ಬ್ರೇಕಿಂಗ್ ನ್ಯೂಸ್
09-01-21 03:41 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದ ಚಿತ್ರೀಕರಣ ಮುಕ್ತಾಯ ಗೊಳಿಸಿದ್ದಾರೆ. ಆಮೀರ್ ಖಾನ್ ಅವರನ್ನು ತೆರೆಮೇಲೆ ನೋಡದೆ ಎರಡು ವರ್ಷದ ಮೇಲಾಗಿದೆ. ಥಗ್ಸ್ ಆಫ್ ಹಿಂದೂಸ್ತಾನ್ ಸೋತ ಬಳಿಕ ಆಮೀರ್ ಖಾನ್ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿಲ್ಲ. ಇದೀಗ ಲಾಲ್ ಸಿಂಗ್ ಚಡ್ಡಾ ಮೂಲಕ ಮತ್ತೆ ಅಭಿಮಾನಿಗಳನ್ನು ಮೋಡಿ ಮಾಡಲು ಆಮೀರ್ ಖಾನ್ ಸಿದ್ಧರಾಗಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭಮಾಡಿ ಮುಗಿಸಿರುವ ಮಿಸ್ಟರ್ ಪರ್ಫೆಕ್ಷನಿಸ್ಟ್ ಸದ್ಯ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ.
ಈ ನಡುವೆ ಆಮೀರ್ ಖಾನ್ ಮುಂಬೈನಲ್ಲಿ ಮಕ್ಕಳ ಜೊತೆ ಗಲ್ಲಿ ಕ್ರಿಕೆಟ್ ಆಗಿ ಗಮನ ಸೆಳೆದಿದ್ದಾರೆ. ಹೌದು, ಅಮೀರ್ ಖಾನ್ ಮಕ್ಕಳ ಜೊತೆ ಸೇರಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆಮೀರ್ ಖಾನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಆಮೀರ್ ಖಾನ್ ಸೇರಿದಂತೆ ಕ್ರಿಕೆಟ್ ಆಡುತ್ತಿರುವ ಮಕ್ಕಳು ಸಹ ಮಾಸ್ಕ್ ಧರಿಸಿಲ್ಲ ಎಂದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಒಬ್ಬ ಸ್ಟಾರ್ ನಟನಾಗಿ, ಸಾಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಆಮೀರ್ ಖಾನ್ ಉಳಿದವರಿಗೆ ಮಾದರಿಯಾಗಬೇಕು. ಆದರೆ ಬುದ್ದಿಹೇಳಬೇಕಾದವರೇ ಮೈ ಮರೆತು ಇಂಥ ಕೆಲಸ ಮಾಡಿದರೆ ಉಳಿದವರಿಗೆ ಏನು ಸಂದೇಶ ರವಾನಿಸುತ್ತಾರೆ ಎಂದು ಪ್ರಶ್ನಿಸುತ್ತಿದ್ದಾರೆ. ಮಕ್ಕಳ ಜೊತೆ ಕೆಲವು ಸಮಯ ಕ್ರಿಕೆಟ್ ಆಡಿ, ಬಳಿಕ ಅವರ ಜೊತೆ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಈ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ಮಾಸ್ಕ್ ಧರಿಸಿಲ್ಲ ಎಂದು ಟ್ರೋಲ್ ಮಾಡಿದರೆ ಇನ್ನು ಕೆಲವರು ಆಮೀರ್ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ಕ್ರಿಕೆಟ್ ಆಡುವಾಗ ಉಸಿರಾಡಬೇಕು. ಆ ಸಮಯದಲ್ಲಿ ಮಾಸ್ಕ್ ಧರಿಸಿದರೆ ಉಸಿರಾಡಲು ಸಾಧ್ಯವಾಗಿಲ್ಲ, ಹಾಗಾಗಿ ಧರಿಸಿಲ್ಲ ಎಂದಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm