ಬ್ರೇಕಿಂಗ್ ನ್ಯೂಸ್
11-01-21 11:45 am Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ರಚಿತಾ ರಾಮ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಮಾತ್ರ ವಲ್ಲದೇ ತೆಲುಗು ಚಿತ್ರರಂಗದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ಈ ನಡುವೆ ರಚಿತಾ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಲವ್ ಮಾಕ್ ಟೇಲ್ ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಲವ್ ಮಾಕ್ ಟೇಲ್ ಬಳಿಕ ಕೃಷ್ಣಗೆ ಬೇಡಿಕೆ ಜಾಸ್ತಿ ಆಗಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಯಕನಾಗಿ ನಟಿಸುವ ಜೊತೆಗೆ ಲವ್ ಮಾಕ್ ಟೇಲ್-2 ಸಿನಿಮಾದ ನಿರ್ದೇಶನದಲ್ಲೂ ಕೃಷ್ಣ ನಿರತರಾಗಿದ್ದಾರೆ.
ಈ ನಡುವೆ ರಚಿತಾ ರಾಮ್ ಜೊತೆ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿ ಅಚ್ಚರಿ ಮೂಡಿಸಿದೆ. ಮೊದಲ ಬಾರಿಗೆ ರಚಿತಾ ಮತ್ತು ಡಾರ್ಲಿಂಗ್ ಕೃಷ್ಣ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಅಂದಹಾಗೆ ಇಬ್ಬರನ್ನು ಒಟ್ಟಿಗೆ ಕರೆತರುತ್ತಿದ್ದಾರೆ. ನಿರ್ದೇಶಕ ದೀಪಕ್ ಗಂಗಾಧರ್. ದೀಪಕ್ ಗೆ ಇದು ಚೊಚ್ಚಲ ಸಿನಿಮಾ. ಪಕ್ಕ ಲವ್ ಸ್ಟೋರಿ ಸಿನಿಮಾ ಇದಾಗಿದ್ದು, ಇನ್ನು ಟೈಟಲ್ ಬಹಿರಂಗ ಪಡಿಸಿಲ್ಲ.

ರೊಮ್ಯಾಂಟಿಕ್ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ ಶ್ರೀಧರ್ ವಿ ಸಂಭ್ರಮ್. ಉಳಿದಂತೆ ಪಾತ್ರವರ್ಗ ಮತ್ತು ತಂತ್ರಜ್ಞರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಈ ಸಿನಿಮಾ ಏಪ್ರಿಲ್ ಅಥವಾ ಮಾರ್ಚ್ ತಿಂಗಳಿಂದ ಚಿತ್ರೀಕರಣ ಪ್ರಾರಂಭ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ. ಡಾರ್ಲಿಂಗ್ ಕೃಷ್ಣ ಸದ್ಯ ಶ್ರೀಕೃಷ್ಣ@ಜಿಮೇಲ್.ಕಾಮ್, MR.ಬ್ಯಾಚುಲರ್, ಶುಗರ್ ಫ್ಯಾಕ್ಟರಿ ಮತ್ತು ಲವ್ ಮಾಕ್ ಟೇಲ್-2ನಲ್ಲಿ ನಿರತರಾಗಿದ್ದಾರೆ. ಜನವರಿ 22ರಿಂದ ಶುಗರ್ ಫ್ಯಾಕ್ಟರಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸಿನಿಮಾಗಳ ಜೊತೆಗೆ ಕೃಷ್ಣ ಮದುವೆ ತಯಾರಿಯಲ್ಲಿದ್ದಾರೆ. ಫೆಬ್ರವರಿ 14ರಂದು ಡಾರ್ಲಿಂಗ್ ಕೃಷ್ಣ ಬಹುಕಾಲದ ಗೆಳತಿ, ನಟಿ ಮಿಲನಾ ನಾಗರಾಜ್ ಜೊತೆ ಹಸೆಮಣೆ ಏರುತ್ತಿದ್ದಾರೆ.
ಇನ್ನು ನಟಿ ರಚಿತಾ ರಾಮ್ ಬಳಿಯೂ ಸಾಲು ಸಾಲು ಸಿನಿಮಾಗಳಿವೆ. ಸದ್ಯ ರಚಿತಾ, ಪ್ರಜ್ವಲ್ ದೇವರಾಜ್ ಜೊತೆ ವೀರಂ ಸಿನಿಮಾದಲ್ಲಿ ನಿರತರಾಗಿದ್ದಾರೆ. ಮೊದಲ ಬಾರಿಗೆ ಪ್ರಜ್ವಲ್ ಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ. ಖಾದರು ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm