ಬ್ರೇಕಿಂಗ್ ನ್ಯೂಸ್
06-01-21 12:47 pm Source: FILMIBEAT ಸಿನಿಮಾ
ತೆಲುಗಿನ ಖ್ಯಾತ ಗೀತರಚನೆಕಾರ ಮತ್ತು ಸಂಭಾಷಣೆಗಾರ ವೆನ್ನಲಕಂಟಿ ರಾಜೇಶ್ವರ ಪ್ರಸಾದ್ ಮಂಗಳವಾರ ಚೆನ್ನೈನ ತನ್ನ ನಿವಾಸದಲ್ಲಿ ನಿಧರಾಗಿದ್ದಾರೆ. 64 ವರ್ಷದ ವೆನ್ನಲಕಂಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
3 ದಶಕಗಳ ವೃತ್ತಿ ಜೀವನದಲ್ಲಿ ವೆನ್ನಲಕಂಟಿ ಸುಮಾರು 2000ಕ್ಕೂ ಹೆಚ್ಚು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. 300 ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಪ್ರಸಿದ್ಧಿ ಗಳಿಸಿದ್ದ ವೆನ್ನಲಕಾಂತಿ1957ರಲ್ಲಿ ನೆಲ್ಲೂರಿನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ವೆನ್ನಲಕಂಟಿ ಕವನ ಬರೆಯಲು ಪ್ರಾರಂಭಿಸಿದ್ದರು.
1986ರಲ್ಲಿ, ವೆನ್ನಲಕಂಟಿ 'ಶ್ರೀ ರಾಮಚಂದ್ರಡು' ಚಿತ್ರದ ಹಾಡುಗಳಿಗೆ ಸಾಹಿತ್ಯ ರಚಿಸುವ ಮೂಲಕ ಗೀತರಚನೆಕಾರರಾಗಿ ಪದಾರ್ಪಣೆ ಮಾಡಿದರು. ವೆನ್ನಲಕಂಟಿ ರಚನೆಯ ಅನೇಕ ಹಾಡುಗಳು ಸೂಪರ್ ಹಿಟ್ ಆಗಿವೆ. ಆದಿತ್ಯ 369 ಸಿನಿಮಾ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಾಯಿತು. ಘರಾನಾ ಬುಲ್ಲೊಡು, ಸಮರಸಿಂಹರೆಡ್ಡಿ, ಕ್ರಿಮಿನಲ್, ತಕ್ಕರಿ ಡೊಂಗಾ ಸೇರಿದಂತೆ ಅನೇಕ ಪ್ರಸಿದ್ಧ ಸಿನಿಮಾಗಳಿಗೆ ಹಾಡನ್ನು ಬರೆದಿದ್ದಾರೆ.
ವೆನ್ನಲಕಂಟಿ ಕೊನೆಯದಾಗಿ ನಟಿ ಕೀರ್ತಿ ಸುರೇಶ್ ನಟನೆಯ ಪೆಂಗ್ವಿನ್ ಸಿನಿಮಾಗೆ ಸಾಹಿತ್ಯ ರಚಿಸಿದ್ದಾರೆ. ಈ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್ ಆಗಿದೆ. ವೆನ್ನಲಕಂಟಿ ನಿಧನಕ್ಕೆ ತೆಲುಗು ಸಿನಿಮಾರಂಗ ಕಂಬನಿ ಮಿಡಿದಿದೆ. ವೆನ್ನಲಕಂಟಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಬ್ಬರು ಮಕ್ಕಳು ಸಹ ಗೀತರಚನೆಕಾರರಾಗಿ ಗುರುತಿಸಿಕೊಂಡಿದ್ದಾರೆ.
This News Article is a Copy of FILMIBEAT
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 02:13 pm
HK News Desk
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm