ಬ್ರೇಕಿಂಗ್ ನ್ಯೂಸ್
07-04-26 10:48 pm HK News Staffer ಸಿನಿಮಾ
ಚೆನ್ನೈ, ಏ 07: ನಟಿ ತ್ರಿಷಾ ಕೃಷ್ಣನ್ ಅವರ ಬಗ್ಗೆ ಕಳೆದ ಕೆಲವು ವಾರಗಳಿಂದ ಹರಿದಾಡುತ್ತಿರುವ ವದಂತಿಗಳಿಗೆ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಿನಿಮಾ ಬಿಟ್ಟಿದ್ದಾರೆ, ಮದುವೆಯಾಗಿದ್ದಾರೆ, ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬ ಸುದ್ದಿಗಳ ನಡುವೆ ತ್ರಿಷಾ ತಮ್ಮದೇ ಶೈಲಿಯಲ್ಲಿ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ.
ಇತ್ತೀಚೆಗೆ ವಿಜಯ್ ಅವರೊಂದಿಗೆ ಮದುವೆ ಸಮಾರಂಭದಲ್ಲಿ ಕಾಣಿಸಿಕೊಂಡ ಬಳಿಕ ತ್ರಿಷಾ ಹೆಸರು ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ವಿಜಯ್ ಅವರ ವೈಯಕ್ತಿಕ ಜೀವನದ ವಿಚಾರಗಳ ಜೊತೆಗೆ ತ್ರಿಷಾ ಹೆಸರು ಸೇರಿಕೊಂಡ ಹಲವು ಊಹಾಪೋಹಗಳು ಹರಿದಾಡಿದವು.
ಈ ಎಲ್ಲಾ ಸುದ್ದಿಗಳಿಗೆ ಪ್ರತಿಕ್ರಿಯಿಸಿದ ತ್ರಿಷಾ, ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ವ್ಯಂಗ್ಯಭರಿತವಾಗಿ ಬರೆಯುತ್ತಾ, “ನಾನು ಸಿನಿಮಾ ರಂಗವನ್ನೇ ಬಿಟ್ಟಿದ್ದೇನೆ, ಶ್ರೀಮಂತ ಉದ್ಯಮಿಯೊಬ್ಬರನ್ನು ಮದುವೆಯಾಗಿದ್ದೇನೆ, ನಾಲ್ಕು ಮಕ್ಕಳಿಗೆ ತಾಯಿಯಾಗಿದ್ದೇನೆ... ಇನ್ನೇನಾದರೂ ಸೇರಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಹರಿದಾಡುತ್ತಿರುವ ಎಲ್ಲ ವದಂತಿಗಳು ಕಲ್ಪಿತವೆಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಸದ್ಯ ತ್ರಿಷಾ ತಮ್ಮ ಸಿನಿ ಜೀವನದಲ್ಲಿ ಬ್ಯುಸಿಯಾಗಿದ್ದು, ಆಪ್ತರೊಂದಿಗೆ ಸಮಯ ಕಳೆಯುತ್ತಾ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ ನಿರಂತರವಾಗಿ ಹರಡುತ್ತಿರುವ ಸುಳ್ಳು ಸುದ್ದಿಗಳಿಂದ ಬೇಸತ್ತು ಈ ಬಾರಿ ನೇರವಾಗಿ ಪ್ರತಿಕ್ರಿಯಿಸಲು ಮುಂದಾಗಿದ್ದಾರೆ.
ತ್ರಿಷಾ ಈ ಒಂದು ಪೋಸ್ಟ್ ಮೂಲಕ ಎಲ್ಲಾ ಗಾಸಿಪ್ಗಳಿಗೆ ತಕ್ಕ ಉತ್ತರ ನೀಡಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ವದಂತಿಗಳನ್ನು ಹರಡುವವರ ವಿರುದ್ಧವೂ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm