ಬ್ರೇಕಿಂಗ್ ನ್ಯೂಸ್
07-04-26 10:48 pm HK News Staffer ಸಿನಿಮಾ
ಚೆನ್ನೈ, ಏ 07: ನಟಿ ತ್ರಿಷಾ ಕೃಷ್ಣನ್ ಅವರ ಬಗ್ಗೆ ಕಳೆದ ಕೆಲವು ವಾರಗಳಿಂದ ಹರಿದಾಡುತ್ತಿರುವ ವದಂತಿಗಳಿಗೆ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಿನಿಮಾ ಬಿಟ್ಟಿದ್ದಾರೆ, ಮದುವೆಯಾಗಿದ್ದಾರೆ, ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬ ಸುದ್ದಿಗಳ ನಡುವೆ ತ್ರಿಷಾ ತಮ್ಮದೇ ಶೈಲಿಯಲ್ಲಿ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ.
ಇತ್ತೀಚೆಗೆ ವಿಜಯ್ ಅವರೊಂದಿಗೆ ಮದುವೆ ಸಮಾರಂಭದಲ್ಲಿ ಕಾಣಿಸಿಕೊಂಡ ಬಳಿಕ ತ್ರಿಷಾ ಹೆಸರು ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ವಿಜಯ್ ಅವರ ವೈಯಕ್ತಿಕ ಜೀವನದ ವಿಚಾರಗಳ ಜೊತೆಗೆ ತ್ರಿಷಾ ಹೆಸರು ಸೇರಿಕೊಂಡ ಹಲವು ಊಹಾಪೋಹಗಳು ಹರಿದಾಡಿದವು.
ಈ ಎಲ್ಲಾ ಸುದ್ದಿಗಳಿಗೆ ಪ್ರತಿಕ್ರಿಯಿಸಿದ ತ್ರಿಷಾ, ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ವ್ಯಂಗ್ಯಭರಿತವಾಗಿ ಬರೆಯುತ್ತಾ, “ನಾನು ಸಿನಿಮಾ ರಂಗವನ್ನೇ ಬಿಟ್ಟಿದ್ದೇನೆ, ಶ್ರೀಮಂತ ಉದ್ಯಮಿಯೊಬ್ಬರನ್ನು ಮದುವೆಯಾಗಿದ್ದೇನೆ, ನಾಲ್ಕು ಮಕ್ಕಳಿಗೆ ತಾಯಿಯಾಗಿದ್ದೇನೆ... ಇನ್ನೇನಾದರೂ ಸೇರಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಹರಿದಾಡುತ್ತಿರುವ ಎಲ್ಲ ವದಂತಿಗಳು ಕಲ್ಪಿತವೆಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಸದ್ಯ ತ್ರಿಷಾ ತಮ್ಮ ಸಿನಿ ಜೀವನದಲ್ಲಿ ಬ್ಯುಸಿಯಾಗಿದ್ದು, ಆಪ್ತರೊಂದಿಗೆ ಸಮಯ ಕಳೆಯುತ್ತಾ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ ನಿರಂತರವಾಗಿ ಹರಡುತ್ತಿರುವ ಸುಳ್ಳು ಸುದ್ದಿಗಳಿಂದ ಬೇಸತ್ತು ಈ ಬಾರಿ ನೇರವಾಗಿ ಪ್ರತಿಕ್ರಿಯಿಸಲು ಮುಂದಾಗಿದ್ದಾರೆ.
ತ್ರಿಷಾ ಈ ಒಂದು ಪೋಸ್ಟ್ ಮೂಲಕ ಎಲ್ಲಾ ಗಾಸಿಪ್ಗಳಿಗೆ ತಕ್ಕ ಉತ್ತರ ನೀಡಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ವದಂತಿಗಳನ್ನು ಹರಡುವವರ ವಿರುದ್ಧವೂ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm