ಬ್ರೇಕಿಂಗ್ ನ್ಯೂಸ್
            
                        06-01-21 12:32 pm Headline Karnataka News Network ಸಿನಿಮಾ
            ಬೆಂಗಳೂರು, ಜ.6: ಆರೆಸ್ಸೆಸ್ ಮುಖಂಡನ ಸೋಗಿನಲ್ಲಿ ದೊಡ್ಡ ಸ್ಥಾನ ಕೊಡಿಸುವ ಆಮಿಷವೊಡ್ಡಿ ಸಿಕ್ಕಿಬಿದ್ದಿರುವ ಯುವರಾಜ್ ಅಲಿಯಾಸ್ ಸ್ವಾಮಿಗೆ ಕನ್ನಡದ ಖ್ಯಾತ ನಟಿ ರಾಧಿಕಾ ಜೊತೆಗೆ ಲಿಂಕ್ ಇರುವ ವಿಚಾರ ಬೆಳಕಿಗೆ ಬಂದಿದೆ.
ಸಿಸಿಬಿ ಪೊಲೀಸರು ಇತ್ತೀಚೆಗೆ ಯುವರಾಜ್ ಮನೆ ಮೇಲೆ ದಾಳಿ ನಡೆಸಿ ಬಂಧಿಸಿದ್ದರು. ವಿಚಾರಣೆ ವೇಳೆ ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಮತ್ತು ಅವರ ಸಹೋದರನ ಖಾತೆಗೆ ಭಾರಿ ಮೊತ್ತದ ಹಣ ವರ್ಗಾವಣೆ ಮಾಡಿರುವ ವಿಚಾರವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆ ರಾಧಿಕಾ ಮತ್ತು ಸಹೋದರನ ಜೊತೆ ಯುವರಾಜ್ ಸ್ವಾಮಿ ನೇರ ಲಿಂಕ್ ಇಟ್ಟುಕೊಂಡಿರುವ ಅನುಮಾನ ಪೊಲೀಸರಿಗೆ ಶುರುವಾಗಿದೆ. ಈ ಸಂಬಂಧ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಪ್ರತಿಕ್ರಿಯೆ ನೀಡಿದ್ದು, ಆತ ನಮ್ಮ ಕುಟುಂಬಕ್ಕೆ ಪರಿಚಿತ ಅಷ್ಟೇ. ಆದರೆ, ಹಣಕಾಸಿನ ವ್ಯವಹಾರ ಏನೂ ಇಲ್ಲ ಎಂದಿದ್ದಾರೆ.
 

 
ನಮ್ಮ ಕುಟುಂಬಕ್ಕೆ ಸ್ವಾಮೀಜಿಯಾಗಿ ಪರಿಚಿತರು !
''ಯುವರಾಜ್ ಸ್ವಾಮಿ ಎಂಬ ವ್ಯಕ್ತಿ ನಮ್ಮ ಕುಟುಂಬಕ್ಕೆ 15 ವರ್ಷದಿಂದ ಪರಿಚಿತರು. ಅವರ ಭವಿಷ್ಯವನ್ನು ನಮ್ಮ ತಂದೆ- ತಾಯಿ ಹೆಚ್ಚು ನಂಬುತ್ತಿದ್ದರು. ನಮ್ಮ ತಂದೆ ಸಾವಿನ ವಿಚಾರದಲ್ಲೂ ಅವರು ಹೇಳಿದ ಭವಿಷ್ಯ ನಿಜವಾಗಿತ್ತು ಎಂದು ತಾಯಿ ಹೇಳಿದ್ದರು. ಹೀಗೆ, ನಮ್ಮ ಕುಟುಂಬಕ್ಕೆ ಪರಿಚಿತರು ಅಷ್ಟೇ. ಇದನ್ನು ಬಿಟ್ಟು ಬೇರೆ ಯಾವುದೇ ರೀತಿಯ ವ್ಯವಹಾರಿಕ ಸಂಬಂಧ ನಮ್ಮ ನಡುವೆ ಇಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ.

ಸಿಸಿಬಿ ವಿಚಾರಣೆಗೆ ಕರೆದಿದ್ದರು !
ಯುವರಾಜ್ ಜೊತೆಗೆ ಸಂಪರ್ಕ ಇಟ್ಟುಕೊಂಡಿರುವುದು ಬಯಲಾಗುತ್ತಲೇ ಸಿಸಿಬಿ ಪೊಲೀಸರು ರವಿರಾಜ್ ಅವರನ್ನು ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಸ್ವತಃ ರವಿರಾಜ್ ಮಾಹಿತಿ ಹೇಳಿಕೊಂಡಿದ್ದಾರೆ. 'ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದರು. ಒಂದು ಗಂಟೆ ಕಾಲ ವಿಚಾರಣೆಗೆ ಒಳಪಟ್ಟಿದ್ದೆ'' ಎಂದು ಒಪ್ಪಿಕೊಂಡಿದ್ದಾರೆ. 
 

 
ಬಂಧಿತ ಯುವರಾಜ್ ಖಾತೆಯಿಂದ ರಾಧಿಕಾ ಕುಮಾರಸ್ವಾಮಿ ಹಾಗು ರವಿರಾಜ್ ಇಬ್ಬರಿಗೂ ಹಣ ವರ್ಗಾವಣೆ ಆಗಿದೆ ಎನ್ನಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ರವಿರಾಜ್ ''ನನ್ನ ಖಾತೆಗೆ ಹಣ ವರ್ಗಾವಣೆ ಆಗಿಲ್ಲ, ನನಗೂ ಮತ್ತು ಅವರ ನಡುವೆ ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ. ನನ್ನ ಸಹೋದರಿ ಕುರಿತು ನನಗೆ ಸದ್ಯಕ್ಕೆ ಮಾಹಿತಿ ಇಲ್ಲ'' ಎಂದು ಹೇಳಿದ್ದಾರೆ.
ಸದ್ಯ ಬೆಂಗಳೂರಿನಿಂದ ಹೊರಗೆ ಇರುವ ರಾಧಿಕಾ ಕುಮಾರಸ್ವಾಮಿ ಮತ್ತು ರವಿರಾಜ್ ಮಧ್ಯಾಹ್ನದ ಬಳಿಕ ಮನೆಗೆ ಬರಲಿದ್ದಾರೆ. ಆ ನಂತರ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಸ್ಪಷ್ಟನೆ ನೀಡಲಿದ್ದಾರೆ ಎಂದು ರವಿರಾಜ್ ಮಾಹಿತಿ ನೀಡಿದ್ದಾರೆ.
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm