ಬ್ರೇಕಿಂಗ್ ನ್ಯೂಸ್
06-01-21 12:47 pm Source: FILMIBEAT ಸಿನಿಮಾ
ತೆಲುಗಿನ ಖ್ಯಾತ ಗೀತರಚನೆಕಾರ ಮತ್ತು ಸಂಭಾಷಣೆಗಾರ ವೆನ್ನಲಕಂಟಿ ರಾಜೇಶ್ವರ ಪ್ರಸಾದ್ ಮಂಗಳವಾರ ಚೆನ್ನೈನ ತನ್ನ ನಿವಾಸದಲ್ಲಿ ನಿಧರಾಗಿದ್ದಾರೆ. 64 ವರ್ಷದ ವೆನ್ನಲಕಂಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
3 ದಶಕಗಳ ವೃತ್ತಿ ಜೀವನದಲ್ಲಿ ವೆನ್ನಲಕಂಟಿ ಸುಮಾರು 2000ಕ್ಕೂ ಹೆಚ್ಚು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. 300 ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಪ್ರಸಿದ್ಧಿ ಗಳಿಸಿದ್ದ ವೆನ್ನಲಕಾಂತಿ1957ರಲ್ಲಿ ನೆಲ್ಲೂರಿನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ವೆನ್ನಲಕಂಟಿ ಕವನ ಬರೆಯಲು ಪ್ರಾರಂಭಿಸಿದ್ದರು.
1986ರಲ್ಲಿ, ವೆನ್ನಲಕಂಟಿ 'ಶ್ರೀ ರಾಮಚಂದ್ರಡು' ಚಿತ್ರದ ಹಾಡುಗಳಿಗೆ ಸಾಹಿತ್ಯ ರಚಿಸುವ ಮೂಲಕ ಗೀತರಚನೆಕಾರರಾಗಿ ಪದಾರ್ಪಣೆ ಮಾಡಿದರು. ವೆನ್ನಲಕಂಟಿ ರಚನೆಯ ಅನೇಕ ಹಾಡುಗಳು ಸೂಪರ್ ಹಿಟ್ ಆಗಿವೆ. ಆದಿತ್ಯ 369 ಸಿನಿಮಾ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಾಯಿತು. ಘರಾನಾ ಬುಲ್ಲೊಡು, ಸಮರಸಿಂಹರೆಡ್ಡಿ, ಕ್ರಿಮಿನಲ್, ತಕ್ಕರಿ ಡೊಂಗಾ ಸೇರಿದಂತೆ ಅನೇಕ ಪ್ರಸಿದ್ಧ ಸಿನಿಮಾಗಳಿಗೆ ಹಾಡನ್ನು ಬರೆದಿದ್ದಾರೆ.
ವೆನ್ನಲಕಂಟಿ ಕೊನೆಯದಾಗಿ ನಟಿ ಕೀರ್ತಿ ಸುರೇಶ್ ನಟನೆಯ ಪೆಂಗ್ವಿನ್ ಸಿನಿಮಾಗೆ ಸಾಹಿತ್ಯ ರಚಿಸಿದ್ದಾರೆ. ಈ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್ ಆಗಿದೆ. ವೆನ್ನಲಕಂಟಿ ನಿಧನಕ್ಕೆ ತೆಲುಗು ಸಿನಿಮಾರಂಗ ಕಂಬನಿ ಮಿಡಿದಿದೆ. ವೆನ್ನಲಕಂಟಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಬ್ಬರು ಮಕ್ಕಳು ಸಹ ಗೀತರಚನೆಕಾರರಾಗಿ ಗುರುತಿಸಿಕೊಂಡಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm