ಬ್ರೇಕಿಂಗ್ ನ್ಯೂಸ್
10-01-21 02:08 pm Source: FILMIBEAT Manjunatha C ಸಿನಿಮಾ
ಖ್ಯಾತ ಗಾಯಕಿ ಸುನಿತಾ ಮದುವೆಯಾಗಿದ್ದಾರೆ. ಮಕ್ಕಳೇ ಮುಂದೆ ನಿಂತು ಅಮ್ಮನ ಮದುವೆಯನ್ನು ನೆರವೇರಿಸಿದ್ದಾರೆ.
43 ವರ್ಷದ ತೆಲುಗಿನ ಖ್ಯಾತ ಗಾಯಕಿ ಸುನಿತಾ ಜನವರಿ 09 ರಂದು ರಾಮ್ ವೀರಪನೇನಿ ಎಂಬುವರನ್ನು ವಿವಾಹವಾಗಿದ್ದಾರೆ. ಗಾಯಕಿ ಸುನಿತಾ ಗೆ ಇದು ಎರಡನೇ ವಿವಾಹ. ಮಕ್ಕಳೇ ಮುಂದೆ ನಿಂತು ಈ ವಿವಾಹ ಕಾರ್ಯ ನೆರವೇರಿಸಿದ್ದಾರೆ.
ಗಾಯಕಿ ಸುನಿತಾ ಹಾಗೂ ರಾಮ್ ವೀರಪನೇನಿ ಅವರ ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಅದ್ಧೂರಿಯಾಗಿಯೇ ನಡೆದ ಈ ಮದುವೆಗೆ ಹಲವು ಅತಿಥಿಗಳು ಭಾಗವಹಿಸಿ, ನವ ವಧು-ವರರಿಗೆ ಶುಭಾಶಯ ತಿಳಿಸಿದ್ದಾರೆ.
19 ವರ್ಷಕ್ಕೆ ಸುನೀತಾಗೆ ಮದುವೆಯಾಗಿತ್ತು
ಸುನಿತಾ ಅವರಿಗೆ 19 ನೇ ವರ್ಷಕ್ಕೆ ಮದುವೆ ಮಾಡಲಾಗಿತ್ತು. ಮೊದಲ ಪತಿ, ಪತ್ರಕರ್ತ ಕಿರಣ್ ಗೋಪುರಾಜು ಇಂದು ವಿಚ್ಛೇಧನ ಪಡೆದು ಹಲವು ವರ್ಷಗಳಾಗಿದ್ದವು ಸುನಿತಾ. ಇದೀಗ ಕೆಲವು ತಿಂಗಳ ಹಿಂದೆ ಮಕ್ಕಳ ಸಮ್ಮುಖದಲ್ಲಿಯೇ ಸುನೀತಾ ಹಾಗೂ ರಾಮ್ ನಿಶ್ಚಿತಾರ್ಥ ಮಾಡಿಕೊಂಡು ಈಗ ಮದುವೆ ಆಗಿದ್ದಾರೆ.

ಡಿಜಿಟಲ್ ಮಿಡಿಯಾ ಸಂಸ್ಥೆಯೊಂದರ ಸಿಇಒ
ರಾಮ್ ವೀರಪನೇನಿ ಡಿಜಿಟಲ್ ಮೀಡಿಯಾ ಸಂಸ್ಥೆಯ ಸಿಇಒ ಆಗಿದ್ದು, 'ನನ್ನ ಬಾಳಿಗೆ ಸ್ನೇಹಿತನಾಗಿ ಬಂದು ಈಗ ನನ್ನ ಜೀವನದ ಭಾಗವೇ ಆಗುತ್ತಿದ್ದಾರೆ ರಾಮ್' ಎಂದು ಹೇಳಿದ್ದಾರೆ ಸುನೀತಾ. ಸುನೀತಾ ಅವರ ಮರು ಮದುವೆ ನಿರ್ಧಾರಕ್ಕೆ ಹಲವಾರು ಮಂದಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಸುನೀತಾ ಗೆ ಇಬ್ಬರು ಮಕ್ಕಳಿದ್ದಾರೆ
ಸುನಿತಾಗೆ ಮತ್ತು ಮೊದಲ ಪತಿ ಕಿರಣ್ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಗ ಆಕಾಶ್ ಮತ್ತು ಮಗಳು ಶ್ರೇಯಾ ಎನ್ನುವ ಇಬ್ಬರು ಮಕ್ಕಳಿದ್ದಾರೆ. ಗಾಯಕಿ ಸುನಿತಾ ತೆಲುಗು ಮಾತ್ರವಲ್ಲದೇ ತಮಿಳು ಮತ್ತು ಕನ್ನಡದಲ್ಲೂ ಸಾಕಷ್ಟು ಹಾಡಿಗಳಿಗೆ ಧ್ವನಿ ನೀಡಿದ್ದಾರೆ.

ಮದುವೆ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು
ಗಾಯಕಿ ಸುನಿತಾ ತಾವು ಮದುವೆ ಆಗುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದಾಗ ಸಾಕಷ್ಟು ಮಂದಿ ಟೀಕಿಸಿದ್ದರು. ಆದರೆ ಎಲ್ಲ ಟೀಕೆಯನ್ನು ನಿರ್ಲಕ್ಷಿಸಿ ಮದುವೆ ಆಗಿದ್ದಾರೆ ಸುನೀತಾ. 'ನನ್ನ ಮಕ್ಕಳು ಸೆಟಲ್ ಆಗಲಿ ಎಂದು ನಾನು ನಿರೀಕ್ಷಿಸುತ್ತೇನೆ. ಆದರೆ ನಾನೂ ಸಹ ಸೆಟಲ್ ಆಗಲಿ ಎಂದು ನನ್ನ ಮಕ್ಕಳು ಯೋಚಿಸಿದ್ದಾರೆ. ಅದ್ಭುತವಾದ ಮಕ್ಕಳನ್ನು ನಾನು ಪಡೆದಿದ್ದೇನೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು ಸುನೀತಾ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm