ಬ್ರೇಕಿಂಗ್ ನ್ಯೂಸ್
10-01-21 02:01 pm Source: FILMIBEAT Manjunatha C ಸಿನಿಮಾ
ಅಪರೂಪಕ್ಕೆ ಇಂದು ನಟ ದರ್ಶನ್ ಫೇಸ್ಬುಕ್ ನಲ್ಲಿ ಲೈವ್ ಬಂದಿದ್ದರು. ಅವರು ಸಾಮಾಜಿಕ ಜಾಲತಾಣ ಬಳಸುವುದೇ ಕಡಿಮೆ ಅಂಥಹುದರಲ್ಲಿ ದರ್ಶನ್ ಫೇಸ್ಬುಕ್ ಲೈವ್ ಬರುತ್ತಿರುವುದು ಅಭಿಮಾನಿಗಳಿಗೆ ಆಶ್ಚರ್ಯವುಂಟು ಮಾಡಿತ್ತು.
ಅಂತೆಯೇ ದರ್ಶನ್ ಅವರ ಫೇಸ್ಬುಕ್ ಲೈವ್ ಅನ್ನು ಸಾವಿರಾರು ಮಂದಿ ಫೇಸ್ಬುಕ್ನಲ್ಲಿ ನೋಡಿದರು. ಅಪರೂಪಕ್ಕೆ ಲೈವ್ ಬಂದ ದರ್ಶನ್, ಮಹತ್ವವಾದ ಸಂದೇಶವನ್ನು ತಮ್ಮ ಅಭಿಮಾನಿಗಳಿಗೆ ನೀಡಿದರು.
ಫೆಬ್ರವರಿ 16 ರಂದು ದರ್ಶನ್ ಹುಟ್ಟುಹಬ್ಬವಿದ್ದು, ಆ ದಿನ ಯಾವ ಅಭಿಮಾನಿಗಳೂ ಸಹ ಮನೆಯ ಬಳಿ ಬರಬೇಡಿರೆಂದು ನಟ ದರ್ಶನ್ ಫೇಸ್ಬುಕ್ ಲೈವ್ ನಲ್ಲಿ ಮನವಿ ಮಾಡಿದರು. ಇದೇ ವಿಷಯವನ್ನು ತಿಳಿಸಲೆಂದೇ ತಾವು ಫೇಸ್ಬುಕ್ ಲೈವ್ ಬಂದಿರುವುದಾಗಿ ಹೇಳಿದರು ನಟ ದರ್ಶನ್.

ಕೊರೊನಾ ಕಾರಣದಿಂದಾಗಿ ಯಾರ ಪರಿಸ್ಥಿತಿಯೂ ಚೆನ್ನಾಗಿಲ್ಲ. ಯಾರ ಜೇಬಿನಲ್ಲೂ ಹಣವಿಲ್ಲ. ಅಭಿಮಾನಿಗಳು ನೀವು ಕರ್ನಾಟಕದ ಮೂಲೆ-ಮೂಲೆಗಳಿಂದ ಹಣ, ಸಮಯ ಖರ್ಚು ಮಾಡಿಕೊಂಡು ಹುಟ್ಟುಹಬ್ಬಕ್ಕೆ ಬರುತ್ತೀರ. ಆದರೆ ಈ ವರ್ಷ ಅದು ಬೇಡ ಎಂದರು ದರ್ಶನ್.

ಎಲ್ಲರೂ ಸಂಕಷ್ಟದಲ್ಲಿದ್ದಾರೆ. ನಿಮ್ಮ ಕುಟುಂಬವನ್ನು ಮೊದಲು ನೋಡಿಕೊಳ್ಳಿ, ಅದರ ಮುಂದೆ ಬೇರೆ ಇನ್ನಾವ ಜವಾಬ್ದಾರಿಗಳೂ ಇಲ್ಲ. ನೀವು ಸೆಟ್ಲ್ ಆಗಿ. ಈ ಬಾರಿ ನನ್ನ ಹುಟ್ಟುಹಬ್ಬಕ್ಕೆ ಯಾರೂ ಏನೂ ಆಚರಣೆ ಮಾಡುವುದು ಬೇಡ ಎಲ್ಲಿದ್ದೀರೊ ಅಲ್ಲಿಂದಲೇ ಹಾರೈಸಿ ಸಾಕು ಎಂದು ಮನವಿ ಮಾಡಿದರು ನಟ ದರ್ಶನ್.

ನಾನು ಸಹ ಫೆಬ್ರವರಿ 15 ರಿಂದ 18 ರ ವರೆಗೆ ಊರಿನಲ್ಲಿ ಇರುವುದಿಲ್ಲ. ಅಷ್ಟೇ ಅಲ್ಲದೆ ಮನೆಯ ಬಳಿ ಹುಟ್ಟುಹಬ್ಬ ಆಚರಿಸಲು ಪೊಲೀಸರು ಅನುಮತಿ ಕೊಡುವುದಿಲ್ಲ. ಸಿಸಿಟಿವಿ ಗಳನ್ನು ಹಾಕಿಸಬೇಕಾಗುತ್ತದೆ, ಬ್ಯಾರಿಕೇಡ್ಗಳನ್ನು ಹಾಕಿಸಬೇಕಾಗುತ್ತದೆ. ಈ ಬಾರಿ ಅದೆಲ್ಲ ಯಾವುದು ಬೇಡ, ಮುಂದಿನ ವರ್ಷ ಅದ್ಧೂರಿಯಾಗಿ ಆಚರಿಸೋಣ ಎಂದರು ದರ್ಶನ್
ಪ್ರತಿ ಊರಿಗೆ ನಾನೇ ಹೋಗಿ ಅಭಿಮಾನಿ ಸಂಘಗಳನ್ನು ಭೇಟಿ ಮಾಡುವ ಯೋಚನೆ ಇದೆ. ಆದರೆ ಅದೆಲ್ಲವೂ ಮಾರ್ಚ್ ನಂತರವೇ. ಈ ನಡುವೆ ಭಾನುವಾರಗಳಂದು ನಾನೇ ಕೆಲವು ಸಂಘಗಳಿಗೆ ತಿಳಿಸುತ್ತೇನೆ ಅವರು ಬಂದು ಭೇಟಿ ಮಾಡಬಹುದು ಎಂದು ಮಾಹಿತಿ ನೀಡಿದರು ದರ್ಶನ್.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm