ಬ್ರೇಕಿಂಗ್ ನ್ಯೂಸ್
10-01-21 02:13 pm Source: FILMIBEAT Manjunatha C ಸಿನಿಮಾ
ಕನ್ನಡ ಚಿತ್ರರಂಗದ ಅತ್ಯಂತ ಹಿರಿಯ ಸಂಗೀತ ನಿರ್ದೇಶಕ ಆರ್.ರತ್ನ ನಿನ್ನೆ (ಜನವರಿ 09) ರಂದು ಚೆನ್ನೈನಲ್ಲಿ ನಿಧನಹೊಂದಿದ್ದಾರೆ. ಆರ್.ರತ್ನ ಅವರಿಗೆ 97 ವರ್ಷ ವಯಸ್ಸಾಗಿತ್ತು. ಆರ್.ರತ್ನ ನಿಜವಾದ ಹೆಸರು ಜೀವನರತ್ನ.
ಮೊದಲಿಗೆ ನಟನಾಗಿ ವೃತ್ತಿ ಆರಂಭಿಸಿದ ರತ್ನ, ತಮಿಳಿನ 'ದಾನಶೂರ ಕರ್ಣ' ಸಿನಿಮಾದಲ್ಲಿ ಋಷಿ ಕೇತು ಪಾತ್ರದಲ್ಲಿ ನಟಿಸಿದ್ದರು. ನಂತರ 1961ರಲ್ಲಿ ಬಿಡುಗಡೆ ಆದ 'ಚಕ್ರವರ್ತಿ ತಿರುಮಗಲ' ಮೂಲಕ ಸ್ವತಂತ್ರ್ಯ ಸಂಗೀತ ನಿರ್ದೇಶಕರಾದ ಜೀವರತ್ನ. 1963 'ಮನೆ ಕಟ್ಟಿ ನೋಡು' ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗ ಪ್ರವೇಶಿಸಿದರು.
ಕನ್ನಡದಲ್ಲಿ ನಮ್ಮ ಊರು, ಬಾಂಧವ್ಯ, ಕಪ್ಪು-ಬಿಳುಪು, ಭಲೇ ಜೋಡಿ, ಪೂರ್ಣಿಮಾ ಮೊದಲಾದ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದರು ಜೀವರತ್ನ ಅಲಿಯಾಸ್ ಆರ್.ರತ್ನ.
ವಯಸ್ಸಾದ ಅವರನ್ನು ಅವರ ಅಭಿಮಾನಿಯೇ ಬಹುವರ್ಷಗಳಿಂದ ಸಾಕುತ್ತಿದ್ದರು ಎಂಬುದು ವಿಶೇಷ. ಜೀವರತ್ನ ಅವರ ಅಭಿಮಾನಿಯಾದ ವೆಂಕಟರಾಮಯ್ಯ, ಜೀವರತ್ನರನ್ನು ಮಗುವಿನಂತೆ ನೋಡಿಕೊಂಡಿದ್ದರು. ಅಷ್ಟೇ ಅಲ್ಲದೆ, ಜೀವರತ್ನ ಹೆಸರಲ್ಲಿ ಸಂಗೀತ ಶಾಲೆಯೊಂದನ್ನು ಸಹ ಸ್ಥಾಪಿಸಿದ್ದರು.
ಇಳಿಯ ವಯಸ್ಸಿನಲ್ಲೂ ಹಾರ್ಮೊನಿಯಂ ನುಡಿಸುವುದು ಬಿಟ್ಟಿರಲಿಲ್ಲ ಎಂದು ಅವರ ಪರಿಚಯದವರು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಂಡಿದ್ದು, ಹಾರ್ಮೊನಿಯಂ ನುಡಿಸುತ್ತಾ ತಮ್ಮದೇ ಸಂಯೋಜನೆಯ ಹಾಡುಗಳನ್ನು ಹಾಡುತ್ತಿರುತ್ತಿದ್ದರಂತೆ ಜೀವರತ್ನ.
97 ವಯಸ್ಸಿನ ಜೀವರತ್ನ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಚೆನ್ನೈನಲ್ಲಿ ಅವರು ವಿಧಿವಶರಾಗಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm