ಬ್ರೇಕಿಂಗ್ ನ್ಯೂಸ್
07-01-21 04:35 pm Source: FILMIBEAT Manjunatha C ಸಿನಿಮಾ
ಸೆಲೆಬ್ರಿಟಿಗಳಿಗೆ ಖಾಸಗಿತನ ಎಂಬುದು ಬಹಳ ಕಡಿಮೆ, ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳಿಗಂತೂ ಖಾಸಗಿತನ ಎಂಬುದು ಬಹುತೇಕ ಇಲ್ಲವೇ ಇಲ್ಲ ಎನ್ನುವಂತಾಗಿದೆ. ಮಾಧ್ಯಮಗಳ ಕ್ಯಾಮೆರಾಮನ್ಗಳು ಸದಾ ಸೆಲೆಬ್ರಿಟಿಗಳ ಮನೆಗಳ ಮುಂದೆ ಇದ್ದೇ ಇರುತ್ತಾರೆ. ಅವರು ಎಲ್ಲಿ ಹೋದರೂ ಹಿಂಬಾಲಿಸುತ್ತಾರೆ. ಹಲವು ಬಾಲಿವುಡ್ ಪತ್ರಿಕೆಗಳು ಹಲವು ಶಿಫ್ಟ್ಗಳಲ್ಲಿ ಸೆಲೆಬ್ರಿಟಿಗಳ ಮನೆಯ ಮುಂದೆ ಕ್ಯಾಮೆರಾಮನ್ಗಳನ್ನು ಕೆಲಸಕ್ಕೆ ಹಾಕಿರುತ್ತಾರೆ. ಸೆಲೆಬ್ರಿಟಿಗಳು ವಿದೇಶಕ್ಕೆ ಹೋದರೂ ಹಿಂಬಾಲಿಸುವವರಿದ್ದಾರೆ. ಪ್ರಸ್ತುತ ಅನುಷ್ಕಾ ಶರ್ಮಾ ಬಾಲಿವುಡ್ನ ಟಾಪ್ ಸೆಲೆಬ್ರಿಟಿ, ಅಮ್ಮನಾಗುತ್ತಿರುವ ಅನುಷ್ಕಾ ರ ಸಣ್ಣ ಕದಲಿಕೆಗಳೂ ಸುದ್ದಿಯಾಗುತ್ತಿವೆ. ಅವರ ಮನೆಯ ಮುಂದೆ ಕ್ಯಾಮೆರಾಮನ್ಗಳ ದಂಡೇ ಇರುತ್ತದೆ. ಎಲ್ಲಿ ಹೋದರೂ ಕ್ಯಾಮೆರಾ ಕ್ಲಿಕ್ಕಿಸಲಾಗುತ್ತದೆ. ವಿಡಿಯೋ ಮಾಡಲಾಗುತ್ತದೆ. ಇದರಿಂದ ಬೇಸತ್ತುಹೋಗಿದ್ದಾರೆ ನಟಿ ಅನುಷ್ಕಾ ಶರ್ಮಾ.

ಸಾಕು ಇದನ್ನು ನಿಲ್ಲಿಸಿ: ಅನುಷ್ಕಾ ಶರ್ಮಾ
'ಮನವಿಗಳನ್ನು ಮಾಡಿದ ಬಳಿಕವೂ ಒಬ್ಬ ಫೊಟೊಗ್ರಾಫರ್ ಮತ್ತು ಒಂದು ಪ್ರಕಟಣಾ ಸಂಸ್ಥೆ ನಮ್ಮ ಖಾಸಗಿತನವನ್ನು ಉಲ್ಲಂಘಿಸುತ್ತಿದ್ದಾರೆ. ದಯವಿಟ್ಟು ಇದನ್ನು ಇಲ್ಲಿಗೇ ನಿಲ್ಲಿಸಿಬಿಡಿ' ಎಂದಿದ್ದಾರೆ ಅನುಷ್ಕಾ ಶರ್ಮಾ.
ಚಿತ್ರ-ವಿಡಿಯೋ ಹಂಚಿಕೊಳ್ಳುವ ಅನುಷ್ಕಾ ಶರ್ಮಾ
ಗರ್ಭಿಣಿ ಅನುಷ್ಕಾ ಶರ್ಮಾ ತಮ್ಮ ಸಾಕಷ್ಟು ಚಿತ್ರಗಳು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅದಾಗ್ಯೂ ಅವರು ಎಲ್ಲಿ ಹೋದರೂ ಅವರನ್ನು ಹಿಂಬಾಲಿಸಿ ಅವರ ಖಾಸಗಿ ಕ್ಷಣಗಳನ್ನು ಸಹ ಕ್ಲಿಕ್ಕಿಸಿ ಮುದ್ರಿಸಲಾಗುತ್ತಿದೆ. ಇದು ಅನುಷ್ಕಾ ರಿಗೆ ಬೇಸರ ತಂದಿದೆ.

ಆಸ್ಟ್ರೇಲಿಯಾದಿಂದ ವಾಪಸ್ಸಾಗಿರುವ ವಿರಾಟ್ ಕೊಹ್ಲಿ
ನಟಿ ಅನುಷ್ಕಾ ಶರ್ಮಾ ಇದೇ ತಿಂಗಳಾಂತ್ಯದಲ್ಲಿ ಮಗುವನ್ನು ನಿರೀಕ್ಷಿಸುತ್ತಿದ್ದಾರೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ ಆಸ್ಟ್ರೇಲಿಯಾ ಪ್ರವಾಸದಿಂದ ರಜೆ ಪಡೆದು ಪತ್ನಿಯೊಂದಿಗೆ ಕಾಲ ಕಳೆಯಲು ಭಾರತಕ್ಕೆ ವಾಪಸ್ಸಾಗಿದ್ದಾರೆ. ಕೆಲವೇ ದಿನಗಳಲ್ಲಿ ಸಿಹಿ ಸುದ್ದಿ ನೀಡಲಿದ್ದಾರೆ ಅನುಷ್ಕಾ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm