ಬ್ರೇಕಿಂಗ್ ನ್ಯೂಸ್
10-01-21 02:13 pm Source: FILMIBEAT Manjunatha C ಸಿನಿಮಾ
ಕನ್ನಡ ಚಿತ್ರರಂಗದ ಅತ್ಯಂತ ಹಿರಿಯ ಸಂಗೀತ ನಿರ್ದೇಶಕ ಆರ್.ರತ್ನ ನಿನ್ನೆ (ಜನವರಿ 09) ರಂದು ಚೆನ್ನೈನಲ್ಲಿ ನಿಧನಹೊಂದಿದ್ದಾರೆ. ಆರ್.ರತ್ನ ಅವರಿಗೆ 97 ವರ್ಷ ವಯಸ್ಸಾಗಿತ್ತು. ಆರ್.ರತ್ನ ನಿಜವಾದ ಹೆಸರು ಜೀವನರತ್ನ.
ಮೊದಲಿಗೆ ನಟನಾಗಿ ವೃತ್ತಿ ಆರಂಭಿಸಿದ ರತ್ನ, ತಮಿಳಿನ 'ದಾನಶೂರ ಕರ್ಣ' ಸಿನಿಮಾದಲ್ಲಿ ಋಷಿ ಕೇತು ಪಾತ್ರದಲ್ಲಿ ನಟಿಸಿದ್ದರು. ನಂತರ 1961ರಲ್ಲಿ ಬಿಡುಗಡೆ ಆದ 'ಚಕ್ರವರ್ತಿ ತಿರುಮಗಲ' ಮೂಲಕ ಸ್ವತಂತ್ರ್ಯ ಸಂಗೀತ ನಿರ್ದೇಶಕರಾದ ಜೀವರತ್ನ. 1963 'ಮನೆ ಕಟ್ಟಿ ನೋಡು' ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗ ಪ್ರವೇಶಿಸಿದರು.
ಕನ್ನಡದಲ್ಲಿ ನಮ್ಮ ಊರು, ಬಾಂಧವ್ಯ, ಕಪ್ಪು-ಬಿಳುಪು, ಭಲೇ ಜೋಡಿ, ಪೂರ್ಣಿಮಾ ಮೊದಲಾದ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದರು ಜೀವರತ್ನ ಅಲಿಯಾಸ್ ಆರ್.ರತ್ನ.
ವಯಸ್ಸಾದ ಅವರನ್ನು ಅವರ ಅಭಿಮಾನಿಯೇ ಬಹುವರ್ಷಗಳಿಂದ ಸಾಕುತ್ತಿದ್ದರು ಎಂಬುದು ವಿಶೇಷ. ಜೀವರತ್ನ ಅವರ ಅಭಿಮಾನಿಯಾದ ವೆಂಕಟರಾಮಯ್ಯ, ಜೀವರತ್ನರನ್ನು ಮಗುವಿನಂತೆ ನೋಡಿಕೊಂಡಿದ್ದರು. ಅಷ್ಟೇ ಅಲ್ಲದೆ, ಜೀವರತ್ನ ಹೆಸರಲ್ಲಿ ಸಂಗೀತ ಶಾಲೆಯೊಂದನ್ನು ಸಹ ಸ್ಥಾಪಿಸಿದ್ದರು.
ಇಳಿಯ ವಯಸ್ಸಿನಲ್ಲೂ ಹಾರ್ಮೊನಿಯಂ ನುಡಿಸುವುದು ಬಿಟ್ಟಿರಲಿಲ್ಲ ಎಂದು ಅವರ ಪರಿಚಯದವರು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಂಡಿದ್ದು, ಹಾರ್ಮೊನಿಯಂ ನುಡಿಸುತ್ತಾ ತಮ್ಮದೇ ಸಂಯೋಜನೆಯ ಹಾಡುಗಳನ್ನು ಹಾಡುತ್ತಿರುತ್ತಿದ್ದರಂತೆ ಜೀವರತ್ನ.
97 ವಯಸ್ಸಿನ ಜೀವರತ್ನ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಚೆನ್ನೈನಲ್ಲಿ ಅವರು ವಿಧಿವಶರಾಗಿದ್ದಾರೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm