ಬ್ರೇಕಿಂಗ್ ನ್ಯೂಸ್
12-01-21 11:30 am Source: FILMIBEAT Bharath Kumar K ಸಿನಿಮಾ
ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಿರ್ದೇಶಕ ಎ.ಟಿ ರಘು ಅವರ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ ನಟ ಸುದೀಪ್. ಎ.ಟಿ ರಘು ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ ಸುದೀಪ್ ''ಧೈರ್ಯವಾಗಿರಿ, ನಿಮ್ಮ ಜೊತೆ ನಾವು ಇದ್ದೇವೆ, ನಮ್ಮಿಂದ ಆಗುವ ಸಹಾಯ ನಾವು ಖಂಡಿತಾ ಮಾಡುತ್ತೇವೆ'' ಎಂದು ಭರವಸೆ ನೀಡಿದ್ದಾರೆ. ಹಲವು ವರ್ಷಗಳಿಂದ ಕಿಡ್ನಿ ವೈಫಲ್ಯದಿಂದ ಬಳುತ್ತಿರುವ ಎಟಿ ರಘು ಪ್ರಸ್ತುತ ಡಯಾಲಿಸೀಸ್ ಚಿಕಿತ್ಸೆಯಲ್ಲಿದ್ದಾರೆ. ಹೃದಯ, ಕಣ್ಣಿನ ಶಸ್ತ್ರ ಚಿಕಿತ್ಸೆಯೂ ಆಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ತಮ್ಮ ಅಸಹಾಯಕತೆ ನೆನೆದು ಎಟಿ ರಘು ಅವರು ನೋವು ಪಡುತ್ತಿದ್ದರು.
ನಿಮ್ಮ ಜೊತೆ ನಾವು ಇದ್ದೇವೆ
ಅಂಬರೀಶ್ ಅವರು ಬದಕಿರುವವರೆಗೂ ಸಹಾಯ ಮಾಡ್ತಿದ್ರು. ಅಂಬರೀಶ್ ನಿಧನದ ನಂತ್ರ ಚಿತ್ರರಂಗದಿಂದ ಯಾವುದೇ ಸಹಾಯ ಸಿಕ್ಕಿಲ್ಲ. ಇದೀಗ, ಎಟಿ ರಘು ಅವರಿಗೆ ಫೋನ್ ಮಾಡಿ ಮಾತನಾಡಿದ ಸುದೀಪ್ ''ನಿಮ್ಮ ಜೊತೆ ನಾವು ಇದ್ದೇವೆ, ಧೈರ್ಯವಾಗಿರಿ, ನಾವು ಸಹಾಯ ಮಾಡುತ್ತೇವೆ'' ಎಂದು ಭರವಸೆ ನೀಡಿದ್ದಾರೆ.

ನಿಮ್ಮನ್ನು ದೊಡ್ಡ ಶಕ್ತಿಯಾಗಿ ಕಾಣುತ್ತಿದ್ದೇನೆ
ಸುದೀಪ್ ಅವರು ಫೋನ್ ಮೂಲಕ ಮಾತನಾಡಿದ ''ನಿಮ್ಮ ಜೊತೆ ನಾವು ಇದ್ದೇವೆ'' ಎಂದು ಭರವಸೆ ನೀಡಿದರು. ಅದಕ್ಕೆ ಧನ್ಯವಾದ ತಿಳಿಸಿದ ರಘು ಅವರು ''ನನಗೆ ದೊಡ್ಡ ಶಕ್ತಿಯಾಗಿದ್ದ ಅಂಬರೀಶ್ ಹೋಗ್ಬಿಟ್ರು. ಈಗ ನಿಮ್ಮನ್ನು ನಾನು ದೊಡ್ಡ ಶಕ್ತಿಯಾಗಿ ಕಾಣ್ತಿದ್ದೀನಿ. ಅಂಬರೀಶ್ ಅವರೇ ನಿಮ್ಮಿಂದ ಈ ಕೆಲಸ ಮಾಡ್ತಿದ್ದಾರೆ'' ಎಂದು ಧನ್ಯವಾದ ತಿಳಿಸಿದ್ದಾರೆ.

ವಾರಕ್ಕೆ ಮೂರು ಬಾರಿ ಡಯಾಲಿಸೀಸ್
ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಎಟಿ ರಘು ಅವರು ಸದ್ಯ ವಾರಕ್ಕೆ ಮೂರು ಬಾರಿ ಡಯಾಲಿಸೀಸ್ ಮಾಡಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗಷ್ಟೆ ಹೃದಯಕ್ಕೆ ಸಂಬಂಧಿಸಿದಂತೆ ಶಸ್ತ್ರ ಚಿಕಿತ್ಸೆ ಆಗಿದೆ, ಕಣ್ಣುಗಳಿಗೆ ಶಸ್ತ್ರ ಚಿಕಿತ್ಸೆ ಆಗಿದೆ.
ಅಂಬರೀಶ್ ಜೊತೆ 20ಕ್ಕೂ ಹೆಚ್ಚು ಸಿನಿಮಾ
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎ.ಟಿ.ರಘು ಕಳೆದ 4 ದಶಕಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಸುಮಾರು 20 ಸಿನಿಮಾದಲ್ಲಿ ಅಂಬರೀಶ್ ಅವರೇ ನಾಯಕರು. ಅಂಬರೀಶ್ ಗೆ 'ಮಂಡ್ಯದ ಗಂಡು' ಎಂಬ ಚಿತ್ರ ಮಾಡಿದ್ದೇ ಈ ನಿರ್ದೇಶಕ. ನಂತರ ಅಂಬರೀಶ್ ಮಂಡ್ಯದ ಗಂಡು ಅಂತಾನೆ ಗುರುತಿಸಿಕೊಂಡರು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ
2020ರಲ್ಲಿ ಎಟಿ ರಘು ಅವರ ಕೊಡುಗೆಯನ್ನು ಗುರುತಿಸಿದ ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಕನ್ನಡ, ಹಿಂದಿ, ಮಲಯಾಳಂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಎ.ಟಿ.ರಘು 1990ರಲ್ಲಿ 'ಅಜಯ್-ವಿಜಯ್' ಚಿತ್ರದ ಮೂಲಕ ಕನ್ನಡ ಇಂಡಸ್ಟ್ರಿ ಪ್ರವೇಶ ಮಾಡಿದ್ದರು. 'ಇನ್ಸ್ ಪೆಕ್ಟರ್ ಕ್ರಾಂತಿ ಕುಮಾರ್', 'ಪುಟ್ಟ ಹೆಂಡ್ತಿ', 'ಮೈಸೂರು ಜಾಣ', 'ಮಂಡ್ಯದ ಗಂಡು', ಮಿಡಿದ ಹೃದಯಗಳು', 'ಅಂತಿಮ ತೀರ್ಪು', 'ನ್ಯಾಯಕ್ಕಾಗಿ ನಾನು', 'ಪದ್ಮವ್ಯೂಹ', 'ಸೂರ್ಯೋದಯ' ಸೇರಿದಂತೆ ಹಲವು ಚಿತ್ರಗಳನ್ನ ನಿರ್ದೇಶನ ಮಾಡಿದ್ದರು.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm