ಬ್ರೇಕಿಂಗ್ ನ್ಯೂಸ್
05-01-21 04:45 pm Source: FILMIBEAT Shruthi Gk ಸಿನಿಮಾ
ತಮಿಳಿನ ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಸದ್ಯ ವಿಜಯ್ ನಟನೆಯ ಮಾಸ್ಟರ್ ಸಿನಿಮಾದ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ದಳಪತಿ ವಿಜಯ್ ಅಭಿನಯದ ಮಾಸ್ಟರ್ ಸಿನಿಮಾ ಇದೇ ತಿಂಗಳು 13ರಂದು ರಿಲೀಸ್ ಆಗುತ್ತಿದೆ. ತಮಿಳು ಮಾತ್ರವಲ್ಲದೆ ದಕ್ಷಿಣ ಭಾರತದ ಎಲ್ಲಾ ಭಾಷೆ ಜೊತೆಗೆ ಹಿಂದಿಯಲ್ಲೂ ತೆರೆಗೆ ಬರುತ್ತಿರುವುದು ವಿಶೇಷ. ಸದ್ಯ ಮಾಸ್ಟರ್ ಸಿನಿಮಾದ ರಿಲೀಸ್ ನ ಬ್ಯುಸಿಯಲ್ಲಿರುವ ನಿರ್ದೇಶಕ ಲೋಕೇಶ್ ಬಗ್ಗೆ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ಹೌದು, ಮಾಸ್ಟರ್ ರಿಲೀಸ್ ಗೂ ಮೊದಲೇ ಲೋಕೇಶ್ ತೆಲುಗಿನ ಸ್ಟಾರ್ ನಟನ ಜೊತೆ ಸಿನಿಮಾ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದಹಾಗೆ ಆ ನಟ ನಟ ಮತ್ಯಾರು ಅಲ್ಲ ರಾಮ್ ಚರಣ್.
ಹೌದು, ಈಗಾಗಲೇ ಲೋಕೇಶ್, ರಾಮ್ ಚರಣ್ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನುವ ಮಾತುಗಳು ಕಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ಅಂದಹಾಗೆ ಮಾಸ್ಟರ್ ಸಿನಿಮಾ ಬಳಿಕ ಲೋಕೇಶ್ ಜೊತೆ ಸಿನಿಮಾ ಮಾಡಲು ಸ್ಟಾರ್ ನಟರು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಲೋಕೇಶ್, ರಾಮ್ ಚರಣ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ರಾಮ್ ಚರಣ್ ಗಾಗಿ ಸ್ಕ್ರಿಪ್ಟ್ ಕೆಲಸವನ್ನು ಪ್ರಾರಂಭಿಸಿದ್ದಾರಂತೆ.
ಅಂದಹಾಗೆ ಲೋಕೇಶ್ ಈಗಾಗಲೇ ಕಮಲ್ ಹಾಸನ್ ಜೊತೆ ವಿಕ್ರಮ್ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿದೆ. ಕಮಲ್ ಹಾಸನ್ ಜೊತೆ ಸಿನಿಮಾ ಮುಗಿದ ಬಳಿಕ ತೆಲುಗು ಸಿನಿಮಾರಂಗಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ತಮಿಳಿನಲ್ಲಿ 4 ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಲೋಕೇಶ್ ಒಂದು ವೇಳೆ ರಾಮ್ ಚರಣ್ ಗೆ ಆಕ್ಷನ್ ಕಟ್ ಹೇಳಿದ್ರೆ ಮೊದಲ ಬಾರಿಗೆ ತೆಲುಗಿನಲ್ಲಿ ಅದೃಷ್ಟ ಪರೀಕ್ಷೆಗೆ ನಿಲ್ಲಲಿದ್ದಾರೆ. ರಾಮ್ ಚರಣ್ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಸಿನಿಮಾ ನಿರ್ಮಾಣದ ಕಡೆಯೂ ಗಮನ ಹರಿಸಿದ್ದಾರೆ. ಇತ್ತ ಲೋಕೇಶ್ ಕನಗರಾಜ್ ಸಹ ಕಮಲ್ ಜೊತೆ ವಿಕ್ರಮ್ ನಲ್ಲಿ ನಿರತರಾಗಿದ್ದಾರೆ.
ವಿಕ್ರಮ್ ಬಳಿಕ ರಾಮ್ ಚರಣ್ ಜೊತೆ ಹೊಸ ಸಿನಿಮಾ ಪ್ರಾರಂಭ ಮಾಡುವ ಸಾಧ್ಯತೆ ಇದೆ. ಸದ್ಯ ಅಭಿಮಾನಿಗಳ ಚಿತ್ತ ಮಾಸ್ಟರ್ ಸಿನಿಮಾದ ಮೇಲಿದೆ. ತಮಿಳು ನಾಡಿನಲ್ಲಿ ಈಗಾಗಲೇ ಶೇ.100 ಆಸನ ಭರ್ತಿಗೆ ಅವಕಾಶ ನೀಡಿದ್ದಾರೆ. ಲಾಕ್ ಡೌನ್ ಬಳಿಕ ರಿಲೀಸ್ ಆಗುತ್ತಿರುವ ಸ್ಟಾರ್ ನಟನ ಸಿನಿಮಾ ಇದಾಗಿದ್ದು, ಅಭಿಮಾನಿಗಳ ಪ್ರತಿಕ್ರಿಯೆ ಹೇಗಿರಲಿದೆ, ಚಿತ್ರಮಂದಿರಕ್ಕ ಜನ ಬರ್ತಾರಾ ಎನ್ನುವ ಕುತೂಹಲ ಎಲ್ಲರೂ ಹೆಚ್ಚಾಗಿದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm