ಬ್ರೇಕಿಂಗ್ ನ್ಯೂಸ್
10-01-21 02:01 pm Source: FILMIBEAT Manjunatha C ಸಿನಿಮಾ
ಅಪರೂಪಕ್ಕೆ ಇಂದು ನಟ ದರ್ಶನ್ ಫೇಸ್ಬುಕ್ ನಲ್ಲಿ ಲೈವ್ ಬಂದಿದ್ದರು. ಅವರು ಸಾಮಾಜಿಕ ಜಾಲತಾಣ ಬಳಸುವುದೇ ಕಡಿಮೆ ಅಂಥಹುದರಲ್ಲಿ ದರ್ಶನ್ ಫೇಸ್ಬುಕ್ ಲೈವ್ ಬರುತ್ತಿರುವುದು ಅಭಿಮಾನಿಗಳಿಗೆ ಆಶ್ಚರ್ಯವುಂಟು ಮಾಡಿತ್ತು.
ಅಂತೆಯೇ ದರ್ಶನ್ ಅವರ ಫೇಸ್ಬುಕ್ ಲೈವ್ ಅನ್ನು ಸಾವಿರಾರು ಮಂದಿ ಫೇಸ್ಬುಕ್ನಲ್ಲಿ ನೋಡಿದರು. ಅಪರೂಪಕ್ಕೆ ಲೈವ್ ಬಂದ ದರ್ಶನ್, ಮಹತ್ವವಾದ ಸಂದೇಶವನ್ನು ತಮ್ಮ ಅಭಿಮಾನಿಗಳಿಗೆ ನೀಡಿದರು.
ಫೆಬ್ರವರಿ 16 ರಂದು ದರ್ಶನ್ ಹುಟ್ಟುಹಬ್ಬವಿದ್ದು, ಆ ದಿನ ಯಾವ ಅಭಿಮಾನಿಗಳೂ ಸಹ ಮನೆಯ ಬಳಿ ಬರಬೇಡಿರೆಂದು ನಟ ದರ್ಶನ್ ಫೇಸ್ಬುಕ್ ಲೈವ್ ನಲ್ಲಿ ಮನವಿ ಮಾಡಿದರು. ಇದೇ ವಿಷಯವನ್ನು ತಿಳಿಸಲೆಂದೇ ತಾವು ಫೇಸ್ಬುಕ್ ಲೈವ್ ಬಂದಿರುವುದಾಗಿ ಹೇಳಿದರು ನಟ ದರ್ಶನ್.

ಕೊರೊನಾ ಕಾರಣದಿಂದಾಗಿ ಯಾರ ಪರಿಸ್ಥಿತಿಯೂ ಚೆನ್ನಾಗಿಲ್ಲ. ಯಾರ ಜೇಬಿನಲ್ಲೂ ಹಣವಿಲ್ಲ. ಅಭಿಮಾನಿಗಳು ನೀವು ಕರ್ನಾಟಕದ ಮೂಲೆ-ಮೂಲೆಗಳಿಂದ ಹಣ, ಸಮಯ ಖರ್ಚು ಮಾಡಿಕೊಂಡು ಹುಟ್ಟುಹಬ್ಬಕ್ಕೆ ಬರುತ್ತೀರ. ಆದರೆ ಈ ವರ್ಷ ಅದು ಬೇಡ ಎಂದರು ದರ್ಶನ್.

ಎಲ್ಲರೂ ಸಂಕಷ್ಟದಲ್ಲಿದ್ದಾರೆ. ನಿಮ್ಮ ಕುಟುಂಬವನ್ನು ಮೊದಲು ನೋಡಿಕೊಳ್ಳಿ, ಅದರ ಮುಂದೆ ಬೇರೆ ಇನ್ನಾವ ಜವಾಬ್ದಾರಿಗಳೂ ಇಲ್ಲ. ನೀವು ಸೆಟ್ಲ್ ಆಗಿ. ಈ ಬಾರಿ ನನ್ನ ಹುಟ್ಟುಹಬ್ಬಕ್ಕೆ ಯಾರೂ ಏನೂ ಆಚರಣೆ ಮಾಡುವುದು ಬೇಡ ಎಲ್ಲಿದ್ದೀರೊ ಅಲ್ಲಿಂದಲೇ ಹಾರೈಸಿ ಸಾಕು ಎಂದು ಮನವಿ ಮಾಡಿದರು ನಟ ದರ್ಶನ್.

ನಾನು ಸಹ ಫೆಬ್ರವರಿ 15 ರಿಂದ 18 ರ ವರೆಗೆ ಊರಿನಲ್ಲಿ ಇರುವುದಿಲ್ಲ. ಅಷ್ಟೇ ಅಲ್ಲದೆ ಮನೆಯ ಬಳಿ ಹುಟ್ಟುಹಬ್ಬ ಆಚರಿಸಲು ಪೊಲೀಸರು ಅನುಮತಿ ಕೊಡುವುದಿಲ್ಲ. ಸಿಸಿಟಿವಿ ಗಳನ್ನು ಹಾಕಿಸಬೇಕಾಗುತ್ತದೆ, ಬ್ಯಾರಿಕೇಡ್ಗಳನ್ನು ಹಾಕಿಸಬೇಕಾಗುತ್ತದೆ. ಈ ಬಾರಿ ಅದೆಲ್ಲ ಯಾವುದು ಬೇಡ, ಮುಂದಿನ ವರ್ಷ ಅದ್ಧೂರಿಯಾಗಿ ಆಚರಿಸೋಣ ಎಂದರು ದರ್ಶನ್
ಪ್ರತಿ ಊರಿಗೆ ನಾನೇ ಹೋಗಿ ಅಭಿಮಾನಿ ಸಂಘಗಳನ್ನು ಭೇಟಿ ಮಾಡುವ ಯೋಚನೆ ಇದೆ. ಆದರೆ ಅದೆಲ್ಲವೂ ಮಾರ್ಚ್ ನಂತರವೇ. ಈ ನಡುವೆ ಭಾನುವಾರಗಳಂದು ನಾನೇ ಕೆಲವು ಸಂಘಗಳಿಗೆ ತಿಳಿಸುತ್ತೇನೆ ಅವರು ಬಂದು ಭೇಟಿ ಮಾಡಬಹುದು ಎಂದು ಮಾಹಿತಿ ನೀಡಿದರು ದರ್ಶನ್.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm