ಬ್ರೇಕಿಂಗ್ ನ್ಯೂಸ್
07-01-21 02:51 pm Headline Karnataka News Network ಸಿನಿಮಾ
ಮುಂಬೈ, ಜ.7 : ಲಾಕ್ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದವರ ನೆರವಿಗೆ ನಿಂತು ಮನೆ ಮಾತಾಗಿರುವ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಹೌದು. ಅನುಮತಿ ಪಡೆಯದೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಿದ ಹಿನ್ನೆಲೆಯಲ್ಲಿ ಬಿಎಂಸಿ(ಬೃಹನ್ ಮುಂಬೈ ಮುನ್ಸಿಪಲ್ ಕಾಪೋರೇಶನ್) ಈ ಪ್ರಕರಣ ದಾಖಲಿಸಿದೆ. ಸೋನು ಸೂದ್ ಅವರಿಗೆ ಮುಂಬೈನ ಜುಹುವಿನಲ್ಲಿ 6 ಮಹಡಿಯ ಕಟ್ಟಡವಿದೆ. ಈ ಕಟ್ಟಡವನ್ನು ಇತ್ತೀಚೆಗಷ್ಟೇ ಹೋಟೆಲ್ ಆಗಿ ಮಾರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಎಂಸಿ ಇದೀಗ ನಟನ ವಿರುದ್ಧ ಜುಹು ಪೊಲೀಸ್ ಠಾಣೆಗೆ ಲಿಖಿತ ದೂರು ದಾಖಲಿಸಿದೆ.

ಅನುಮತಿ ಇಲ್ಲದೆಯೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಲಾಗಿದೆ. 2020ರ ಅಕ್ಟೋಬರ್ 27ರಂದು ಸೋನು ಸೂದ್ ಅವರಿಗೆ ಮೊದಲ ಬಾರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ನವೆಂಬರ್ 27ರವರೆಗೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ನಟನಿಗೆ ಒಂದು ತಿಂಗಳ ಕಾಲ ಸಮಯ ನೀಡಿದ್ದರೂ ಉತ್ತರಿಸಲಿಲ್ಲ ಎಂದು ಬಿಎಂಸಿ ಅಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ.
2021ರ ಜನವರಿ 4 ರಂದು ನಟನ ಆಸ್ತಿ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಅನಧಿಕೃತವಾಗು ಹೆಚ್ಚುವರಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಆದರೂ ಇದೂವರೆಗೆ ಯಾವುದೇ ಸೂಚನೆಗಳಿಗೆ ನಟ ಪ್ರತಿಕ್ರಿಯಿಸಿಲ್ಲ ಎಂದು ಕೂಡ ಅಧಿಕಾರಿಗಳು ದೂರಿದ್ದಾರೆ.
ಸದ್ಯ ಅಧಿಕಾರಿಗಳ ದೂರು ಸ್ವೀಕರಿಸಿರುವ ಪೊಲೀಸರು ಇದೀಗ ನಟನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಈ ಸಂಬಂಧ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
Actor Sonu Sood has been accused of illegally converting a residential building in Mumbai's upscale Juhu into a hotel by Mumbai's civic body BMC, which has also filed a police complaint.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm