ಬ್ರೇಕಿಂಗ್ ನ್ಯೂಸ್
06-01-21 12:47 pm Source: FILMIBEAT ಸಿನಿಮಾ
ತೆಲುಗಿನ ಖ್ಯಾತ ಗೀತರಚನೆಕಾರ ಮತ್ತು ಸಂಭಾಷಣೆಗಾರ ವೆನ್ನಲಕಂಟಿ ರಾಜೇಶ್ವರ ಪ್ರಸಾದ್ ಮಂಗಳವಾರ ಚೆನ್ನೈನ ತನ್ನ ನಿವಾಸದಲ್ಲಿ ನಿಧರಾಗಿದ್ದಾರೆ. 64 ವರ್ಷದ ವೆನ್ನಲಕಂಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
3 ದಶಕಗಳ ವೃತ್ತಿ ಜೀವನದಲ್ಲಿ ವೆನ್ನಲಕಂಟಿ ಸುಮಾರು 2000ಕ್ಕೂ ಹೆಚ್ಚು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. 300 ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಪ್ರಸಿದ್ಧಿ ಗಳಿಸಿದ್ದ ವೆನ್ನಲಕಾಂತಿ1957ರಲ್ಲಿ ನೆಲ್ಲೂರಿನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ವೆನ್ನಲಕಂಟಿ ಕವನ ಬರೆಯಲು ಪ್ರಾರಂಭಿಸಿದ್ದರು.
1986ರಲ್ಲಿ, ವೆನ್ನಲಕಂಟಿ 'ಶ್ರೀ ರಾಮಚಂದ್ರಡು' ಚಿತ್ರದ ಹಾಡುಗಳಿಗೆ ಸಾಹಿತ್ಯ ರಚಿಸುವ ಮೂಲಕ ಗೀತರಚನೆಕಾರರಾಗಿ ಪದಾರ್ಪಣೆ ಮಾಡಿದರು. ವೆನ್ನಲಕಂಟಿ ರಚನೆಯ ಅನೇಕ ಹಾಡುಗಳು ಸೂಪರ್ ಹಿಟ್ ಆಗಿವೆ. ಆದಿತ್ಯ 369 ಸಿನಿಮಾ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಾಯಿತು. ಘರಾನಾ ಬುಲ್ಲೊಡು, ಸಮರಸಿಂಹರೆಡ್ಡಿ, ಕ್ರಿಮಿನಲ್, ತಕ್ಕರಿ ಡೊಂಗಾ ಸೇರಿದಂತೆ ಅನೇಕ ಪ್ರಸಿದ್ಧ ಸಿನಿಮಾಗಳಿಗೆ ಹಾಡನ್ನು ಬರೆದಿದ್ದಾರೆ.
ವೆನ್ನಲಕಂಟಿ ಕೊನೆಯದಾಗಿ ನಟಿ ಕೀರ್ತಿ ಸುರೇಶ್ ನಟನೆಯ ಪೆಂಗ್ವಿನ್ ಸಿನಿಮಾಗೆ ಸಾಹಿತ್ಯ ರಚಿಸಿದ್ದಾರೆ. ಈ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್ ಆಗಿದೆ. ವೆನ್ನಲಕಂಟಿ ನಿಧನಕ್ಕೆ ತೆಲುಗು ಸಿನಿಮಾರಂಗ ಕಂಬನಿ ಮಿಡಿದಿದೆ. ವೆನ್ನಲಕಂಟಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಬ್ಬರು ಮಕ್ಕಳು ಸಹ ಗೀತರಚನೆಕಾರರಾಗಿ ಗುರುತಿಸಿಕೊಂಡಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm