ಬ್ರೇಕಿಂಗ್ ನ್ಯೂಸ್
06-01-21 12:32 pm Headline Karnataka News Network ಸಿನಿಮಾ
ಬೆಂಗಳೂರು, ಜ.6: ಆರೆಸ್ಸೆಸ್ ಮುಖಂಡನ ಸೋಗಿನಲ್ಲಿ ದೊಡ್ಡ ಸ್ಥಾನ ಕೊಡಿಸುವ ಆಮಿಷವೊಡ್ಡಿ ಸಿಕ್ಕಿಬಿದ್ದಿರುವ ಯುವರಾಜ್ ಅಲಿಯಾಸ್ ಸ್ವಾಮಿಗೆ ಕನ್ನಡದ ಖ್ಯಾತ ನಟಿ ರಾಧಿಕಾ ಜೊತೆಗೆ ಲಿಂಕ್ ಇರುವ ವಿಚಾರ ಬೆಳಕಿಗೆ ಬಂದಿದೆ.
ಸಿಸಿಬಿ ಪೊಲೀಸರು ಇತ್ತೀಚೆಗೆ ಯುವರಾಜ್ ಮನೆ ಮೇಲೆ ದಾಳಿ ನಡೆಸಿ ಬಂಧಿಸಿದ್ದರು. ವಿಚಾರಣೆ ವೇಳೆ ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಮತ್ತು ಅವರ ಸಹೋದರನ ಖಾತೆಗೆ ಭಾರಿ ಮೊತ್ತದ ಹಣ ವರ್ಗಾವಣೆ ಮಾಡಿರುವ ವಿಚಾರವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆ ರಾಧಿಕಾ ಮತ್ತು ಸಹೋದರನ ಜೊತೆ ಯುವರಾಜ್ ಸ್ವಾಮಿ ನೇರ ಲಿಂಕ್ ಇಟ್ಟುಕೊಂಡಿರುವ ಅನುಮಾನ ಪೊಲೀಸರಿಗೆ ಶುರುವಾಗಿದೆ. ಈ ಸಂಬಂಧ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಪ್ರತಿಕ್ರಿಯೆ ನೀಡಿದ್ದು, ಆತ ನಮ್ಮ ಕುಟುಂಬಕ್ಕೆ ಪರಿಚಿತ ಅಷ್ಟೇ. ಆದರೆ, ಹಣಕಾಸಿನ ವ್ಯವಹಾರ ಏನೂ ಇಲ್ಲ ಎಂದಿದ್ದಾರೆ.

ನಮ್ಮ ಕುಟುಂಬಕ್ಕೆ ಸ್ವಾಮೀಜಿಯಾಗಿ ಪರಿಚಿತರು !
''ಯುವರಾಜ್ ಸ್ವಾಮಿ ಎಂಬ ವ್ಯಕ್ತಿ ನಮ್ಮ ಕುಟುಂಬಕ್ಕೆ 15 ವರ್ಷದಿಂದ ಪರಿಚಿತರು. ಅವರ ಭವಿಷ್ಯವನ್ನು ನಮ್ಮ ತಂದೆ- ತಾಯಿ ಹೆಚ್ಚು ನಂಬುತ್ತಿದ್ದರು. ನಮ್ಮ ತಂದೆ ಸಾವಿನ ವಿಚಾರದಲ್ಲೂ ಅವರು ಹೇಳಿದ ಭವಿಷ್ಯ ನಿಜವಾಗಿತ್ತು ಎಂದು ತಾಯಿ ಹೇಳಿದ್ದರು. ಹೀಗೆ, ನಮ್ಮ ಕುಟುಂಬಕ್ಕೆ ಪರಿಚಿತರು ಅಷ್ಟೇ. ಇದನ್ನು ಬಿಟ್ಟು ಬೇರೆ ಯಾವುದೇ ರೀತಿಯ ವ್ಯವಹಾರಿಕ ಸಂಬಂಧ ನಮ್ಮ ನಡುವೆ ಇಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ.

ಸಿಸಿಬಿ ವಿಚಾರಣೆಗೆ ಕರೆದಿದ್ದರು !
ಯುವರಾಜ್ ಜೊತೆಗೆ ಸಂಪರ್ಕ ಇಟ್ಟುಕೊಂಡಿರುವುದು ಬಯಲಾಗುತ್ತಲೇ ಸಿಸಿಬಿ ಪೊಲೀಸರು ರವಿರಾಜ್ ಅವರನ್ನು ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಸ್ವತಃ ರವಿರಾಜ್ ಮಾಹಿತಿ ಹೇಳಿಕೊಂಡಿದ್ದಾರೆ. 'ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದರು. ಒಂದು ಗಂಟೆ ಕಾಲ ವಿಚಾರಣೆಗೆ ಒಳಪಟ್ಟಿದ್ದೆ'' ಎಂದು ಒಪ್ಪಿಕೊಂಡಿದ್ದಾರೆ.

ಬಂಧಿತ ಯುವರಾಜ್ ಖಾತೆಯಿಂದ ರಾಧಿಕಾ ಕುಮಾರಸ್ವಾಮಿ ಹಾಗು ರವಿರಾಜ್ ಇಬ್ಬರಿಗೂ ಹಣ ವರ್ಗಾವಣೆ ಆಗಿದೆ ಎನ್ನಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ರವಿರಾಜ್ ''ನನ್ನ ಖಾತೆಗೆ ಹಣ ವರ್ಗಾವಣೆ ಆಗಿಲ್ಲ, ನನಗೂ ಮತ್ತು ಅವರ ನಡುವೆ ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ. ನನ್ನ ಸಹೋದರಿ ಕುರಿತು ನನಗೆ ಸದ್ಯಕ್ಕೆ ಮಾಹಿತಿ ಇಲ್ಲ'' ಎಂದು ಹೇಳಿದ್ದಾರೆ.
ಸದ್ಯ ಬೆಂಗಳೂರಿನಿಂದ ಹೊರಗೆ ಇರುವ ರಾಧಿಕಾ ಕುಮಾರಸ್ವಾಮಿ ಮತ್ತು ರವಿರಾಜ್ ಮಧ್ಯಾಹ್ನದ ಬಳಿಕ ಮನೆಗೆ ಬರಲಿದ್ದಾರೆ. ಆ ನಂತರ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಸ್ಪಷ್ಟನೆ ನೀಡಲಿದ್ದಾರೆ ಎಂದು ರವಿರಾಜ್ ಮಾಹಿತಿ ನೀಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm