ಬ್ರೇಕಿಂಗ್ ನ್ಯೂಸ್
11-01-21 11:57 am Source: FILMIBEAT Manjunatha C ಸಿನಿಮಾ
ಚೆನ್ನೈ, ಜ.11: ರಾಜಕೀಯ ಪ್ರವೇಶಿಸುತ್ತೇನೆ ಎಂದು ಘೋಷಿಸಿದ್ದ ನಟ ರಜನೀಕಾಂತ್ ಆ ನಂತರ ಅನಾರೋಗ್ಯ ಕಾರಣ ನೀಡಿ ತಮ್ಮ ನಿರ್ಧಾರದಿಂದ ಹಿಂದೆ ಸರಿದರು. ಆದರೆ ರಜನೀಕಾಂತ್ ರಾಜಕೀಯ ಪ್ರವೇಶ ಮಾಡಲೇಬೇಕು, ಪಕ್ಷವೊಂದನ್ನು ಕಟ್ಟಲೇ ಬೇಕು ಎಂದು ಒತ್ತಾಯಿಸಿ ಇಂದು (ಜನವರಿ 10) ರಜನೀಕಾಂತ್ ಅಭಿಮಾನಿಗಳು, ಬೆಂಬಲಿಗರು ಬೃಹತ್ ಒತ್ತಾಯ ಜಾಥಾವನ್ನು ಚೆನ್ನೈನಲ್ಲಿ ನಡೆಸಿದರು.
ಪೊಲೀಸರು 200 ಮಂದಿಗೆ ಮಾತ್ರವೇ ಸ್ಥಳದಲ್ಲಿ ಸೇರಲು ಅವಕಾಶಕೊಟ್ಟಿದ್ದರು, ಆದರೆ 2000 ಕ್ಕೂ ಹೆಚ್ಚು ಮಂದಿ ಅಭಿಮಾನಿಗಳು ಸ್ಥಳದಲ್ಲಿ ಹಾಜರಿದ್ದು, ರಜನೀಕಾಂತ್ ಪರವಾಗಿ ಘೋಷಣೆಗಳನ್ನು ಕೂಗಿದರು. 'ಈಗ ಅಲ್ಲದಿದ್ದರೆ ಇನ್ನೆಂದಲೂ ಇಲ್ಲ', 'ಬಾ ತಲೈವಾ ಬಾ' ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದ ರಜನೀಕಾಂತ್ ಅಭಿಮಾನಿಗಳು ರಜನೀಕಾಂತ್ ಪೋಸ್ಟರ್ಗಳನ್ನು ಪ್ರದರ್ಶಿಸಿ, ರಜನೀಕಾಂತ್ ಮತ್ತೆ ರಾಜಕೀಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.
'ರಜನೀ ಮಕ್ಕಳ್ ಮಂಡ್ರಮ್' ನೀಡಿದ್ದ ಎಚ್ಚರಿಕೆಯ ಹೊರತಾಗಿಯೂ ಸಾಕಷ್ಟು ಮಂದಿ ಜಾಥಾದಲ್ಲಿ ಭಾಗವಹಿಸಿದ್ದರು. 'ಈ ರೀತಿಯ ಒತ್ತಾಯಗಳನ್ನು, ಪ್ರತಿಭಟನೆಗಳನ್ನು ಮಾಡುವುದರಿಂದ ರಜನೀಕಾಂತ್ ಮನಸ್ಸಿಗೆ ಬೇಸರವಾಗುತ್ತದೆ. ಜನರು ಯಾರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಡಿ' ಎಂದು ರಜನಿಕಾಂತ್ ಮಕ್ಕಳ್ ಮಂಡ್ರನ್ ಎಚ್ಚರಿಕೆ ನೀಡಿತ್ತು.

ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾದ ಒತ್ತಾಯ ಜಾಥಾದಲ್ಲಿ ರಜನೀಕಾಂತ್ ಹಾಡುಗಳು, ಡೈಲಾಗ್ಗಳನ್ನು ಪ್ರಸಾರ ಮಾಡಲಾಯಿತು. ನಟ ರಜನೀಕಾಂತ್ ಅವರು ರಾಜಕೀಯ ಪ್ರವೇಶ ಮಾಡುವುದಾಗಿ ಡಿಸೆಂಬರ್ ತಿಂಗಳ ಆರಂಭದಲ್ಲಿ ಹೇಳಿದ್ದರು.
ಡಿಸೆಂಬರ್ 31 ರಂದು ಪಕ್ಷದ ಹೆಸರು, ಲಾಂಛನ ಬಿಡುಗಡೆ ಮಾಡಿ, ಜನವರಿ ತಿಂಗಳಲ್ಲಿ ದೊಡ್ಡದಾಗಿ ಪಕ್ಷದ ಉದ್ಘಾಟನಾ ಸಮಾರಂಭ ಮಾಡಲಾಗುವುದು ಎಂದಿದ್ದರು. ಆದರೆ ಡಿಸೆಂಬರ್ 25 ರಂದು ಬೆಳಿಗ್ಗೆ ರಜನೀಕಾಂತ್ ಅವರ ಆರೋಗ್ಯದಲ್ಲಿ ಏರು-ಪೇರಾದ ಕಾರಣ ಅವರನ್ನು ಹೈದರಾಬಾದ್ನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಆ ನಂತರ ಡಿಸೆಂಬರ್ 29 ರಂದು ತಮ್ಮ ರಾಜಕೀಯ ಪ್ರವೇಶದ ನಿರ್ಧಾರವನ್ನು ರಜನೀಕಾಂತ್ ಹಿಂಪಡೆದರು.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm