ಬ್ರೇಕಿಂಗ್ ನ್ಯೂಸ್
11-01-21 01:08 pm Source: FILMIBEAT Manjunatha C ಸಿನಿಮಾ
ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಕುರಿತು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿದ್ದು. ಸುಳ್ಳು ಸುದ್ದಿ ಪ್ರಕಟಿಸಿರುವ ಯೂಟ್ಯೂಬ್ ಚಾನೆಲ್ ಮೇಲೆ ಗರಂ ಆಗಿದ್ದಾರೆ ರಘು ದೀಕ್ಷಿತ್. 'ರಘು ದೀಕ್ಷಿತ್ ಆತ್ಮಹತ್ಯೆ, ಕಣ್ಣೀರಿನಲ್ಲಿ ಕನ್ನಡ ಚಿತ್ರರಂಗ, ಏನಾಯ್ತು?' ಎಂಬ ಹೆಡ್ಲೈನ್ ನೀಡಿ ಯೂಟ್ಯೂಬ್ ಚಾನೆಲ್ ಒಂದು ಸುದ್ದಿಯೊಂದನ್ನು ಪ್ರಕಟಿಸಿದೆ.
ಆದರೆ ವಿಡಿಯೋನಲ್ಲಿ 'ರಘು ದೀಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಹೇಳಿಲ್ಲ. ಬದಲಿಗೆ ರಘು ದೀಕ್ಷಿತ್ ಖಿನ್ನತೆಗೆ ಒಳಗಾಗಿದ್ದರು. ಈ ವಿಷಯವನ್ನು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಿದ್ದಾರೆ. ಆದರೆ ಹೆಡ್ಲೈನ್ ನಲ್ಲಿ ಮಾತ್ರ 'ರಘು ದೀಕ್ಷಿತ್ ಆತ್ಮಹತ್ಯೆ' ಎಂದು ದೊಡ್ಡದಾಗಿ ಹಾಕಿ ಓದುಗರು ದಾರಿ ತಪ್ಪುವಂತೆ ಮಾಡಿದ್ದಾರೆ.
ಯೂಟ್ಯೂಬ್ ಚಾನೆಲ್ನ ವಿಡಿಯೋದ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ರಘು ದೀಕ್ಷಿತ್, 'ಜೀವನದಲ್ಲಿ ಸಾಕಷ್ಟು ನೋಡಿದ್ದೇನೆ, ಆದರೆ ಇದು ಎಲ್ಲವನ್ನೂ ಮೀರಿಸಿದ್ದು' ಎಂದು ವ್ಯಂಗ್ಯ ಮಾಡಿದ್ದಾರೆ. ಜೊತೆಗೆ ಈ ಚಾನೆಲ್ ವಿರುದ್ಧ ದೂರು ನೀಡುವುದು ಹೇಗೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ.

'ಫಿಲ್ಮ್ ತಂತ್ರ24' ಹೆಸರಿನ ಯೂಟ್ಯೂಬ್ ಚಾನೆಲ್ನವರು ಈ ಸುದ್ದಿ ಪ್ರಕಟಿಸಿದ್ದಾರೆ. ರಘು ದೀಕ್ಷಿತ್ ಮಾತ್ರವೇ ಅಲ್ಲದೆ. ಇನ್ನೂ ಕೆಲವರ ಬಗ್ಗೆ ಸುಳ್ಳು ಸುದ್ದಿಗಳನ್ನು ಈ ಚಾನೆಲ್ ಪ್ರಕಟಿಸಿದೆ. ನಟಿ ಅಮೂಲ್ಯಗೆ ಅಪಘಾತವಾಗಿದೆ ಎಂಬ ಸುದ್ದಿಯನ್ನು ಸಹ ಈ ಯೂಟ್ಯೂಬ್ ಚಾನೆಲ್ ಪ್ರಕಟಿಸಿದೆ.
ನಟ ರಘು ದೀಕ್ಷಿತ್ ಇತ್ತೀಚೆಗೆ ನಿರೂಪಕಿ ಅನುಶ್ರೀಗೆ ಸಂದರ್ಶನವೊಂದನ್ನು ನೀಡಿದ್ದರು. ಸಂದರ್ಶನದಲ್ಲಿ ತಾವು ಖಿನ್ನತೆಗೆ ಒಳಗಾಗಿದ್ದುದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯವಹಿಸಿದ್ದಾಗಿ ಹೇಳಿದ್ದರು. ಇದನ್ನೇ ಇಟ್ಟುಕೊಂಡು ಈ ಯೂಟ್ಯೂಬ್ ಚಾನೆಲ್ ಹೀಗೆ ತಿರುಚಿದ, ದಾರಿ ತಪ್ಪಿಸುವ ಸುದ್ದಿಯನ್ನು ಪ್ರಕಟಿಸಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm