ಬ್ರೇಕಿಂಗ್ ನ್ಯೂಸ್
15-05-26 12:03 pm HK News Staffer ಸಿನಿಮಾ
ಬೆಂಗಳೂರು, ಮೇ 15: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ಹಿನ್ನಡೆ ಎದುರಾಗಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಕ್ಷಣ ಪರಿಗಣಿಸಲು ನ್ಯಾಯಾಲಯ ನಿರಾಕರಿಸಿದ್ದು, ಪ್ರಕರಣದ ಸಾಕ್ಷ್ಯ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲು ಸೂಚನೆ ನೀಡಿದೆ. ಅಲ್ಲದೆ, ಆ ಅವಧಿಯ ಬಳಿಕವೇ ಜಾಮೀನಿನ ವಿಚಾರವನ್ನು ಪರಿಗಣಿಸಬಹುದೆಂದು ಸ್ಪಷ್ಟಪಡಿಸಿದೆ.
ಈ ಮೂಲಕ ನಟ ದರ್ಶನ್ ಅವರಿಗೆ ಕನಿಷ್ಠ ಇನ್ನೂ ಒಂದು ವರ್ಷ ಜೈಲುವಾಸ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ.
ಜೈಲಿನಲ್ಲಿರುವ ಸೌಲಭ್ಯಗಳ ಕೊರತೆ, ಆರೋಗ್ಯ ಸಮಸ್ಯೆ, ಕುಟುಂಬ ಸದಸ್ಯರನ್ನು ಭೇಟಿಯಾಗಲು ಅವಕಾಶ ನಿರಾಕರಣೆ, ಸಹ ಕೈದಿಗಳಿಂದ ಕಿರುಕುಳ ಹಾಗೂ ಇನ್ನೂ ಕ್ವಾರಂಟೈನ್ ಸೆಲ್ನಲ್ಲೇ ಇರಿಸಲಾಗಿದೆ ಎಂಬ ಅಂಶಗಳನ್ನು ಉಲ್ಲೇಖಿಸಿ ದರ್ಶನ್ ಪರ ವಕೀಲರು ಸುಪ್ರೀಂ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.
ಇಂದು ನಡೆದ ವಿಚಾರಣೆಯಲ್ಲಿ ದರ್ಶನ್ ಪರ ಖ್ಯಾತ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿ, “ಪ್ರಕರಣದಲ್ಲಿ 272ಕ್ಕೂ ಹೆಚ್ಚು ಸಾಕ್ಷಿಗಳಿದ್ದು, ಈವರೆಗೆ ಕೇವಲ 10 ಮಂದಿಯ ಸಾಕ್ಷ್ಯ ವಿಚಾರಣೆ ಮಾತ್ರ ನಡೆದಿದೆ. ವಿಚಾರಣೆ ವಿಳಂಬವಾಗುತ್ತಿರುವುದರಿಂದ ಆರೋಪಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ಉಂಟಾಗಿದೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಇದಕ್ಕೆ ಪ್ರತಿಯಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಿದ್ಧಾರ್ಥ್ ಲೂತ್ರಾ ತೀವ್ರ ಆಕ್ಷೇಪ ವ್ಯಕ್ತಪಡಿಸಿ, “ಸಾಕ್ಷಿಗಳ ಮೇಲೆ ಯಾವ ರೀತಿಯ ಒತ್ತಡ ಮತ್ತು ಪ್ರಭಾವ ಬೀರಲಾಗಿದೆ ಎಂಬುದನ್ನು ಸಂಪೂರ್ಣವಾಗಿ ಹೇಳಿದರೆ ಜಾಮೀನು ಅರ್ಜಿಯೇ ತಿರಸ್ಕೃತವಾಗುತ್ತದೆ” ಎಂದು ವಾದಿಸಿದರು.
ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿಗಳು, “ಒಂದು ವರ್ಷದೊಳಗೆ ಕನಿಷ್ಠ 60 ಸಾಕ್ಷಿಗಳ ವಿಚಾರಣೆ ಪೂರ್ಣಗೊಳಿಸಬೇಕು. ಬಳಿಕ ಆರೋಪಿಯು ವಿಚಾರಣಾ ನ್ಯಾಯಾಲಯದಲ್ಲೇ ಜಾಮೀನಿಗೆ ಅರ್ಜಿ ಸಲ್ಲಿಸಬಹುದು” ಎಂದು ಸೂಚಿಸಿದರು.
ಇದೇ ವೇಳೆ, ಜೈಲಿನಲ್ಲಿ ಇತರ ಕೈದಿಗಳಿಗೆ ನೀಡಲಾಗುವ ಸೌಲಭ್ಯಗಳನ್ನು ದರ್ಶನ್ಗೂ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಆದರೆ, ಕ್ವಾರಂಟೈನ್ ಸೆಲ್ನಲ್ಲಿರಿಸುವ ವಿಚಾರದಲ್ಲಿ ಯಾವುದೇ ವಿಶೇಷ ಆದೇಶ ನೀಡಲು ನ್ಯಾಯಾಲಯ ನಿರಾಕರಿಸಿದೆ.
ರೆಣುಕಾಸ್ವಾಮಿ ಕೊಲೆ ಪ್ರಕರಣ ರಾಜ್ಯದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ದರ್ಶನ್ ಬಂಧನದ ಬಳಿಕ ಅಭಿಮಾನಿಗಳಲ್ಲೂ ತೀವ್ರ ಆತಂಕ ಮತ್ತು ಕುತೂಹಲ ಮುಂದುವರಿದಿದೆ. ಇದೀಗ ಸುಪ್ರೀಂ ಕೋರ್ಟ್ನ ಈ ತೀರ್ಮಾನ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಖ್ಯಾತಿ, ಹಣ ಅಥವಾ ಪ್ರಭಾವಕ್ಕಿಂತ ನ್ಯಾಯ ಮತ್ತು ಸತ್ಯವೇ ಅಂತಿಮವಾಗಿ ಮೇಲುಗೈ ಸಾಧಿಸುತ್ತದೆ. ಸಮಾಜದಲ್ಲಿ ಹಿಂಸೆ ಮತ್ತು ಕಾನೂನುಬಾಹಿರ ಕೃತ್ಯಗಳಿಗೆ ಅವಕಾಶ ನೀಡದೆ, ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am