ಬ್ರೇಕಿಂಗ್ ನ್ಯೂಸ್
05-01-21 04:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಮಗನ ಮುಡಿ ಕೊಟ್ಟ ಬಳಿಕ ರಾಧಿಕಾ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯಥರ್ವ ಯಶ್ ಹೊಸ ಗೆಟಪ್ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದಾರೆ.
ಅಂದಹಾಗೆ ಯಥರ್ವ ಜನಿಸಿ 14 ತಿಂಗಳಾಗಿದೆ. ಇತ್ತೀಚಿಗಷ್ಟೆ ಅಂದರೆ ಅಕ್ಟೋಬರ್ 30ರಂದು ಮಗನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದರು. ಕೊರೊನಾ ಹಾವಳಿಯ ಪರಿಣಾಮ ಕುಟುಂಬದವರು ಮತ್ತು ತೀರ ಆಪ್ತರ ನಡುವೆ ಗೋವಾದ ಕಡಲ ಕಿನಾರೆಯಲ್ಲಿ ಮಗನ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ್ದರು.

ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ ತಂದೆ-ಮಗ
ಮೊದಲ ವರ್ಷದ ಹುಟ್ಟುಹಬ್ಬ ಆಚರಿಸಿ ಎರಡು ತಿಂಗಳಾಗಿದೆ. ಇದೀಗ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ಯಥರ್ವ ತಂದೆಯ ತೋಳಿನಲ್ಲಿ ನಗೆಬೀರುತ್ತಿರುವ ಫೋಟೋವನ್ನು ರಾಧಿಕಾ ಹಂಚಿಕೊಂಡಿದ್ದಾರೆ. ಯಶ್ ಮತ್ತು ಯಥರ್ವ ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಪಂಚೆ ಮತ್ತು ಹಸಿರು ಬಣ್ಣದ ಶರ್ಟ್ ನ್ ನಲ್ಲಿ ಪುಟ್ಟ ಪೋರ ಯಥರ್ವ ಕಂಗೊಳಿಸುತ್ತಿದ್ದಾರೆ.

ತನ್ನದೇ ಗೆಟಪ್ ನೋಡಿ ತಲೆಮೇಲೆ ಕೈ ಇಟ್ಟ ಯಥರ್ವ
ಮತ್ತೊಂದು ಫೋಟೋದಲ್ಲಿ ಯಥರ್ವ ಕನ್ನಡಿ ನೋಡಿಕೊಳ್ಳುತ್ತಾ ತನ್ನದೆ ಗೆಟಪ್ ನೋಡಿ ಅಶ್ಚರ್ಯಗೊಂಡು ತೆಲೆಮೇಲೆ ಕೈಹೊತ್ತು ಕುಳಿತಿದ್ದಾನೆ. ಈ ಎಡರು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಮೆಚ್ಚುಗೆ ಹರಿದುಬರುತ್ತಿದೆ.

ನಂಜುಂಡೇಶ್ವರ ಸನ್ನಿಧಿಯಲ್ಲಿ ಮಗಳ ಮುಡಿ ಕೊಡಿಸಿದ್ದ ಯಶ್ ದಂಪತಿ ಅಂದಹಾಗೆ ಯಶ್ ಮತ್ತು ರಾಧಿಕಾ ದಂಪತಿ ಮೊದಲ ಮಗಳು ಐರಾ ಮುಡಿಯನ್ನು ದಕ್ಷಿಣ ಕಾಶಿ ಎಂದೇ ಖ್ಯಾತಿಗಳಿಸಿರುವ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಕೊಡಿಸುವ ಮೂಲಕ ಹರಕೆ ಪೂರೈಸಿದ್ದರು. ಕಳೆದ ವರ್ಷ ಮಾರ್ಚ್ ನಲ್ಲಿ ಐರಾ ಕೇಶಮುಂಡನ ಮಾಡಿಸಿದ್ದರು. ಇದೀಗ ಎರಡನೇ ಪುತ್ರ ಯಥರ್ವ ಯಶ್ ಗೆ ಕೇಶ ಮುಂಡನಮಾಡಿಸಿದ್ದು, ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm