ಬ್ರೇಕಿಂಗ್ ನ್ಯೂಸ್
07-01-21 02:51 pm Headline Karnataka News Network ಸಿನಿಮಾ
ಮುಂಬೈ, ಜ.7 : ಲಾಕ್ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದವರ ನೆರವಿಗೆ ನಿಂತು ಮನೆ ಮಾತಾಗಿರುವ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಹೌದು. ಅನುಮತಿ ಪಡೆಯದೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಿದ ಹಿನ್ನೆಲೆಯಲ್ಲಿ ಬಿಎಂಸಿ(ಬೃಹನ್ ಮುಂಬೈ ಮುನ್ಸಿಪಲ್ ಕಾಪೋರೇಶನ್) ಈ ಪ್ರಕರಣ ದಾಖಲಿಸಿದೆ. ಸೋನು ಸೂದ್ ಅವರಿಗೆ ಮುಂಬೈನ ಜುಹುವಿನಲ್ಲಿ 6 ಮಹಡಿಯ ಕಟ್ಟಡವಿದೆ. ಈ ಕಟ್ಟಡವನ್ನು ಇತ್ತೀಚೆಗಷ್ಟೇ ಹೋಟೆಲ್ ಆಗಿ ಮಾರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಎಂಸಿ ಇದೀಗ ನಟನ ವಿರುದ್ಧ ಜುಹು ಪೊಲೀಸ್ ಠಾಣೆಗೆ ಲಿಖಿತ ದೂರು ದಾಖಲಿಸಿದೆ.

ಅನುಮತಿ ಇಲ್ಲದೆಯೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಲಾಗಿದೆ. 2020ರ ಅಕ್ಟೋಬರ್ 27ರಂದು ಸೋನು ಸೂದ್ ಅವರಿಗೆ ಮೊದಲ ಬಾರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ನವೆಂಬರ್ 27ರವರೆಗೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ನಟನಿಗೆ ಒಂದು ತಿಂಗಳ ಕಾಲ ಸಮಯ ನೀಡಿದ್ದರೂ ಉತ್ತರಿಸಲಿಲ್ಲ ಎಂದು ಬಿಎಂಸಿ ಅಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ.
2021ರ ಜನವರಿ 4 ರಂದು ನಟನ ಆಸ್ತಿ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಅನಧಿಕೃತವಾಗು ಹೆಚ್ಚುವರಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಆದರೂ ಇದೂವರೆಗೆ ಯಾವುದೇ ಸೂಚನೆಗಳಿಗೆ ನಟ ಪ್ರತಿಕ್ರಿಯಿಸಿಲ್ಲ ಎಂದು ಕೂಡ ಅಧಿಕಾರಿಗಳು ದೂರಿದ್ದಾರೆ.
ಸದ್ಯ ಅಧಿಕಾರಿಗಳ ದೂರು ಸ್ವೀಕರಿಸಿರುವ ಪೊಲೀಸರು ಇದೀಗ ನಟನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಈ ಸಂಬಂಧ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
Actor Sonu Sood has been accused of illegally converting a residential building in Mumbai's upscale Juhu into a hotel by Mumbai's civic body BMC, which has also filed a police complaint.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm