ ಹೊಣೆ ಹೊತ್ತ ಹೊಂಬಾಳೆ ಫಿಲ್ಮ್ಸ್ ತಂಡ. ಆದರೆ, ಇದೀಗ ‘ಚಾಪ್ಟರ್ 2’ ಅಂತ ಸುಳಿವು ಕೊಟ್ಟು ಹೊಂಬಾಳೆ ತಂಡವನ್ನು ಅನ್ ಫಾಲೋ ಮಾಡಿದ್ದು ಹೊಸ ಚಿತ್ರಕ್ಕೆ ನಿರ್ಮಾಣದ ಹೊಣೆಯನ್ನು ಬೇರೆಯವರಿಗೆ ಕೊಡುತ್ತಾರಾ, ತಾವೇ ಮಾಡುತ್ತಾರೆಯೇ ಎಂಬ ಸಂಶಯ ಹುಟ್ಟಿಸಿದೆ.
ಆದರೆ ಪೋಸ್ಟ್ ನಲ್ಲಿ ಎಲ್ಲಿಯೂ ‘ಕಾಂತಾರ: ಚಾಪ್ಟರ್ 2’ ಎಂದು ಹೇಳಿಲ್ಲ. ಆದರೆ ಕಾಂತಾರ ಚಿತ್ರದ್ದೇ ಚಾಪ್ಟರ್ 2 ಎನ್ನುವ ಮಾತನ್ನು ಅಭಿಮಾನಿಗಳು ಹೇಳುತ್ತಿದ್ದಾರೆ. ಇದೇ ವೇಳೆ, ರಿಷಬ್ ಅವರು ಇನ್ಸ್ಟಾದಲ್ಲಿ ‘ಕಾಂತಾರ’ ಹಾಗೂ ‘ಹೊಂಬಾಳೆ ಫಿಲ್ಮ್ಸ್’ ಖಾತೆಗಳನ್ನು ಅನ್ಫಾಲೋ ಮಾಡಿದ್ದಾರೆ. ಹೀಗಾಗಿ ರಿಷಬ್ ಯಾವ ಅರ್ಥದಲ್ಲಿ ಈ ಟಾಂಗ್ ಕೊಟ್ಟಿದ್ದಾರೆಂದು ಗೊಂದಲವೂ ಸೃಷ್ಟಿಯಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm