ಬ್ರೇಕಿಂಗ್ ನ್ಯೂಸ್
05-01-21 04:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಮಗನ ಮುಡಿ ಕೊಟ್ಟ ಬಳಿಕ ರಾಧಿಕಾ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯಥರ್ವ ಯಶ್ ಹೊಸ ಗೆಟಪ್ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದಾರೆ.
ಅಂದಹಾಗೆ ಯಥರ್ವ ಜನಿಸಿ 14 ತಿಂಗಳಾಗಿದೆ. ಇತ್ತೀಚಿಗಷ್ಟೆ ಅಂದರೆ ಅಕ್ಟೋಬರ್ 30ರಂದು ಮಗನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದರು. ಕೊರೊನಾ ಹಾವಳಿಯ ಪರಿಣಾಮ ಕುಟುಂಬದವರು ಮತ್ತು ತೀರ ಆಪ್ತರ ನಡುವೆ ಗೋವಾದ ಕಡಲ ಕಿನಾರೆಯಲ್ಲಿ ಮಗನ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ್ದರು.

ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ ತಂದೆ-ಮಗ
ಮೊದಲ ವರ್ಷದ ಹುಟ್ಟುಹಬ್ಬ ಆಚರಿಸಿ ಎರಡು ತಿಂಗಳಾಗಿದೆ. ಇದೀಗ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ಯಥರ್ವ ತಂದೆಯ ತೋಳಿನಲ್ಲಿ ನಗೆಬೀರುತ್ತಿರುವ ಫೋಟೋವನ್ನು ರಾಧಿಕಾ ಹಂಚಿಕೊಂಡಿದ್ದಾರೆ. ಯಶ್ ಮತ್ತು ಯಥರ್ವ ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಪಂಚೆ ಮತ್ತು ಹಸಿರು ಬಣ್ಣದ ಶರ್ಟ್ ನ್ ನಲ್ಲಿ ಪುಟ್ಟ ಪೋರ ಯಥರ್ವ ಕಂಗೊಳಿಸುತ್ತಿದ್ದಾರೆ.

ತನ್ನದೇ ಗೆಟಪ್ ನೋಡಿ ತಲೆಮೇಲೆ ಕೈ ಇಟ್ಟ ಯಥರ್ವ
ಮತ್ತೊಂದು ಫೋಟೋದಲ್ಲಿ ಯಥರ್ವ ಕನ್ನಡಿ ನೋಡಿಕೊಳ್ಳುತ್ತಾ ತನ್ನದೆ ಗೆಟಪ್ ನೋಡಿ ಅಶ್ಚರ್ಯಗೊಂಡು ತೆಲೆಮೇಲೆ ಕೈಹೊತ್ತು ಕುಳಿತಿದ್ದಾನೆ. ಈ ಎಡರು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಮೆಚ್ಚುಗೆ ಹರಿದುಬರುತ್ತಿದೆ.

ನಂಜುಂಡೇಶ್ವರ ಸನ್ನಿಧಿಯಲ್ಲಿ ಮಗಳ ಮುಡಿ ಕೊಡಿಸಿದ್ದ ಯಶ್ ದಂಪತಿ ಅಂದಹಾಗೆ ಯಶ್ ಮತ್ತು ರಾಧಿಕಾ ದಂಪತಿ ಮೊದಲ ಮಗಳು ಐರಾ ಮುಡಿಯನ್ನು ದಕ್ಷಿಣ ಕಾಶಿ ಎಂದೇ ಖ್ಯಾತಿಗಳಿಸಿರುವ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಕೊಡಿಸುವ ಮೂಲಕ ಹರಕೆ ಪೂರೈಸಿದ್ದರು. ಕಳೆದ ವರ್ಷ ಮಾರ್ಚ್ ನಲ್ಲಿ ಐರಾ ಕೇಶಮುಂಡನ ಮಾಡಿಸಿದ್ದರು. ಇದೀಗ ಎರಡನೇ ಪುತ್ರ ಯಥರ್ವ ಯಶ್ ಗೆ ಕೇಶ ಮುಂಡನಮಾಡಿಸಿದ್ದು, ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm