ಬ್ರೇಕಿಂಗ್ ನ್ಯೂಸ್
04-01-21 02:52 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಜ.4 :ಸುಮಾರು ಐದು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ಹಿರಿಯ ಕಲಾವಿದ ಹಿರಿಯ ನಟ ಶನಿಮಹದೇವಪ್ಪ (90 ವರ್ಷ) ಭಾನುವಾರ ಸಂಜೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದೊಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಕೊರೊನಾ ಸೋಂಕಿಗೆ ತುತ್ತಾಗಿ ಕೊನೆಯುಸಿರೆಳೆದರು ಎಂದು ಹೇಳಲಾಗಿದೆ. ವರನಟ ಡಾ ರಾಜ್ ಕುಮಾರ್ ಅವರ ಬಹುತೇಕ ಚಿತ್ರಗಳಲ್ಲಿ ಶನಿ ಮಹಾದೇವಪ್ಪ ಅವರು ಇರುತ್ತಿದ್ದರು. ನಾಟಕ, ಸಿನಿಮಾಗಳ ವೈವಿಧ್ಯಮಯ ಪಾತ್ರಗಳ ಮೂಲಕ ಜನರಿಗೆ ಚಿರಪರಿಚಿತರಾಗಿದ್ದ ಕಲಾವಿದ ಇನ್ನಿಲ್ಲ ಎಂಬ ಸುದ್ದಿ ಕೇಳಿ ಸಿನಿಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಅವರ ಕಲಾಸೇವೆ ಚಿರಸ್ಥಾಯಿ ''ಇಂದು ನಮ್ಮನ್ನೆಲ್ಲ ಅಗಲಿದ ಹಿರಿಯ ಕಲಾವಿದರಾದ ಶನಿ ಮಹಾದೇವಪ್ಪನವರ (90 ವರ್ಷ) ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವೆ. ಸರಿ ಸುಮಾರು 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಸಿರುವ ಅವರ ಕಲಾಸೇವೆ ಚಿರಸ್ಥಾಯಿ. ಅವರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ'' - ಸುಮಲತಾ ಅಂಬರೀಶ್

ಪುನೀತ್ ಸಂತಾಪ ''ಅಪ್ಪಾಜಿಯವರ ಜೊತೆ ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ, ಕವಿರತ್ನ ಕಾಳಿದಾಸ, ಮೂರೂವರೆ ವಜ್ರಗಳು ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ ಹಿರಿಯ ನಟರಾದ ಶನಿ ಮಹದೇವಪ್ಪನವರು ನಮ್ಮನ್ನು ಅಗಲಿದ್ದಾರೆ'' - ಪುನೀತ್ ರಾಜ್ ಕುಮಾರ್

ಸುದೀಪ್ ಸಂತಾಪ ಹಿರಿಯ ಕಲಾವಿದ, ಅಣ್ಣಾವ್ರ ಚಿತ್ರಗಳಲ್ಲಿ ಹೆಚ್ಚು ನಟಿಸಿರುವ ಶನಿ ಮಹಾದೇವಪ್ಪ ಅವರ ನಿಧನಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಸಂತಾಪ ಸೂಚಿಸಿದ್ದಾರೆ. ತಮ್ಮ ಟ್ವಿಟ್ಟರ್ನಲ್ಲಿ ಶನಿ ಮಹಾದೇವಪ್ಪ ಅವರ ಫೋಟೋ ಹಂಚಿಕೊಂಡು ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಮಾವ ಎಂದು ಕರೆಯುತ್ತಿದ್ದೆ- ಜಗ್ಗೇಶ್ ''1984 ರಿಂದ ಬಲ್ಲೆ ಈತನ ಮಾವ ಎಂದು ಕರೆಯುತ್ತಿದ್ದೆ. ಅಣ್ಣನ ಆತ್ಮೀಯ! ಸಕ್ಕರೆ ಖಾಯಿಲೆಯಿಂದ ಎರಡು ಕಣ್ಣು ಕಳೆದುಕೊಂಡಿದ್ದ. 10 ವರ್ಷ ಹಿಂದೆ ಮೇಯರ್ ಫಂಡ್ನಿಂದ ಈತನಿಗೆ ವಿಶೇಷ ಪ್ಯಾಕೇಜ್ 5 ಲಕ್ಷ ಬರುವಂತೆ ಶ್ರಮಿಸಿದ್ದೆ ಹಾಗು ವೈಯಕ್ತಿಕವಾಗಿ ನಾನು ಬ್ಯಾಂಕ್ ಜನಾರ್ದನ ಜೂತೆ ಹೋಗಿ ಕೈಲಾದ ಸಹಾಯ ಮಾಡಿದ್ದೆ. 80 ವರ್ಷ ವಯಸ್ಸು ದಾಟಿದೆ. ಇವರ ಆತ್ಮಕ್ಕೆ ಶಾಂತಿ'' - ಜಗ್ಗೇಶ್
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm