ಬ್ರೇಕಿಂಗ್ ನ್ಯೂಸ್
11-01-21 11:57 am Source: FILMIBEAT Manjunatha C ಸಿನಿಮಾ
ಚೆನ್ನೈ, ಜ.11: ರಾಜಕೀಯ ಪ್ರವೇಶಿಸುತ್ತೇನೆ ಎಂದು ಘೋಷಿಸಿದ್ದ ನಟ ರಜನೀಕಾಂತ್ ಆ ನಂತರ ಅನಾರೋಗ್ಯ ಕಾರಣ ನೀಡಿ ತಮ್ಮ ನಿರ್ಧಾರದಿಂದ ಹಿಂದೆ ಸರಿದರು. ಆದರೆ ರಜನೀಕಾಂತ್ ರಾಜಕೀಯ ಪ್ರವೇಶ ಮಾಡಲೇಬೇಕು, ಪಕ್ಷವೊಂದನ್ನು ಕಟ್ಟಲೇ ಬೇಕು ಎಂದು ಒತ್ತಾಯಿಸಿ ಇಂದು (ಜನವರಿ 10) ರಜನೀಕಾಂತ್ ಅಭಿಮಾನಿಗಳು, ಬೆಂಬಲಿಗರು ಬೃಹತ್ ಒತ್ತಾಯ ಜಾಥಾವನ್ನು ಚೆನ್ನೈನಲ್ಲಿ ನಡೆಸಿದರು.
ಪೊಲೀಸರು 200 ಮಂದಿಗೆ ಮಾತ್ರವೇ ಸ್ಥಳದಲ್ಲಿ ಸೇರಲು ಅವಕಾಶಕೊಟ್ಟಿದ್ದರು, ಆದರೆ 2000 ಕ್ಕೂ ಹೆಚ್ಚು ಮಂದಿ ಅಭಿಮಾನಿಗಳು ಸ್ಥಳದಲ್ಲಿ ಹಾಜರಿದ್ದು, ರಜನೀಕಾಂತ್ ಪರವಾಗಿ ಘೋಷಣೆಗಳನ್ನು ಕೂಗಿದರು. 'ಈಗ ಅಲ್ಲದಿದ್ದರೆ ಇನ್ನೆಂದಲೂ ಇಲ್ಲ', 'ಬಾ ತಲೈವಾ ಬಾ' ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದ ರಜನೀಕಾಂತ್ ಅಭಿಮಾನಿಗಳು ರಜನೀಕಾಂತ್ ಪೋಸ್ಟರ್ಗಳನ್ನು ಪ್ರದರ್ಶಿಸಿ, ರಜನೀಕಾಂತ್ ಮತ್ತೆ ರಾಜಕೀಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.
'ರಜನೀ ಮಕ್ಕಳ್ ಮಂಡ್ರಮ್' ನೀಡಿದ್ದ ಎಚ್ಚರಿಕೆಯ ಹೊರತಾಗಿಯೂ ಸಾಕಷ್ಟು ಮಂದಿ ಜಾಥಾದಲ್ಲಿ ಭಾಗವಹಿಸಿದ್ದರು. 'ಈ ರೀತಿಯ ಒತ್ತಾಯಗಳನ್ನು, ಪ್ರತಿಭಟನೆಗಳನ್ನು ಮಾಡುವುದರಿಂದ ರಜನೀಕಾಂತ್ ಮನಸ್ಸಿಗೆ ಬೇಸರವಾಗುತ್ತದೆ. ಜನರು ಯಾರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಡಿ' ಎಂದು ರಜನಿಕಾಂತ್ ಮಕ್ಕಳ್ ಮಂಡ್ರನ್ ಎಚ್ಚರಿಕೆ ನೀಡಿತ್ತು.

ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾದ ಒತ್ತಾಯ ಜಾಥಾದಲ್ಲಿ ರಜನೀಕಾಂತ್ ಹಾಡುಗಳು, ಡೈಲಾಗ್ಗಳನ್ನು ಪ್ರಸಾರ ಮಾಡಲಾಯಿತು. ನಟ ರಜನೀಕಾಂತ್ ಅವರು ರಾಜಕೀಯ ಪ್ರವೇಶ ಮಾಡುವುದಾಗಿ ಡಿಸೆಂಬರ್ ತಿಂಗಳ ಆರಂಭದಲ್ಲಿ ಹೇಳಿದ್ದರು.
ಡಿಸೆಂಬರ್ 31 ರಂದು ಪಕ್ಷದ ಹೆಸರು, ಲಾಂಛನ ಬಿಡುಗಡೆ ಮಾಡಿ, ಜನವರಿ ತಿಂಗಳಲ್ಲಿ ದೊಡ್ಡದಾಗಿ ಪಕ್ಷದ ಉದ್ಘಾಟನಾ ಸಮಾರಂಭ ಮಾಡಲಾಗುವುದು ಎಂದಿದ್ದರು. ಆದರೆ ಡಿಸೆಂಬರ್ 25 ರಂದು ಬೆಳಿಗ್ಗೆ ರಜನೀಕಾಂತ್ ಅವರ ಆರೋಗ್ಯದಲ್ಲಿ ಏರು-ಪೇರಾದ ಕಾರಣ ಅವರನ್ನು ಹೈದರಾಬಾದ್ನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಆ ನಂತರ ಡಿಸೆಂಬರ್ 29 ರಂದು ತಮ್ಮ ರಾಜಕೀಯ ಪ್ರವೇಶದ ನಿರ್ಧಾರವನ್ನು ರಜನೀಕಾಂತ್ ಹಿಂಪಡೆದರು.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm