ಬ್ರೇಕಿಂಗ್ ನ್ಯೂಸ್
07-01-21 02:51 pm Headline Karnataka News Network ಸಿನಿಮಾ
ಮುಂಬೈ, ಜ.7 : ಲಾಕ್ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದವರ ನೆರವಿಗೆ ನಿಂತು ಮನೆ ಮಾತಾಗಿರುವ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಹೌದು. ಅನುಮತಿ ಪಡೆಯದೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಿದ ಹಿನ್ನೆಲೆಯಲ್ಲಿ ಬಿಎಂಸಿ(ಬೃಹನ್ ಮುಂಬೈ ಮುನ್ಸಿಪಲ್ ಕಾಪೋರೇಶನ್) ಈ ಪ್ರಕರಣ ದಾಖಲಿಸಿದೆ. ಸೋನು ಸೂದ್ ಅವರಿಗೆ ಮುಂಬೈನ ಜುಹುವಿನಲ್ಲಿ 6 ಮಹಡಿಯ ಕಟ್ಟಡವಿದೆ. ಈ ಕಟ್ಟಡವನ್ನು ಇತ್ತೀಚೆಗಷ್ಟೇ ಹೋಟೆಲ್ ಆಗಿ ಮಾರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಎಂಸಿ ಇದೀಗ ನಟನ ವಿರುದ್ಧ ಜುಹು ಪೊಲೀಸ್ ಠಾಣೆಗೆ ಲಿಖಿತ ದೂರು ದಾಖಲಿಸಿದೆ.

ಅನುಮತಿ ಇಲ್ಲದೆಯೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಲಾಗಿದೆ. 2020ರ ಅಕ್ಟೋಬರ್ 27ರಂದು ಸೋನು ಸೂದ್ ಅವರಿಗೆ ಮೊದಲ ಬಾರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ನವೆಂಬರ್ 27ರವರೆಗೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ನಟನಿಗೆ ಒಂದು ತಿಂಗಳ ಕಾಲ ಸಮಯ ನೀಡಿದ್ದರೂ ಉತ್ತರಿಸಲಿಲ್ಲ ಎಂದು ಬಿಎಂಸಿ ಅಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ.
2021ರ ಜನವರಿ 4 ರಂದು ನಟನ ಆಸ್ತಿ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಅನಧಿಕೃತವಾಗು ಹೆಚ್ಚುವರಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಆದರೂ ಇದೂವರೆಗೆ ಯಾವುದೇ ಸೂಚನೆಗಳಿಗೆ ನಟ ಪ್ರತಿಕ್ರಿಯಿಸಿಲ್ಲ ಎಂದು ಕೂಡ ಅಧಿಕಾರಿಗಳು ದೂರಿದ್ದಾರೆ.
ಸದ್ಯ ಅಧಿಕಾರಿಗಳ ದೂರು ಸ್ವೀಕರಿಸಿರುವ ಪೊಲೀಸರು ಇದೀಗ ನಟನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಈ ಸಂಬಂಧ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
Actor Sonu Sood has been accused of illegally converting a residential building in Mumbai's upscale Juhu into a hotel by Mumbai's civic body BMC, which has also filed a police complaint.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm