ಬ್ರೇಕಿಂಗ್ ನ್ಯೂಸ್
07-01-21 02:51 pm Headline Karnataka News Network ಸಿನಿಮಾ
ಮುಂಬೈ, ಜ.7 : ಲಾಕ್ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದವರ ನೆರವಿಗೆ ನಿಂತು ಮನೆ ಮಾತಾಗಿರುವ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಹೌದು. ಅನುಮತಿ ಪಡೆಯದೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಿದ ಹಿನ್ನೆಲೆಯಲ್ಲಿ ಬಿಎಂಸಿ(ಬೃಹನ್ ಮುಂಬೈ ಮುನ್ಸಿಪಲ್ ಕಾಪೋರೇಶನ್) ಈ ಪ್ರಕರಣ ದಾಖಲಿಸಿದೆ. ಸೋನು ಸೂದ್ ಅವರಿಗೆ ಮುಂಬೈನ ಜುಹುವಿನಲ್ಲಿ 6 ಮಹಡಿಯ ಕಟ್ಟಡವಿದೆ. ಈ ಕಟ್ಟಡವನ್ನು ಇತ್ತೀಚೆಗಷ್ಟೇ ಹೋಟೆಲ್ ಆಗಿ ಮಾರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಎಂಸಿ ಇದೀಗ ನಟನ ವಿರುದ್ಧ ಜುಹು ಪೊಲೀಸ್ ಠಾಣೆಗೆ ಲಿಖಿತ ದೂರು ದಾಖಲಿಸಿದೆ.
ಅನುಮತಿ ಇಲ್ಲದೆಯೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಲಾಗಿದೆ. 2020ರ ಅಕ್ಟೋಬರ್ 27ರಂದು ಸೋನು ಸೂದ್ ಅವರಿಗೆ ಮೊದಲ ಬಾರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ನವೆಂಬರ್ 27ರವರೆಗೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ನಟನಿಗೆ ಒಂದು ತಿಂಗಳ ಕಾಲ ಸಮಯ ನೀಡಿದ್ದರೂ ಉತ್ತರಿಸಲಿಲ್ಲ ಎಂದು ಬಿಎಂಸಿ ಅಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ.
2021ರ ಜನವರಿ 4 ರಂದು ನಟನ ಆಸ್ತಿ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಅನಧಿಕೃತವಾಗು ಹೆಚ್ಚುವರಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಆದರೂ ಇದೂವರೆಗೆ ಯಾವುದೇ ಸೂಚನೆಗಳಿಗೆ ನಟ ಪ್ರತಿಕ್ರಿಯಿಸಿಲ್ಲ ಎಂದು ಕೂಡ ಅಧಿಕಾರಿಗಳು ದೂರಿದ್ದಾರೆ.
ಸದ್ಯ ಅಧಿಕಾರಿಗಳ ದೂರು ಸ್ವೀಕರಿಸಿರುವ ಪೊಲೀಸರು ಇದೀಗ ನಟನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಈ ಸಂಬಂಧ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
Actor Sonu Sood has been accused of illegally converting a residential building in Mumbai's upscale Juhu into a hotel by Mumbai's civic body BMC, which has also filed a police complaint.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm